AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್​ನಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ 45.09 ಲಕ್ಷ ಡೋಸ್ ಲಸಿಕೆ ನೀಡಿಕೆ ಭರವಸೆ

ಕೇಂದ್ರದ ಕೋಟಾದಿಂದ ರಾಜ್ಯಕ್ಕೆ 37.60 ಲಕ್ಷ ಡೋಸ್ ಕೊವಿಶೀಲ್ಡ್, 7.40 ಲಕ್ಷ ಡೋಸ್ ಕೊವ್ಯಾಕ್ಸಿನ್ ಬರಲಿದೆ. ಕರ್ನಾಟಕ ಸರ್ಕಾರದಿಂದ 10.86 ಲಕ್ಷ ಡೋಸ್ ಕೊವಿಶೀಲ್ಡ್, 2.84 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಸಿಕೆಗಳು ಲಸಿಕಾ ಕೇಂದ್ರಗಳಿಗೆ ತಲುಪಲಿದೆ.

ಜೂನ್​ನಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ 45.09 ಲಕ್ಷ ಡೋಸ್ ಲಸಿಕೆ ನೀಡಿಕೆ ಭರವಸೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 03, 2021 | 4:00 PM

Share

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಜೂನ್ ತಿಂಗಳಲ್ಲಿ 45.09 ಲಕ್ಷ ಡೋಸ್ ಲಸಿಕೆ ಉಚಿತವಾಗಿ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕರ್ನಾಟಕ ಸರ್ಕಾರವು ಲಸಿಕಾ ಕಂಪನಿಗಳಿಂದ ನೇರವಾಗಿ 13.71 ಲಕ್ಷ ಡೋಸ್ ಖರೀದಿ ಮಾಡಲಿದೆ. ಜೂನ್ ತಿಂಗಳಲ್ಲಿ ಒಟ್ಟು ಕರ್ನಾಟಕಕ್ಕೆ 58.80 ಲಕ್ಷ ಡೋಸ್ ಲಸಿಕೆ ಸಿಗಲಿದೆ. ಕೇಂದ್ರದ ಕೋಟಾದಿಂದ ರಾಜ್ಯಕ್ಕೆ 37.60 ಲಕ್ಷ ಡೋಸ್ ಕೊವಿಶೀಲ್ಡ್, 7.40 ಲಕ್ಷ ಡೋಸ್ ಕೊವ್ಯಾಕ್ಸಿನ್ ಬರಲಿದೆ. ಕರ್ನಾಟಕ ಸರ್ಕಾರದಿಂದ 10.86 ಲಕ್ಷ ಡೋಸ್ ಕೊವಿಶೀಲ್ಡ್, 2.84 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಸಿಕೆಗಳು ಲಸಿಕಾ ಕೇಂದ್ರಗಳಿಗೆ ತಲುಪಲಿದೆ.

ಕೇಂದ್ರ ಸರ್ಕಾರದಿಂದ ಲಸಿಕೆ ಪೂರೈಕೆಯಾಗುತ್ತಿರುವ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ‘ಜೂನ್ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ ಪೂರೈಕೆಯಾಗಲಿರುವ 45 ಲಕ್ಷ ಡೋಸ್ ಲಸಿಕೆ ಮತ್ತು ರಾಜ್ಯ ಸರ್ಕಾರ ಖರೀದಿಸುತ್ತಿರುವ ಲಸಿಕೆ ಪೈಕಿ 13.7 ಲಕ್ಷ ಡೋಸ್ ಸೇರಿದಂತೆ ಒಟ್ಟು 58.71 ಲಕ್ಷ ಡೋಸ್ ಕೊರೊನಾ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಲಿದೆ. ಎಲ್ಲ ಕನ್ನಡಿಗರಿಗೂ ಲಸಿಕೆ ಒದಗಿಸಲು ಕೇಂದ್ರ ಸರ್ಕಾರ ನೀಡುತ್ತಿರುವ ನಿರಂತರ ಸಹಕಾರ ಶ್ಲಾಘನೀಯ’ ಎಂಸು ಸುಧಾಕರ್ ಹೇಳಿದ್ದಾರೆ.

‘ಭಾರತದಲ್ಲಿ ಅತ್ಯಂತ ವೇಗವಾಗಿ ಲಸಿಕೆ ನೀಡಲಾಗುತ್ತಿರುವ ನಗರಗಳಲ್ಲಿ ಬೆಂಗಳೂರು ಸೇರಿದೆ. ಈವರೆಗೆ 28.3 ಲಕ್ಷ ಜನರಿಗೆ ಒಂದು ಡೋಸ್​ ಆದರೂ ಲಸಿಕೆ ಸಿಕ್ಕಿದೆ. ನಗರದ ಶೇ 28.6ರಷ್ಟು ಜನರಿಗೆ ಲಸಿಕೆ ಸಿಕ್ಕಿದೆ’ ಎಂದು ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ನಿನ್ನೆ ರಾತ್ರಿ 11.45ಕ್ಕೆ ಗುಜರಾತಿನ ಜಾಮ್​ನಗರದಿಂದ 110.83 ಟನ್ ಆಕ್ಸಿಜನ್ ಹೊತ್ತ ರೈಲು ಬೆಂಗಳೂರಿಗೆ ಬಂದಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ‘ಸಕಾಲಕ್ಕೆ ಆಕ್ಸಿಜನ್ ಪೂರೈಸುವ ಮೂಲಕ ಈ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳ ಕೈಹಿಡಿದಿದೆ’ ಎಂದು ಸುಧಾಕರ್ ಹೇಳಿದ್ದಾರೆ.

(Karnataka will receive 45 lakh dose of covid vaccine in June month says health minister Dr K Sudhakar)

ಇದನ್ನೂ ಓದಿ: ಜೂನ್ ತಿಂಗಳಲ್ಲಿ ರಾಜ್ಯದ 60 ಲಕ್ಷಕ್ಕೂ ಹೆಚ್ಚು ಜನರಿಗೆ ಕೊವಿಡ್ ಲಸಿಕೆ ವಿತರಿಸಲು ಸಿದ್ಧತೆ: ಸಿಎಂ ಯಡಿಯೂರಪ್ಪ

ಇದನ್ನೂ ಓದಿ: ಸೆರಮ್, ಭಾರತ್ ಬಯೋಟೆಕ್ ನಂತರ ಕೊವಿಡ್ ಲಸಿಕೆ ತಯಾರಿಸಲಿದೆ ಬಯೋಲಾಜಿಕಲ್ ಇ; ಹೇಗಿದೆ ಸಿದ್ಧತೆ?

Published On - 3:56 pm, Thu, 3 June 21

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು