AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಏಕೈಕ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕಾಡುತ್ತಿದೆ ಸಿಬ್ಬಂದಿ ಕೊರತೆ

ರಾಜ್ಯದ ಏಕೈಕ ತೋಟಗಾರಿಕೆ ವಿಶ್ವವಿದ್ಯಾಲಯ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದು. ಹಾಗಾಗಿ ಇಲ್ಲಿಗೆ ನೂರಾರು ವಿದ್ಯಾರ್ಥಿಗಳು ಕನಸು ಕಟ್ಟಿಕೊಂಡು ವಿದ್ಯಾಭ್ಯಾಸಕ್ಕೆ ಬರುತ್ತಾರೆ. ಇಂತಹ ಪ್ರತಿಷ್ಠಿತ ವಿವಿ ಹಲವು ವರ್ಷಗಳಿಂದ ಒಂದು ಸಮಸ್ಯೆಯಿಂದ ಬಳಲುತ್ತಿದೆ. ಆದರೆ ಸರ್ಕಾರದ ಬೇಜವಾಬ್ದಾರಿತನದಿಂದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.

ರಾಜ್ಯದ ಏಕೈಕ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕಾಡುತ್ತಿದೆ ಸಿಬ್ಬಂದಿ ಕೊರತೆ
ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ
Follow us
sandhya thejappa
|

Updated on:Apr 15, 2021 | 12:02 PM

ಬಾಗಲಕೋಟೆ: ರಾಜ್ಯದ ಏಕೈಕ ತೋಟಗಾರಿಕೆ ವಿಶ್ವವಿದ್ಯಾಲಯ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದು. ಹಾಗಾಗಿ ಇಲ್ಲಿಗೆ ನೂರಾರು ವಿದ್ಯಾರ್ಥಿಗಳು ಕನಸು ಕಟ್ಟಿಕೊಂಡು ವಿದ್ಯಾಭ್ಯಾಸಕ್ಕೆ ಬರುತ್ತಾರೆ. ಇಂತಹ ಪ್ರತಿಷ್ಠಿತ ವಿವಿ ಹಲವು ವರ್ಷಗಳಿಂದ ಒಂದು ಸಮಸ್ಯೆಯಿಂದ ಬಳಲುತ್ತಿದೆ. ಆದರೆ ಸರ್ಕಾರದ ಬೇಜವಾಬ್ದಾರಿತನದಿಂದ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಸಮಸ್ಯೆ ಬಗೆಹರಿಸಬೇಕಾದ ಸರ್ಕಾರ ಕುಂಟು ನೆಪ ಹೇಳುತ್ತಾ ಸಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿ ಪರಿಣಮಿಸಿದೆ.

2008 ರಲ್ಲಿ ಅಂದಿನ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಲಕೋಟೆಗೆ ತೋಟಗಾರಿಕೆ ವಿವಿಯನ್ನು ಕೊಡುಗೆ ಕೊಟ್ಟರು. ಅತ್ಯಂತ ಕಡಿಮೆ ಅವಧಿಯಲ್ಲೇ ವಿವಿ ಹೆಮ್ಮರವಾಗಿ ಬೆಳೆದು ನಿಂತಿದೆ. ಆದರೆ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾದ ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಖಾಲಿಯಾಗಿ ದಶಕವೇ ಸಮೀಪಿಸುತ್ತಿದ್ದರೂ ಹುದ್ದೆ ಭರ್ತಿಗೆ ಅನುಮತಿ ಮಾತ್ರ ಸಿಗುತ್ತಿಲ್ಲ. ಶಿಕ್ಷಕ ಹಾಗೂ ಶಿಕ್ಷಕೇತರ ಸಮಸ್ಯೆ ವಿಶ್ವ ವಿದ್ಯಾಲಯದಲ್ಲಿ ಇದೆ. ಹೀಗಾಗಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಆಗುತ್ತಿಲ್ಲ. ಒಟ್ಟು 424 ಬೋಧಕ ಹುದ್ದೆಗಳಲ್ಲಿ 285 ಹುದ್ದೆಗಳನ್ನು ತುಂಬಲಾಗಿದೆ. ಇನ್ನುಳಿದ ಶೇ.35 ರಷ್ಟು 131 ಹುದ್ದೆಗಳು ಖಾಲಿ ಉಳಿದಿವೆ. ಬೋಧಕೇತರ ಸಿಬ್ಬಂದಿಗಳಲ್ಲಿ ಸರ್ಕಾರದಿಂದ 1,419 ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 739 ಹುದ್ದೆಗಳನ್ನು ತುಂಬಲಾಗಿದ್ದು, ಇನ್ನೂ 680 ಹುದ್ದೆಗಳು ಖಾಲಿ ಇವೆ. ಇದನ್ನು ಖುದ್ದಾಗಿ ವಿವಿ ಕುಲಪತಿ ಡಾ.ಕೆ.ಎಂ.ಇಂದಿರೇಶ್ ಬಹಿರಂಗಪಡಿಸಿದ್ದು, ವಿವಿಗೆ ಸಿಬ್ಬಂದಿ ಬರ ಎದುರಾಗಿವುದು ಸ್ಪಷ್ಟವಾಗಿದೆ.

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯಾಪ್ತಿಗೆ ರಾಜ್ಯದಲ್ಲಿ 23 ಜಿಲ್ಲೆಗಳು ಬರಲಿವೆ. ಇದರಲ್ಲಿ 9 ತೋಟಗಾರಿಕೆ ಮಹಾವಿದ್ಯಾಲಯ, 12 ಸಂಶೋಧನಾ ಕೇಂದ್ರ, 12 ವಿಸ್ತರಣಾ ಘಟಕಗಳು ಮತ್ತು 2,863 ವಿದ್ಯಾರ್ಥಿಗಳನ್ನು ಹೊಂದಿರುವ ಅತಿ ದೊಡ್ಡ ವಿಶ್ವವಿದ್ಯಾಲಯ ಇದಾಗಿದೆ. ಆದರೂ ಸರ್ಕಾರ ಮಾತ್ರ ಇಂಥಹ ಪ್ರತಿಷ್ಠಿತ ವಿಶ್ವವಿದ್ಯಾಲಯಕ್ಕೆ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಮಾತ್ರ ತುಂಬದಿರುವುದಕ್ಕೆ ಕಾರಣ ತಿಳಿಯುತ್ತಿಲ್ಲ. ತೋಟಗಾರಿಕೆ ನಿರ್ಮಾಣ ಆಗಿ 10 ವರ್ಷ ಕಳೆದಿದೆ. ಸಿಬ್ಬಂದಿ ಸಮಸ್ಯೆ ವಿವಿಯಲ್ಲಿ ಹೆಚ್ಚಾಗಿ ಕಾಡುತ್ತಿದೆ. ಸಿಬ್ಬಂದಿ ಇಲ್ಲದೇ ವಿದ್ಯಾರ್ಥಿಗಳು ಏನು ಮಾಡೋಕು ಸಾಧ್ಯವಿಲ್ಲ. ಸಿಬ್ಬಂದಿಗಳಿದ್ದರೆ ಕಲಿಯುವುದಕ್ಕೆ ಸಾಧ್ಯ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರುವುದರಿಂದ ಶಿಕ್ಷಕರ ಕೊರತೆ ಅಧಿಕವಾಗಿ ಕಾಡುತ್ತಿದೆ. ಈ ಬಗ್ಗೆ ಕುಲಪತಿಗಳಲ್ಲೂ ಮನವಿ ಮಾಡಿದ್ದೇವೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ ಎಂದು ವಿವಿಯ ತೃತಿಯ ವರ್ಷದ ವಿದ್ಯಾರ್ಥಿ ಮಲ್ಲಿಕಾರ್ಜುನ ಮೆನಣಸಗಿ ಹೇಳಿದರು.

ಇದನ್ನೂ ಓದಿ

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ; 14 ಚಿನ್ನದ ಪದಕಗಳಿಸಿ ಸಂಭ್ರಮಿಸಿದ ವಿದ್ಯಾರ್ಥಿ

ವಿಜಯಪುರ: ಕಳಪೆ ಗುಣಮಟ್ಟದ ರಸಗೊಬ್ಬರ ತಯಾರಿಕಾ ಘಟಕಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ

(Karnataka’s one and only horticulture university is facing lecturers crisis in Bagalkot)

Published On - 12:01 pm, Thu, 15 April 21

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ