AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್​ನಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ 45.09 ಲಕ್ಷ ಡೋಸ್ ಲಸಿಕೆ ನೀಡಿಕೆ ಭರವಸೆ

ಕೇಂದ್ರದ ಕೋಟಾದಿಂದ ರಾಜ್ಯಕ್ಕೆ 37.60 ಲಕ್ಷ ಡೋಸ್ ಕೊವಿಶೀಲ್ಡ್, 7.40 ಲಕ್ಷ ಡೋಸ್ ಕೊವ್ಯಾಕ್ಸಿನ್ ಬರಲಿದೆ. ಕರ್ನಾಟಕ ಸರ್ಕಾರದಿಂದ 10.86 ಲಕ್ಷ ಡೋಸ್ ಕೊವಿಶೀಲ್ಡ್, 2.84 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಸಿಕೆಗಳು ಲಸಿಕಾ ಕೇಂದ್ರಗಳಿಗೆ ತಲುಪಲಿದೆ.

ಜೂನ್​ನಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ 45.09 ಲಕ್ಷ ಡೋಸ್ ಲಸಿಕೆ ನೀಡಿಕೆ ಭರವಸೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 03, 2021 | 4:00 PM

Share

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಜೂನ್ ತಿಂಗಳಲ್ಲಿ 45.09 ಲಕ್ಷ ಡೋಸ್ ಲಸಿಕೆ ಉಚಿತವಾಗಿ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕರ್ನಾಟಕ ಸರ್ಕಾರವು ಲಸಿಕಾ ಕಂಪನಿಗಳಿಂದ ನೇರವಾಗಿ 13.71 ಲಕ್ಷ ಡೋಸ್ ಖರೀದಿ ಮಾಡಲಿದೆ. ಜೂನ್ ತಿಂಗಳಲ್ಲಿ ಒಟ್ಟು ಕರ್ನಾಟಕಕ್ಕೆ 58.80 ಲಕ್ಷ ಡೋಸ್ ಲಸಿಕೆ ಸಿಗಲಿದೆ. ಕೇಂದ್ರದ ಕೋಟಾದಿಂದ ರಾಜ್ಯಕ್ಕೆ 37.60 ಲಕ್ಷ ಡೋಸ್ ಕೊವಿಶೀಲ್ಡ್, 7.40 ಲಕ್ಷ ಡೋಸ್ ಕೊವ್ಯಾಕ್ಸಿನ್ ಬರಲಿದೆ. ಕರ್ನಾಟಕ ಸರ್ಕಾರದಿಂದ 10.86 ಲಕ್ಷ ಡೋಸ್ ಕೊವಿಶೀಲ್ಡ್, 2.84 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಸಿಕೆಗಳು ಲಸಿಕಾ ಕೇಂದ್ರಗಳಿಗೆ ತಲುಪಲಿದೆ.

ಕೇಂದ್ರ ಸರ್ಕಾರದಿಂದ ಲಸಿಕೆ ಪೂರೈಕೆಯಾಗುತ್ತಿರುವ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ‘ಜೂನ್ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ಪೂರೈಕೆಯಾಗಲಿರುವ 45 ಲಕ್ಷ ಡೋಸ್ ಲಸಿಕೆ ಮತ್ತು ರಾಜ್ಯ ಸರ್ಕಾರ ಖರೀದಿಸುತ್ತಿರುವ ಲಸಿಕೆ ಪೈಕಿ 13.7 ಲಕ್ಷ ಡೋಸ್ ಸೇರಿದಂತೆ ಒಟ್ಟು 58.71 ಲಕ್ಷ ಡೋಸ್ ಕೊರೊನಾ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಲಿದೆ. ಎಲ್ಲ ಕನ್ನಡಿಗರಿಗೂ ಲಸಿಕೆ ಒದಗಿಸಲು ಕೇಂದ್ರ ಸರ್ಕಾರ ನೀಡುತ್ತಿರುವ ನಿರಂತರ ಸಹಕಾರ ಶ್ಲಾಘನೀಯ’ ಎಂಸು ಸುಧಾಕರ್ ಹೇಳಿದ್ದಾರೆ.

‘ಭಾರತದಲ್ಲಿ ಅತ್ಯಂತ ವೇಗವಾಗಿ ಲಸಿಕೆ ನೀಡಲಾಗುತ್ತಿರುವ ನಗರಗಳಲ್ಲಿ ಬೆಂಗಳೂರು ಸೇರಿದೆ. ಈವರೆಗೆ 28.3 ಲಕ್ಷ ಜನರಿಗೆ ಒಂದು ಡೋಸ್​ ಆದರೂ ಲಸಿಕೆ ಸಿಕ್ಕಿದೆ. ನಗರದ ಶೇ 28.6ರಷ್ಟು ಜನರಿಗೆ ಲಸಿಕೆ ಸಿಕ್ಕಿದೆ’ ಎಂದು ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ನಿನ್ನೆ ರಾತ್ರಿ 11.45ಕ್ಕೆ ಗುಜರಾತಿನ ಜಾಮ್​ನಗರದಿಂದ 110.83 ಟನ್ ಆಕ್ಸಿಜನ್ ಹೊತ್ತ ರೈಲು ಬೆಂಗಳೂರಿಗೆ ಬಂದಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ‘ಸಕಾಲಕ್ಕೆ ಆಕ್ಸಿಜನ್ ಪೂರೈಸುವ ಮೂಲಕ ಈ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳ ಕೈಹಿಡಿದಿದೆ’ ಎಂದು ಸುಧಾಕರ್ ಹೇಳಿದ್ದಾರೆ.

(Karnataka will receive 45 lakh dose of covid vaccine in June month says health minister Dr K Sudhakar)

ಇದನ್ನೂ ಓದಿ: ಜೂನ್ ತಿಂಗಳಲ್ಲಿ ರಾಜ್ಯದ 60 ಲಕ್ಷಕ್ಕೂ ಹೆಚ್ಚು ಜನರಿಗೆ ಕೊವಿಡ್ ಲಸಿಕೆ ವಿತರಿಸಲು ಸಿದ್ಧತೆ: ಸಿಎಂ ಯಡಿಯೂರಪ್ಪ

ಇದನ್ನೂ ಓದಿ: ಸೆರಮ್, ಭಾರತ್ ಬಯೋಟೆಕ್ ನಂತರ ಕೊವಿಡ್ ಲಸಿಕೆ ತಯಾರಿಸಲಿದೆ ಬಯೋಲಾಜಿಕಲ್ ಇ; ಹೇಗಿದೆ ಸಿದ್ಧತೆ?

Published On - 3:56 pm, Thu, 3 June 21

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ