AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಕಾರಕ್ಕೆ ಅಸಹಕಾರ: 3 ಮತಗಳಿಂದ ವಿಧೇಯಕ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ

ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ ವಿಧಾನ ಪರಿಷತ್ ತಿರಸ್ಕೃತಗೊಂಡಿದೆ. 23 ಮತಗಳು ಪರವಾಗಿ, 26 ಮತಗಳು ವಿರುದ್ಧವಾಗಿ ಬಂದವು. ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಮಸೂದೆ ಪರಿಷತ್ತಿನಲ್ಲಿ ತಿರಸ್ಕೃತಗೊಂಡಿದ್ದು ಸರ್ಕಾರ ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ಸಂಖ್ಯೆ ಕಡಿಮೆಯಾಗಿರುವುದೇ ಇದಕ್ಕೆ ಕಾರಣವಾಗಿದೆ.

ಸಹಕಾರಕ್ಕೆ ಅಸಹಕಾರ: 3 ಮತಗಳಿಂದ ವಿಧೇಯಕ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ
ವಿಧಾನಸೌಧ
ಪ್ರಸನ್ನ ಗಾಂವ್ಕರ್​
| Edited By: |

Updated on:Aug 20, 2025 | 3:58 PM

Share

ಬೆಂಗಳೂರು, ಆಗಸ್ಟ್​ 20: ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್​ನಲ್ಲಿ (Legislative Council) ತಿರಸ್ಕೃತಗೊಂಡಿದ್ದು, ಸರ್ಕಾರ (Karnataka Government) ಮುಜುಗುರಕ್ಕೆ ಒಳಗಾಗಿದೆ. ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿರುದ್ಧ 26 ಮತಗಳು ಬಂದವು, ಪರ 23 ಮತಗಳು ಬಂದವು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಧಾನಪರಿಷತ್​ನಲ್ಲಿ ತಿರಸ್ಕೃತಗೊಂಡಿದೆ. ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಚಾರವಾಗಿ ಸುದೀರ್ಘ, ಚರ್ಚೆಯಾಗಿ ಅಂಗೀಕಾರಗೊಂಡಿತ್ತು.

ಬುಧವಾರ (ಆ.20) ಕಾನೂನು ಸಚಿವ ಹೆಚ್​​ಕೆ ಪಾಟೀಲ್​ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕವನ್ನು ವಿಧಾನಪರಿಷತ್​ನಲ್ಲಿ ಮಂಡಿಸಿದರು. ಆಗ, ವಿಪಕ್ಷಗಳು ವಿಧೇಯಕವನ್ನು ಮತಕ್ಕೆ ಹಾಕುವಂತೆ ಮನವಿ ಮಾಡಿದವು. ಬಳಿಕ, ಸಭಾಪತಿ ಬಸವರಾಜ ಹೊರಟ್ಟಿಯವರು ವಿಧೇಯಕವನ್ನು ಮತಕ್ಕೆ ಹಾಕಲು ಮುಂದಾದರು.

ಮತಕ್ಕೆ ಹಾಕುವ ಮೊದಲು ಎದ್ದು ನಿಂತ ಹೆಚ್​ಕೆ ಪಾಟೀಲ್, ಇದು ವಿರೋಧ ಪಕ್ಷಗಳ ಘನತೆಗೆ ಇದು ತಕ್ಕದ್ದಲ್ಲ. ಇದೊಂದು ಇತಿಹಾಸದಲ್ಲಿ ಕಪ್ಪು ಚುಕ್ಕೆಯಾಗಿ ಉಳಿಯುತ್ತದೆ. ನಾನು ಎಲ್ಲ ಉತ್ತರ ಕೊಟ್ಟಮೇಲೂ, ಮತಕ್ಕೆ ಹಾಕುವುದು ಅನವಶ್ಯಕವಾಗಿದೆ. ರಾಜಕಾರಣ ತರುವಂಥದ್ದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸರ್ಕಾರಕ್ಕೆ ಹಿನ್ನಡೆ: ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು

ನಂತರ, ಸಭಾಪತಿ ಬಸವರಾಜ್ ಹೊರಟ್ಟಿಯವರು ಮತಕ್ಕೆ ಹಾಕಬೇಕಾ? ಬೇಡವಾ? ಎಂದು ಮತ್ತೊಮ್ಮೆ ಕೇಳಿದರು. ವಿಪಕ್ಷಗಳು ಮತಕ್ಕೆ ಹಾಕುವಂತೆ ಹೇಳಿದ ಮೇಲೆ, ಸಭಾಪತಿ ಬಸವರಾಜ ಹೊರಟ್ಟಿ ವಿಧೇಯಕವನ್ನು ಮತಕ್ಕೆ ಹಾಕಿದರು. ಆಗ, ವಿಧೇಯಕದ ಪರವಾಗಿ 23 ಮತಗಳು ಮತ್ತು ವಿರುದ್ಧವಾಗಿ 26 ಮತಗಳು ಬಂದವು. ಈ ಕಾರಣದಿಂದ ವಿಧೇಯಕ ತಿರಸ್ಕೃತಗೊಂಡಿತು.

ಪರಿಷತ್​ನಲ್ಲಿ ಕಾಂಗ್ರೆಸ್​ ಸಂಖ್ಯೆ ಕಡಿಮೆ ಆಗಲು ಕಾರಣ

ಕಾಂಗ್ರೆಸ್​ನ ಯು.ಬಿ.ವೆಂಕಟೇಶ್, ಪ್ರಕಾಶ್ ರಾಥೋಡ್ ಅವರ ಸದಸ್ಯತ್ವ ಅವಧಿ ಮುಕ್ತಾಯಗೊಂಡಿದೆ. ಇನ್ನು, ಕಾಂಗ್ರೆಸ್​ನಿಂದ ಸಿ.ಪಿ.ಯೋಗೇಶ್ವರ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಈ ಕಾರಣದಿಂದ ವಿಧಾನಪರಿಷತ್​ನಲ್ಲಿ ಕಾಂಗ್ರೆಸ್​ ಬಲ ಕಡಿಮೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Wed, 20 August 25

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?