AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ ಸೇತುವೆ ಕುಸಿತ: ತಾವೇ ನಿರ್ಮಿಸಿದ ಸೇತುವೆ ಸಾಮರ್ಥ್ಯದ ಬಗ್ಗೆ NHAIಗೆ ಸಂಶಯ?

ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಅನುವುಮಾಡುವ ಬಗ್ಗೆ ಸೇತುವೆ ಸಾಮರ್ಥ್ಯದ ಬಗ್ಗೆ ವರದಿ ನೀಡುವಂತೆ ಜಿಲ್ಲಾಡಳಿತ ಆದೇಶಿಸಿದೆ. ಆದರೆ ಕಳೆದ 18 ಗಂಟೆಯಿಂದ ಹೊಸ ಸೇತುವೆ ಸಾಮರ್ಥ್ಯದ ವರದಿಗೆ ಹಿಂದೇಟು ಹಾಕುತ್ತಿದೆ. ಭಾರಿ ವಾಹನ ಸಂಚಾರಕ್ಕೆ ಸೇತುವೆ ಸಮರ್ಥವಾಗಿದೆ ಎಂದು ಜಿಲ್ಲಾಡಳಿತಕ್ಕೆ ವರದಿ ನೀಡಲು NHAI ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ.

ಕಾರವಾರ ಸೇತುವೆ ಕುಸಿತ: ತಾವೇ ನಿರ್ಮಿಸಿದ ಸೇತುವೆ ಸಾಮರ್ಥ್ಯದ ಬಗ್ಗೆ NHAIಗೆ ಸಂಶಯ?
ಕಾರವಾಡ ಸೇತುವೆ ಕುಸಿತ: ತಾವೇ ನಿರ್ಮಿಸಿದ ಸೇತುವೆ ಸಾಮರ್ಥ್ಯದ ಬಗ್ಗೆ NHAIಗೆ ಸಂಶಯ?
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on: Aug 07, 2024 | 10:31 PM

Share

ಕಾರವಾರ, ಆಗಸ್ಟ್​ 07: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಒಂದೆಡೆ ಮಳೆಯಿಂದ ಹಾನಿಯಾದರೇ ಮತ್ತೊಂದೆಡೆ ಭೂ ಕುಸಿತದ ತೀವ್ರತೆ ಹೆಚ್ಚಾಗಿದೆ. ಹೀಗಿರುವಾಗಲೇ ಕಾರವಾರ-ಗೋವಾ (Karwar-Goa) ರಾಷ್ಟ್ರೀಯ ಹೆದ್ದಾರಿ ಸೇತುವೆ ಕುಸಿದು (Bridge collapse) ನಾಮಾವಶೇಷವಾಗಿದೆ. ಹಳೆ ಸೇತುವೆ ಕುಸಿದಿದ್ದು ಹೊಸ ಸೇತುವೆ ಮೇಲೆ ದ್ವಿಮುಖ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಹಾಗಾಗಿ ಸೇತುವೆ ಸಾಮರ್ಥ್ಯದ ಬಗ್ಗೆ ವರದಿ ನೀಡುವಂತೆ ಜಿಲ್ಲಾಡಳಿತ NHAI ಅಧಿಕಾರಿಗಳು ಆದೇಶಿಸಿದ್ದರೂ ಹೊಸ ಸೇತುವೆ ಸಾಮರ್ಥ್ಯದ ವರದಿ ನೀಡಲು ವಿಳಂಬ ಮಾಡಲಾಗುತ್ತಿದೆ.

ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಅನುವುಮಾಡುವ ಬಗ್ಗೆ ಸೇತುವೆ ಸಾಮರ್ಥ್ಯದ ಬಗ್ಗೆ ವರದಿ ನೀಡುವಂತೆ ಜಿಲ್ಲಾಡಳಿತ ಆದೇಶಿಸಿದೆ. ಆದರೆ ಕಳೆದ 18 ಗಂಟೆಯಿಂದ ಹೊಸ ಸೇತುವೆ ಸಾಮರ್ಥ್ಯದ ವರದಿಗೆ ಹಿಂದೇಟು ಹಾಕುತ್ತಿದೆ. ಭಾರಿ ವಾಹನ ಸಂಚಾರಕ್ಕೆ ಸೇತುವೆ ಸಮರ್ಥವಾಗಿದೆ ಎಂದು ಜಿಲ್ಲಾಡಳಿತಕ್ಕೆ ವರದಿ ನೀಡಲು NHAI ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕಾಳಿ ನದಿ ಹಳೆ ಸೇತುವೆ ಕುಸಿತ; ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರ ನಿಷೇಧ

ತಾವೇ ನಿರ್ಮಿಸಿದ ಸೇತುವೆ ಸಾಮರ್ಥ್ಯದ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುಮಾನ ಮೂಡಿದ್ಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಸದ್ಯ ಭಾರಿ ವಾಹನ ಸಂಚಾರಕ್ಕೆ ಅವಕಾಶ ನೀಡಲು ಎನ್​​ಹೆಚ್​ಎಐ ಸರ್ವೆ ನಡೆಸುತ್ತಿದೆ. ಹೀಗಾಗಿ ಸ್ಥಳದಲ್ಲೇ ಅಧಿಕಾರಿಗಳು ಮೊಕ್ಕಾ ಹೂಡಿದ್ದಾರೆ.

ಇದನ್ನೂ ಓದಿ: ಕಾರವಾರ ಸೇತುವೆ ಕುಸಿತ: ಕಾಳಿ ನದಿಗೆ ಬಿದ್ದು ಬದುಕಿ ಬಂದ ರೋಚಕ ಅನುಭವ ವಿವರಿಸಿದ ಲಾರಿ ಚಾಲಕ ಬಾಲ ಮುರುಗನ್

ಲಘು ವಾಹನಗಳಿಗೆ ಅವಕಾಶ ನೀಡಬಹುದೆಂದು ಮಧ್ಯಾಹ್ನ NHAI ವರದಿ ನೀಡಿತ್ತು. ಆದರೆ ಭಾರಿ ವಾಹನಗಳಿಗೆ ಅನುವು ನೀಡುವ ಬಗ್ಗೆ ಇನ್ನೂ ಸರ್ವೆ ಮುಂದುವರೆದಿದೆ. ಪೊಲೀಸರ ಉಪಸ್ಥಿತಿಯಲ್ಲಿ ಅವಕಾಶ ನೀಡಬಹುದೆಂದು ಎನ್​​ಹೆಚ್​ಎಐ ಅಭಿಪ್ರಾಯ ಪಟ್ಟಿದ್ದು ಸೇತುವೆ ಡಿಸೈನರ್ ತಜ್ಞ ಸೋಮಶೇಖರ ಶಾಸ್ತ್ರಿ ಸಲಹೆಯಂತೆ ಅವಕಾಶ ನೀಡಲು ಮುಂದಾಗಿದೆ. ಪೊಲೀಸರ ಕಣ್ಗಾವಲಿನಲ್ಲಿ ಇಂದು ರಾತ್ರಿ ಭಾರಿ ವಾಹನ ಸಂಚಾರ ಸಾಧ್ಯತೆ ಇದೆ. 2013ರಲ್ಲಿ ಕಾರವಾರದಿಂದ ಗೋವಾಗೆ ಸಂಪರ್ಕ ಕಲ್ಪಿಸಲು ಹೊಸ ಸೇತುವೆ ನಿರ್ಮಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು