AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Update: ತಾಪಮಾನ ಇಳಿಕೆ, ಮೈನಡುಗಿಸುವ ಚಳಿ; ನಗರವಾರು ವಿವರ ಇಲ್ಲಿದೆ

ಕರ್ನಾಟಕದಲ್ಲಿ ಚಳಿಗಾಲ ಆರಂಭವಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ತಾಪಮಾನದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ ದಿನಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್ ತಾಪಮಾನ ಇಳಿಕೆಯಾಗುವುದಾಗಿ ಭವಿಷ್ಯ ನುಡಿದಿದೆ. ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗುವ ಸಾಧ್ಯತೆಯಿದೆ. ನವೆಂಬರ್ 26 ಮತ್ತು 27 ರಂದು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯೂ ಇದೆ.

Karnataka Weather Update: ತಾಪಮಾನ ಇಳಿಕೆ, ಮೈನಡುಗಿಸುವ ಚಳಿ; ನಗರವಾರು ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Nov 22, 2024 | 7:48 AM

Share

ಚಳಿಗಾಲ ಆರಂಭವಾಗಿದೆ. ಕರ್ನಾಟಕದ ವಿವಿಧಡೆ ಚಳಿ ಜೋರಾಗಿದೆ. ಡಿಸೆಂಬರ್​ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ. ವಾಡಿಕೆಗಿಂತ 2 ರಿಂದ 3 ಡಿಗ್ರಿಯಷ್ಟು ​ನಷ್ಟು ಉಷ್ಣಾಂಶ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ನ.22) ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಂಟಿಗ್ರೆಡ್​ಗಿಂತ ಕಳೆಗೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್​, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಕಲಬುರಗಿ ಕೆಲವು ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್​ವರಗೂ ಇಳಿಕೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ಹೇಳಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಶುಕ್ರವಾರ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ, ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಇನ್ನು, ಮಂಗಳೂರಿನಲ್ಲಿ ಗರಿಷ್ಠ 33, ಕನಿಷ್ಠ 24, ಶಿವಮೊಗ್ಗದಲ್ಲಿ ಗರಿಷ್ಠ 31 ಮತ್ತು ಕನಿಷ್ಠ 16, ಬೆಳಗಾವಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16, ಮೈಸೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್​ನಷ್ಟು ತಪಾಮಾನ ವರದಿಯಾಗಲಿದೆ.

ಕಳೆದ 24 ಗಂಟೆಯಲ್ಲಿ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 35.5 ಡಿಗ್ರಿ ಸೆಲ್ಸಿಯಸ್​ ಮತ್ತು ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 12.2 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ರಾಯಚೂರು, ಗದಗ, ಬದಾಮಿ ಮತ್ತು ಬಾಗಲಕೋಟೆ, ಧಾರವಾಡ, ಕಲಬುರಗಿ, ಬೆಳಗಾವಿ ಮತ್ತು ಬೆಂಗಳೂರು ಎಲೆಕ್ಟ್ರಾನಿಕ್​ ಸಿಟಿಯಲ್ಲಿ 15 ಡಿಗ್ರಿ ಸೆಲ್ಸಿಯಸ್​ಗಿಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಬೆಳಗಿನ ಜಾಔ ಮಂಜು ಅಥವಾ ಇಬ್ಬನಿ ಬಿದ್ದಿದೆ. ಇನ್ನು ನವೆಂಬರ್​ 26 ಮತ್ತು 27 ರಂದು ದಕ್ಷಿಣ ಒಳನಾಡಿನ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ