AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಕಲಾಪ ನಿಗದಿ; ಮಂಗಳವಾರದಿಂದ ಪುನರಾರಂಭಗೊಳ್ಳಲಿದೆ ಅಧಿವೇಶನ

ಶುಕ್ರವಾರ ಸರ್ಕಾರ ವಿಧಾನಪರಿಷತ್​ನ ಕಾರ್ಯದರ್ಶಿಗೆ ಪತ್ರ ಬರೆದಿತ್ತು. ಈ ಪತ್ರದಲ್ಲಿ ಪರಿಷತ್​ ಕಲಾಪವನ್ನು ಡಿಸೆಂಬರ್ 15ರಿಂದ ಪುನರಾರಂಭಿಸಲು ನಿರ್ದೇಶಿಸಿತ್ತು.

ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಕಲಾಪ ನಿಗದಿ; ಮಂಗಳವಾರದಿಂದ ಪುನರಾರಂಭಗೊಳ್ಳಲಿದೆ ಅಧಿವೇಶನ
ವಿಧಾನಸೌಧ
ರಾಜೇಶ್ ದುಗ್ಗುಮನೆ
|

Updated on: Dec 12, 2020 | 6:37 PM

Share

ಬೆಂಗಳೂರು: ಪರಿಷತ್​ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಆದ ಬೆನ್ನಲ್ಲೇ, ಡಿಸೆಂಬರ್ 15ರಂದು ಪರಿಷತ್ ಅಧಿವೇಶನ ಕರೆಯುವಂತೆ ವಿಧಾನ ಪರಿಷತ್ ಕಾರ್ಯದರ್ಶಿಗೆ ಸರ್ಕಾರ ಪತ್ರ ಬರೆದಿತ್ತು. ಈ ಪತ್ರದ ನಿರ್ದೇಶನದಂತೆ ಮಂಗಳವಾರದಿಂದ ಕಲಾಪ ಆರಂಭಗೊಳ್ಳಲಿದೆ.

ಡಿಸೆಂಬರ್​ 10ರಂದು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 (ಗೋಹತ್ಯೆ ನಿಷೇಧ ಕಾನೂನು) ಮಾಡಲು ಬಿಜೆಪಿ ಮುಂದಾಗಿತ್ತು. ಆದರೆ, ಪಶು ಸಂಗೋಪನಾ ಸಚಿವರು ಕಲಾಪದಲ್ಲಿ ಹಾಜರಿಲ್ಲ ಎಂಬ ನೆಪ ಹೇಳಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ವಿಧೇಯಕ ಮಂಡನೆಗೆ ಅವಕಾಶ ನೀಡಲಿಲ್ಲ. ವಿಧೇಯಕ ಮಂಡನೆಯಾಗದೇ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿತ್ತು.

ಇದಾದ ಬೆನ್ನಲ್ಲೇ ಶುಕ್ರವಾರ ಸರ್ಕಾರ ವಿಧಾನಪರಿಷತ್​ನ ಕಾರ್ಯದರ್ಶಿಗೆ ಪತ್ರ ಬರೆದಿತ್ತು. ಈ ಪತ್ರದಲ್ಲಿ ಪರಿಷತ್​ ಕಲಾಪವನ್ನು ಡಿಸೆಂಬರ್ 15ರಿಂದ ಪುನರಾರಂಭಿಸಲು ನಿರ್ದೇಶಿಸಿತ್ತು. ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಕಲಾಪ ನಿಗದಿಗಿಯಾದೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಪರಿಷತ್​ ಕಲಾಪ ಪುನರಾರಂಭಗೊಳ್ಳಲಿದೆ.

ಮತ್ತೆ ಪರಿಷತ್​ ಕಲಾಪ ಆರಂಭಕ್ಕೆ ಕಾರಣವೇನು? ವಿಧಾನಸಭೆಯಲ್ಲಿ (ಕೆಳ ಮನೆ ) ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆಗೆ ಅನುಮೋದನೆ ದೊರೆತಿದೆ. ಅದೇ ರೀತಿ  ವಿಧಾನ ಪರಿಷತ್​ನಲ್ಲೂ​ (ಮೇಲ್ಮನೆ) ಗೋ ಹತ್ಯೆ ನಿಷೇಧಕ್ಕೆ ಅನುಮೋದನೆ ಪಡೆದುಕೊಳ್ಳುವ ತರಾತುರಿ ಬಿಜೆಪಿಯದ್ದು. ಆದರೆ, ಇದು ಬಿಜೆಪಿಗೆ ಅಷ್ಟು ಸುಲಭವಾಗಿಲ್ಲ. ಏಕೆಂದರೆ, ವಿಧಾನ ಪರಿಷತ್​ನಲ್ಲಿ ಬಿಜೆಪಿ 31, ಕಾಂಗ್ರೆಸ್​ 28 ಹಾಗೂ ಜೆಡಿಎಸ್​ 14 ಸ್ಥಾನಗಳನ್ನು ಹೊಂದಿದೆ. ಒಂದೊಮ್ಮೆ ಜೆಡಿಎಸ್​ ಅಧಿವೇಶನದಿಂದ ಹೊರ ನಡೆದರೆ ಬಿಜೆಪಿಗೆ ಲಾಭದಾಯಕವಾಗಲಿದೆ. ಆದರೆ, ಇಂದು ಮಾಧ್ಯಮದ ಜೊತೆ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್.​ಡಿ. ಕುಮಾರಸ್ವಾಮಿ, ಗೋ ಮಾತೆ ಹೆಸರಲ್ಲಿ ಬಿಜೆಪಿಗೆ ಮತ ಪಡೆಯಬೇಕಿದೆ ಎಂದಿದ್ದರು. ಹೀಗಾಗಿ, ಜೆಡಿಎಸ್​ ಇದಕ್ಕೆ ವಿರೋಧ ವ್ಯಕ್ತಪಡಿಸೋದು ಬಹುತೇಕ ಖಚಿತವಾಗಿದೆ.

ಒಂದೊಮ್ಮೆ, ಈ ವಿಚಾರದಲ್ಲಿ ಜೆಡಿಎಸ್​​-ಕಾಂಗ್ರೆಸ್​ ಒಂದಾದರೆ, ಗೋ ಹತ್ಯೆ ನಿಷೇಧ ವಿಧೇಯಕ ಪಾಸಾಗುವುದಿಲ್ಲ. ಹಾಗಾದಾಗ, ಈ ವೀಧೇಯಕವನ್ನು ಮತ್ತೆ ಕೆಳಮನೆಗೆ ತೆಗೆದುಕೊಂಡು ಹೋಗಿ ಒಪ್ಪಿಗೆ ಪಡೆಯಬಹುದು.

ಇನ್ನು, ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಸಾಧ್ಯತೆ ಇದೆ. ಹೀಗಾದಲ್ಲಿ, ಜೆಡಿಎಸ್​ ಕೂಡ ಇದಕ್ಕೆ ಬೆಂಬಲ ಸೂಚಿಸಲಿದೆ. ಈ ಕಾರಣಕ್ಕೆ ಬಿಜೆಪಿ ಮತ್ತೆ ಪರಿಷತ್​ ಅಧಿವೇಶನ ಕರೆಯುವಂತೆ ಸೂಚನೆ ನೀಡಿದೆ ಎನ್ನುವ ಮಾತು ಕೇಳಿ ಬಂದಿದೆ.

ಡಿ.15ರಂದು ಪರಿಷತ್ ಅಧಿವೇಶನ ಕರೆಯುವಂತೆ ವಿಧಾನ ಪರಿಷತ್ ಕಾರ್ಯದರ್ಶಿಗೆ ಸರ್ಕಾರ ಪತ್ರ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?