AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಕಲಾಪ ನಿಗದಿ; ಮಂಗಳವಾರದಿಂದ ಪುನರಾರಂಭಗೊಳ್ಳಲಿದೆ ಅಧಿವೇಶನ

ಶುಕ್ರವಾರ ಸರ್ಕಾರ ವಿಧಾನಪರಿಷತ್​ನ ಕಾರ್ಯದರ್ಶಿಗೆ ಪತ್ರ ಬರೆದಿತ್ತು. ಈ ಪತ್ರದಲ್ಲಿ ಪರಿಷತ್​ ಕಲಾಪವನ್ನು ಡಿಸೆಂಬರ್ 15ರಿಂದ ಪುನರಾರಂಭಿಸಲು ನಿರ್ದೇಶಿಸಿತ್ತು.

ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಕಲಾಪ ನಿಗದಿ; ಮಂಗಳವಾರದಿಂದ ಪುನರಾರಂಭಗೊಳ್ಳಲಿದೆ ಅಧಿವೇಶನ
ವಿಧಾನಸೌಧ
ರಾಜೇಶ್ ದುಗ್ಗುಮನೆ
|

Updated on: Dec 12, 2020 | 6:37 PM

Share

ಬೆಂಗಳೂರು: ಪರಿಷತ್​ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಆದ ಬೆನ್ನಲ್ಲೇ, ಡಿಸೆಂಬರ್ 15ರಂದು ಪರಿಷತ್ ಅಧಿವೇಶನ ಕರೆಯುವಂತೆ ವಿಧಾನ ಪರಿಷತ್ ಕಾರ್ಯದರ್ಶಿಗೆ ಸರ್ಕಾರ ಪತ್ರ ಬರೆದಿತ್ತು. ಈ ಪತ್ರದ ನಿರ್ದೇಶನದಂತೆ ಮಂಗಳವಾರದಿಂದ ಕಲಾಪ ಆರಂಭಗೊಳ್ಳಲಿದೆ.

ಡಿಸೆಂಬರ್​ 10ರಂದು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 (ಗೋಹತ್ಯೆ ನಿಷೇಧ ಕಾನೂನು) ಮಾಡಲು ಬಿಜೆಪಿ ಮುಂದಾಗಿತ್ತು. ಆದರೆ, ಪಶು ಸಂಗೋಪನಾ ಸಚಿವರು ಕಲಾಪದಲ್ಲಿ ಹಾಜರಿಲ್ಲ ಎಂಬ ನೆಪ ಹೇಳಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ವಿಧೇಯಕ ಮಂಡನೆಗೆ ಅವಕಾಶ ನೀಡಲಿಲ್ಲ. ವಿಧೇಯಕ ಮಂಡನೆಯಾಗದೇ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿತ್ತು.

ಇದಾದ ಬೆನ್ನಲ್ಲೇ ಶುಕ್ರವಾರ ಸರ್ಕಾರ ವಿಧಾನಪರಿಷತ್​ನ ಕಾರ್ಯದರ್ಶಿಗೆ ಪತ್ರ ಬರೆದಿತ್ತು. ಈ ಪತ್ರದಲ್ಲಿ ಪರಿಷತ್​ ಕಲಾಪವನ್ನು ಡಿಸೆಂಬರ್ 15ರಿಂದ ಪುನರಾರಂಭಿಸಲು ನಿರ್ದೇಶಿಸಿತ್ತು. ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಕಲಾಪ ನಿಗದಿಗಿಯಾದೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಪರಿಷತ್​ ಕಲಾಪ ಪುನರಾರಂಭಗೊಳ್ಳಲಿದೆ.

ಮತ್ತೆ ಪರಿಷತ್​ ಕಲಾಪ ಆರಂಭಕ್ಕೆ ಕಾರಣವೇನು? ವಿಧಾನಸಭೆಯಲ್ಲಿ (ಕೆಳ ಮನೆ ) ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆಗೆ ಅನುಮೋದನೆ ದೊರೆತಿದೆ. ಅದೇ ರೀತಿ  ವಿಧಾನ ಪರಿಷತ್​ನಲ್ಲೂ​ (ಮೇಲ್ಮನೆ) ಗೋ ಹತ್ಯೆ ನಿಷೇಧಕ್ಕೆ ಅನುಮೋದನೆ ಪಡೆದುಕೊಳ್ಳುವ ತರಾತುರಿ ಬಿಜೆಪಿಯದ್ದು. ಆದರೆ, ಇದು ಬಿಜೆಪಿಗೆ ಅಷ್ಟು ಸುಲಭವಾಗಿಲ್ಲ. ಏಕೆಂದರೆ, ವಿಧಾನ ಪರಿಷತ್​ನಲ್ಲಿ ಬಿಜೆಪಿ 31, ಕಾಂಗ್ರೆಸ್​ 28 ಹಾಗೂ ಜೆಡಿಎಸ್​ 14 ಸ್ಥಾನಗಳನ್ನು ಹೊಂದಿದೆ. ಒಂದೊಮ್ಮೆ ಜೆಡಿಎಸ್​ ಅಧಿವೇಶನದಿಂದ ಹೊರ ನಡೆದರೆ ಬಿಜೆಪಿಗೆ ಲಾಭದಾಯಕವಾಗಲಿದೆ. ಆದರೆ, ಇಂದು ಮಾಧ್ಯಮದ ಜೊತೆ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್.​ಡಿ. ಕುಮಾರಸ್ವಾಮಿ, ಗೋ ಮಾತೆ ಹೆಸರಲ್ಲಿ ಬಿಜೆಪಿಗೆ ಮತ ಪಡೆಯಬೇಕಿದೆ ಎಂದಿದ್ದರು. ಹೀಗಾಗಿ, ಜೆಡಿಎಸ್​ ಇದಕ್ಕೆ ವಿರೋಧ ವ್ಯಕ್ತಪಡಿಸೋದು ಬಹುತೇಕ ಖಚಿತವಾಗಿದೆ.

ಒಂದೊಮ್ಮೆ, ಈ ವಿಚಾರದಲ್ಲಿ ಜೆಡಿಎಸ್​​-ಕಾಂಗ್ರೆಸ್​ ಒಂದಾದರೆ, ಗೋ ಹತ್ಯೆ ನಿಷೇಧ ವಿಧೇಯಕ ಪಾಸಾಗುವುದಿಲ್ಲ. ಹಾಗಾದಾಗ, ಈ ವೀಧೇಯಕವನ್ನು ಮತ್ತೆ ಕೆಳಮನೆಗೆ ತೆಗೆದುಕೊಂಡು ಹೋಗಿ ಒಪ್ಪಿಗೆ ಪಡೆಯಬಹುದು.

ಇನ್ನು, ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಸಾಧ್ಯತೆ ಇದೆ. ಹೀಗಾದಲ್ಲಿ, ಜೆಡಿಎಸ್​ ಕೂಡ ಇದಕ್ಕೆ ಬೆಂಬಲ ಸೂಚಿಸಲಿದೆ. ಈ ಕಾರಣಕ್ಕೆ ಬಿಜೆಪಿ ಮತ್ತೆ ಪರಿಷತ್​ ಅಧಿವೇಶನ ಕರೆಯುವಂತೆ ಸೂಚನೆ ನೀಡಿದೆ ಎನ್ನುವ ಮಾತು ಕೇಳಿ ಬಂದಿದೆ.

ಡಿ.15ರಂದು ಪರಿಷತ್ ಅಧಿವೇಶನ ಕರೆಯುವಂತೆ ವಿಧಾನ ಪರಿಷತ್ ಕಾರ್ಯದರ್ಶಿಗೆ ಸರ್ಕಾರ ಪತ್ರ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!