2025ರ ವೇಳೆಗೆ ಕರ್ನಾಟಕದ ರಕ್ಷಣಾ ರಫ್ತು 25,000 ಕೋಟಿ ರೂ.ಗೆ; ಸಚಿವ ಎಂಬಿ ಪಾಟೀಲ್
ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿನ ಈ ಗುರಿಯು ನೇರವಾಗಿ ಮತ್ತು ಪರೋಕ್ಷವಾಗಿ 60,000 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದರು. ಕರ್ನಾಟಕವನ್ನು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸುವ ಸರ್ಕಾರದ ಬದ್ಧತೆಯನ್ನು ಎಂಬಿ ಪಾಟೀಲ್ ಹೇಳಿದರು.

ಬೆಂಗಳೂರು, ಸೆಪ್ಟೆಂಬರ್ 1: ಕರ್ನಾಟಕವು 2025ರ ವೇಳೆಗೆ ರಕ್ಷಣಾ ಉತ್ಪಾದನೆಯನ್ನು (Defense Exports) ದ್ವಿಗುಣಗೊಳಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ. ಆ ವೇಳೆಗೆ ರಕ್ಷಣಾ ರಫ್ತು ಅನ್ನು 25,000 ಕೋಟಿ ರೂ.ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ (MB Patil) ತಿಳಿಸಿದ್ದಾರೆ. ಕರ್ನಾಟಕ ಸ್ಟೇಟ್ ಸೆಂಟರ್ ಆಫ್ ಇಂಜಿನಿಯರ್ಸ್ (ಭಾರತ) ಆಯೋಜಿಸಿದ್ದ ‘ಸ್ಪೇಸ್ – ಬೌಂಡ್ಲೆಸ್ ಅಪಾರ್ಚುನಿಟೀಸ್’ ವಿಷಯದ ಏರೋಸ್ಪೇಸ್ ಎಂಜಿನಿಯರ್ಗಳ 36 ನೇ ರಾಷ್ಟ್ರೀಯ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಐದು ವರ್ಷಗಳ ನೀತಿಯ ಅವಧಿಯಲ್ಲಿ (2022-2027) ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ 45,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸುವ ಗುರಿಯನ್ನು ಹೊಂದಲಾಗಿದೆ ಎಂದು ಬಹಿರಂಗಪಡಿಸಿದರು.
ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿನ ಈ ಗುರಿಯು ನೇರವಾಗಿ ಮತ್ತು ಪರೋಕ್ಷವಾಗಿ 60,000 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದರು.
ಕರ್ನಾಟಕವನ್ನು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸುವ ಸರ್ಕಾರದ ಬದ್ಧತೆಯನ್ನು ಎಂಬಿ ಪಾಟೀಲ್ ಹೇಳಿದರು.
‘ಭಾರತದ ಬಾಹ್ಯಾಕಾಶ ಕಾರ್ಯಕ್ರಮವು ಅತ್ಯಾಧುನಿಕವಾಗಿದ್ದರೂ, ಇದು ಜಾಗತಿಕ ಬಾಹ್ಯಾಕಾಶ ಆರ್ಥಿಕತೆಯ ಒಂದು ಸಣ್ಣ ಭಾಗವನ್ನು ಮಾತ್ರ ಹೊಂದಿದೆ. ಇದನ್ನು ಗುರುತಿಸಿ, ನಮ್ಮ ಸರ್ಕಾರವು ಖಾಸಗಿ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಬೆಳವಣಿಗೆಯನ್ನು ಉತ್ತೇಜಿಸಲು ಸುಧಾರಣೆಗಳನ್ನು ಪ್ರಾರಂಭಿಸಿದೆ. ಇದರಿಂದಾಗಿ ನಮ್ಮ ಜಾಗತಿಕ ಮಾರುಕಟ್ಟೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಪಾಟೀಲ್ ಹೇಳಿದರು.
ಇದನ್ನೂ ಓದಿ: ಸಚಿವರಿಗೆ ಹೊಸ ಕಾರು ಭಾಗ್ಯ; 9.9 ಕೋಟಿ ರೂ. ವೆಚ್ಚದಲ್ಲಿ 33 ಇನ್ನೋವಾ ಕಾರು ಖರೀದಿಸಲಿದೆ ಕರ್ನಾಟಕ ಸರ್ಕಾರ
ಬಾಹ್ಯಾಕಾಶ ತಂತ್ರಜ್ಞಾನದ ದೂರಗಾಮಿ ಪರಿಣಾಮಗಳನ್ನು ಒತ್ತಿಹೇಳಿದ ಅವರು, ಕರ್ನಾಟಕವು ದೃಢವಾದ ಏರೋಸ್ಪೇಸ್ ಮತ್ತು ರಕ್ಷಣಾ ಪರಿಸರ ವ್ಯವಸ್ಥೆಯನ್ನು ಸ್ಥಾಪಿಸಿದೆ. ಭಾರತದ ವಿಮಾನ ಮತ್ತು ಬಾಹ್ಯಾಕಾಶ ನೌಕೆಯ ಉದ್ಯಮದ ಶೇ 25 ರಾಜ್ಯದಲ್ಲಿ ನೆಲೆಗೊಂಡಿದೆ. ಇದಲ್ಲದೆ, ರಕ್ಷಣಾ ಸೇವೆಗಳಿಗಾಗಿ ತಯಾರಿಸಲಾದ ಎಲ್ಲಾ ವಿಮಾನಗಳು ಮತ್ತು ಹೆಲಿಕಾಪ್ಟರ್ಗಳಲ್ಲಿ ಶೇ 67 ಕರ್ನಾಟಕದಲ್ಲಿ ಉತ್ಪಾದಿಸಲಾಗುತ್ತದೆ. ಭಾರತದಿಂದ ದೇಶದ ಏರೋಸ್ಪೇಸ್ ಸಂಬಂಧಿತ ರಫ್ತಿನಲ್ಲಿ ರಾಜ್ಯವು ಶೇ 65 ರಷ್ಟು ಕೊಡುಗೆ ನೀಡುತ್ತದೆ ಎಂದು ಪಾಟೀಲ್ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




