ತೀವ್ರ ಸ್ವರೂಪ ಪಡೆದ ಕರ್ನಾಟಕ ಯೂತ್ ಕಾಂಗ್ರೆಸ್​ ಗಲಾಟೆ: ಅಧ್ಯಕ್ಷ ವಿರುದ್ಧ ಗಂಭೀರ ಆರೋಪ

ಕರ್ನಾಟಕ ಯುವ ಕಾಂಗ್ರೆಸ್​​​​​ನಲ್ಲಿ ರಾಜಕೀಯ ಬೆಳವಣಿಗೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳಿಗೆ ಕೊಕ್ ಕೊಟ್ಟ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಎರಡು ಗುಂಪುಗಳ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.ಇದರ ಮಧ್ಯೆ ಅಮಾನತುಗೊಂಡಿರುವ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ತೀವ್ರ ಸ್ವರೂಪ ಪಡೆದ ಕರ್ನಾಟಕ ಯೂತ್ ಕಾಂಗ್ರೆಸ್​ ಗಲಾಟೆ: ಅಧ್ಯಕ್ಷ ವಿರುದ್ಧ ಗಂಭೀರ ಆರೋಪ
Manjunath Gowda And Deepika Reddy
Edited By:

Updated on: May 18, 2026 | 3:44 PM

ಬೆಂಗಳೂರು, (ಮೇ 18): ಕರ್ನಾಟಕ ಯುವ ಕಾಂಗ್ರೆಸ್​​​ನಲ್ಲಿ (Karnataka Youth Congress) ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳನ್ನ ವಜಾ ಮಾಡಿರುವುದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಪರಸ್ಪರ ಕೈ- ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಹೌದು…ಕೆಪಿಸಿಸಿ (KPCC) ಕಚೇರಿಯಲ್ಲಿಂದು ನೀಟ್​​​ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಭಟನೆ ನಡೆಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ (Manjunath Gowda) ಹಾಗೂ ಅಮಾನತುಗೊಂಡಿರುವ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರ ನಡುವೆ ತೀವ್ರ ವಾಗ್ವಾದ, ತಳ್ಳಾಟ-ನೂಕಾಟ ನಡೆದು ಕೊನೆಗೆ ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಇದರ ಮಧ್ಯೆ ದೀಪಿಕಾ ರೆಡ್ಡಿ (Deepika Reddy) ಅವರು ಪ್ರತಿಕ್ರಿಯಿಸಿದ್ದು, ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು ಎಂದು ಅಧ್ಯಕ್ಷ ಎಚ್.ಎಸ್.ಮಂಜುನಾಥ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

  • ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ್ ವಿರುದ್ಧ ಗಂಭೀರ ಆರೋಪ.
  • ಪ್ರೆಸ್‌ನೋಟ್ ರಿಲೀಸ್ ಮಾಡಿದ ಆರೋಪಿಸಿದ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ
  • ಹುದ್ದೆ ತಡೆಹಿಡಿದಿದ್ದು ಕಾನೂನುಬಾಹಿರ ಹಾಗೂ ಪ್ರತೀಕಾರದ ಕ್ರಮ
  • ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು ಎಂದು ಆರೋಪಿಸಿದ ದೀಪಿಕಾ ರೆಡ್ಡಿ

ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು

ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಲಾಟೆ ಬಳಿಕ ದೀಪಿಕಾ ರೆಡ್ಡಿ ಅವರು ಪ್ರೆಸ್‌ನೋಟ್ ರಿಲೀಸ್ ಮಾಡಿದ್ದು, ಹುದ್ದೆ ತಡೆಹಿಡಿದಿದ್ದು ಕಾನೂನುಬಾಹಿರ ಹಾಗೂ ಪ್ರತೀಕಾರದ ಕ್ರಮ. ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು. ಸ್ತ್ರೀ ದ್ವೇಷದ ಪಿತೂರಿ ಮತ್ತು ಸೇಡಿನ ರಾಜಕೀಯಕ್ಕೆ ಮೌನವಾಗುವುದಿಲ್ಲ. ಕಾಂಗ್ರೆಸ್ ಪಕ್ಷ ಹಾಗೂ ಹೈಕಮಾಂಡ್ ಮೇಲಿನ ನಿಷ್ಠೆ ಅಚಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ನೋಡಿ: ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ: ಕಾರಣ ಇಲ್ಲಿದೆ

ಪಿತೂರಿ ಮತ್ತು ಮಾನಸಿಕ ಕಿರುಕುಳ

ಯುವ ಕಾಂಗ್ರೆಸ್ ಚುನಾವಣೆಯಲ್ಲಿ 2.95 ಲಕ್ಷ ಮತಗಳ ಪಡೆದಿದ್ದೇನೆ. ದೇಶದಲ್ಲೇ ಅತಿ ಹೆಚ್ಚು ಮತ ಪಡೆದ ಮಹಿಳಾ ಅಭ್ಯರ್ಥಿಗಳಲ್ಲಿ ನಾನು ಒಬ್ಬಳು. ಪುರುಷ ಪ್ರಾಬಲ್ಯದ ರಾಜಕೀಯದಲ್ಲಿ ಅವರ ವಿರುದ್ಧ ಹೋರಾಟ ನಡೆಸಿದ್ದೇನೆ. ಚುನಾವಣೆಯ ಬಳಿಕವೂ ಪಕ್ಷ ಸಂಘಟನೆಗಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ. ಎಚ್.ಎಸ್. ಮಂಜುನಾಥ್ ಅಭದ್ರತೆ ಮತ್ತು ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ. ಮಹಿಳಾ ನಾಯಕಿಯರನ್ನು ವ್ಯವಸ್ಥಿತವಾಗಿ ಗುರಿ ಮಾಡಲಾಗ್ತಿದೆ. ಮಂಜುನಾಥ್ ಗೌಡ ನೇತೃತ್ವದ ಯುವ ಕಾಂಗ್ರೆಸ್ ಮಹಿಳೆಯರಿಗೆ ಅಸುರಕ್ಷಿತ ವಾತಾವರಣ ನಿರ್ಮಿಸಲಾಗಿದೆ. ಚುನಾವಣೆಯ ಬಳಿಕ ರಾಜಕೀಯ ಪಿತೂರಿ ಮತ್ತು ಮಾನಸಿಕ ಕಿರುಕುಳ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸಾರ್ವಜನಿಕ ಬೆಂಬಲ ಹೊಂದಿರುವ ಮಹಿಳಾ ನಾಯಕರನ್ನು ಬೆದರಿಸಲು ಅಧಿಕಾರ ದುರುಪಯೋಗ ಮಾಡಿಕೊಳ್ತಿದ್ದಾರೆ. ಈ ಕ್ರಮಗಳು ನನ್ನನ್ನು ಬೆದರಿಸಲಾರವು. ಜನಾದೇಶವನ್ನು ಯಾವುದೇ ಆದೇಶ ಅಳಿಸಲಾರದು. ಈ ವಿಚಾರವನ್ನ ರಾಷ್ಟ್ರೀಯ ನಾಯಕರ ಮುಂದೆ ತೆಗೆದುಕೊಂಡು ಹೋಗುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ದಿಢೀರ್ 15 ಪದಾಧಿಕಾರಿಗಳ ವಜಾ: ಹೈಕಮಾಂಡ್​​ನ ಈ ದಿಟ್ಟ ಕ್ರಮಕ್ಕೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಂಚಲನ

ನನಗೆ 8 ಜಿಲ್ಲೆಗಳನ್ನ ಕೊಟ್ಟಿದ್ದಾರೆ. ಹೆದರದೆ ಕೆಲಸ ಮಾಡಿದ್ದೇನೆ. ನಾನು ಮಾಡಿದ ಕೆಲಸದ ಬಗ್ಗೆ ದಾಖಲೆ ಇದೆ. ರಾಹುಲ್ ಗಾಂಧಿ ಹೇಳಿದ ಹಾಗೆ ಚುನಾವಣೆಯಲ್ಲಿ‌ ಕೆಲಸ ಮಾಡಿದ್ದೇವೆ. ನನ್ನ ಬಿಟ್ಟು ಎಲ್ಲಾ ಪದಾಧಿಕಾರಿಗಳಿಗೆ ತೊಂದರೆ ಕೊಟ್ರು. ಹೊಡೆದು ಆಳುವ ನೀತಿಯನ್ನ ಮಂಜುನಾಥ್ ಮಾಡಿದ್ದಾರೆ. ಸಭೆಯಿಂದ ನಮ್ಮ‌ ಪದಾಧಿಕಾರಿ ಎದ್ದು ಹೊರಡಲು ಪ್ರಯತ್ನ ಮಾಡಿದ್ರು. ಎಲ್ಲರನ್ನೂ ಜೊತೆ ತೆಗೆದುಕೊಂಡು ಹೋಗುವುದು ರಾಹುಲ್ ಗಾಂಧಿ ಐಡಿಯಾಲಜಿ. ನಮ್ಮ ಸಮಸ್ಯೆಯನ್ನ ಡಿಸಿಎಂ, ಸಿಎಂ ಕರೆಸಿ ಬಗೆಹರಿಸುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us