ಕರುನಾಡಲ್ಲಿ ದಿನದಿನವೂ ಶತಕ.. ಸೋಂಕಿತರ ಸಂಖ್ಯೆ 6 ಸಾವಿರದತ್ತ! 2605 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಾಪುಗಾಲಿಡುತ್ತಾ ಮುಂದೆ ಸಾಗುತ್ತಲ್ಲೇ ಇದೆ. ಸತತವಾಗಿ ಶತಕ ಬಾರಿಸುತ್ತಿರುವ ಮಹಾಮಾರಿ ಇಂದು ಕೂಡ ಶತಕದ ಗಡಿದಾಟಿದ್ದು ರಾಜ್ಯದಲ್ಲಿ ಇಂದು 161 ಹೊಸ ಕೇಸ್​ಗಳು ಪತ್ತೆಯಾಗಿವೆ. ಇದರಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕೇಸ್ (61) ಪತ್ತೆಯಾಗಿದೆ. ಕೊರೊನಾದಿಂದ ಇಬ್ಬರ ಸಾವು ಇದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,921ಕ್ಕೆ ಏರಿದೆ. ರಾಜ್ಯದಲ್ಲಿ ಇಂದು ಕೊರೊನಾದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮಹಾಮಾರಿಯಿಂದ ಮೃತಪಟ್ಟವರ ಸಂಖ್ಯೆ 66ಕ್ಕೆ ತಲುಪಿದೆ. ಈ ಮಧ್ಯೆ ಸಂತಸದ ಸಂಗತಿಯೆಂದರೆ ಚಿಕಿತ್ಸೆಗೆಂದು ದಾಖಲಾಗಿದ್ದ ಸುಮಾರು 2,605 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಕೂಡ ಆಗಿದ್ದಾರೆ.

ಕರುನಾಡಲ್ಲಿ ದಿನದಿನವೂ ಶತಕ.. ಸೋಂಕಿತರ ಸಂಖ್ಯೆ 6 ಸಾವಿರದತ್ತ! 2605 ಮಂದಿ ಡಿಸ್ಚಾರ್ಜ್
ಸಾಧು ಶ್ರೀನಾಥ್​

Updated on: Jun 09, 2020 | 7:03 PM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಾಪುಗಾಲಿಡುತ್ತಾ ಮುಂದೆ ಸಾಗುತ್ತಲ್ಲೇ ಇದೆ. ಸತತವಾಗಿ ಶತಕ ಬಾರಿಸುತ್ತಿರುವ ಮಹಾಮಾರಿ ಇಂದು ಕೂಡ ಶತಕದ ಗಡಿದಾಟಿದ್ದು ರಾಜ್ಯದಲ್ಲಿ ಇಂದು 161 ಹೊಸ ಕೇಸ್​ಗಳು ಪತ್ತೆಯಾಗಿವೆ. ಇದರಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕೇಸ್ (61) ಪತ್ತೆಯಾಗಿದೆ.

ಕೊರೊನಾದಿಂದ ಇಬ್ಬರ ಸಾವು
ಇದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,921ಕ್ಕೆ ಏರಿದೆ. ರಾಜ್ಯದಲ್ಲಿ ಇಂದು ಕೊರೊನಾದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮಹಾಮಾರಿಯಿಂದ ಮೃತಪಟ್ಟವರ ಸಂಖ್ಯೆ 66ಕ್ಕೆ ತಲುಪಿದೆ. ಈ ಮಧ್ಯೆ ಸಂತಸದ ಸಂಗತಿಯೆಂದರೆ ಚಿಕಿತ್ಸೆಗೆಂದು ದಾಖಲಾಗಿದ್ದ ಸುಮಾರು 2,605 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಕೂಡ ಆಗಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us