AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ ಸೇತುವೆ ಕುಸಿತ: ತಾವೇ ನಿರ್ಮಿಸಿದ ಸೇತುವೆ ಸಾಮರ್ಥ್ಯದ ಬಗ್ಗೆ NHAIಗೆ ಸಂಶಯ?

ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಅನುವುಮಾಡುವ ಬಗ್ಗೆ ಸೇತುವೆ ಸಾಮರ್ಥ್ಯದ ಬಗ್ಗೆ ವರದಿ ನೀಡುವಂತೆ ಜಿಲ್ಲಾಡಳಿತ ಆದೇಶಿಸಿದೆ. ಆದರೆ ಕಳೆದ 18 ಗಂಟೆಯಿಂದ ಹೊಸ ಸೇತುವೆ ಸಾಮರ್ಥ್ಯದ ವರದಿಗೆ ಹಿಂದೇಟು ಹಾಕುತ್ತಿದೆ. ಭಾರಿ ವಾಹನ ಸಂಚಾರಕ್ಕೆ ಸೇತುವೆ ಸಮರ್ಥವಾಗಿದೆ ಎಂದು ಜಿಲ್ಲಾಡಳಿತಕ್ಕೆ ವರದಿ ನೀಡಲು NHAI ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ.

ಕಾರವಾರ ಸೇತುವೆ ಕುಸಿತ: ತಾವೇ ನಿರ್ಮಿಸಿದ ಸೇತುವೆ ಸಾಮರ್ಥ್ಯದ ಬಗ್ಗೆ NHAIಗೆ ಸಂಶಯ?
ಕಾರವಾಡ ಸೇತುವೆ ಕುಸಿತ: ತಾವೇ ನಿರ್ಮಿಸಿದ ಸೇತುವೆ ಸಾಮರ್ಥ್ಯದ ಬಗ್ಗೆ NHAIಗೆ ಸಂಶಯ?
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Aug 07, 2024 | 10:31 PM

Share

ಕಾರವಾರ, ಆಗಸ್ಟ್​ 07: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಒಂದೆಡೆ ಮಳೆಯಿಂದ ಹಾನಿಯಾದರೇ ಮತ್ತೊಂದೆಡೆ ಭೂ ಕುಸಿತದ ತೀವ್ರತೆ ಹೆಚ್ಚಾಗಿದೆ. ಹೀಗಿರುವಾಗಲೇ ಕಾರವಾರ-ಗೋವಾ (Karwar-Goa) ರಾಷ್ಟ್ರೀಯ ಹೆದ್ದಾರಿ ಸೇತುವೆ ಕುಸಿದು (Bridge collapse) ನಾಮಾವಶೇಷವಾಗಿದೆ. ಹಳೆ ಸೇತುವೆ ಕುಸಿದಿದ್ದು ಹೊಸ ಸೇತುವೆ ಮೇಲೆ ದ್ವಿಮುಖ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಹಾಗಾಗಿ ಸೇತುವೆ ಸಾಮರ್ಥ್ಯದ ಬಗ್ಗೆ ವರದಿ ನೀಡುವಂತೆ ಜಿಲ್ಲಾಡಳಿತ NHAI ಅಧಿಕಾರಿಗಳು ಆದೇಶಿಸಿದ್ದರೂ ಹೊಸ ಸೇತುವೆ ಸಾಮರ್ಥ್ಯದ ವರದಿ ನೀಡಲು ವಿಳಂಬ ಮಾಡಲಾಗುತ್ತಿದೆ.

ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಅನುವುಮಾಡುವ ಬಗ್ಗೆ ಸೇತುವೆ ಸಾಮರ್ಥ್ಯದ ಬಗ್ಗೆ ವರದಿ ನೀಡುವಂತೆ ಜಿಲ್ಲಾಡಳಿತ ಆದೇಶಿಸಿದೆ. ಆದರೆ ಕಳೆದ 18 ಗಂಟೆಯಿಂದ ಹೊಸ ಸೇತುವೆ ಸಾಮರ್ಥ್ಯದ ವರದಿಗೆ ಹಿಂದೇಟು ಹಾಕುತ್ತಿದೆ. ಭಾರಿ ವಾಹನ ಸಂಚಾರಕ್ಕೆ ಸೇತುವೆ ಸಮರ್ಥವಾಗಿದೆ ಎಂದು ಜಿಲ್ಲಾಡಳಿತಕ್ಕೆ ವರದಿ ನೀಡಲು NHAI ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕಾಳಿ ನದಿ ಹಳೆ ಸೇತುವೆ ಕುಸಿತ; ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರ ನಿಷೇಧ

ತಾವೇ ನಿರ್ಮಿಸಿದ ಸೇತುವೆ ಸಾಮರ್ಥ್ಯದ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುಮಾನ ಮೂಡಿದ್ಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಸದ್ಯ ಭಾರಿ ವಾಹನ ಸಂಚಾರಕ್ಕೆ ಅವಕಾಶ ನೀಡಲು ಎನ್​​ಹೆಚ್​ಎಐ ಸರ್ವೆ ನಡೆಸುತ್ತಿದೆ. ಹೀಗಾಗಿ ಸ್ಥಳದಲ್ಲೇ ಅಧಿಕಾರಿಗಳು ಮೊಕ್ಕಾ ಹೂಡಿದ್ದಾರೆ.

ಇದನ್ನೂ ಓದಿ: ಕಾರವಾರ ಸೇತುವೆ ಕುಸಿತ: ಕಾಳಿ ನದಿಗೆ ಬಿದ್ದು ಬದುಕಿ ಬಂದ ರೋಚಕ ಅನುಭವ ವಿವರಿಸಿದ ಲಾರಿ ಚಾಲಕ ಬಾಲ ಮುರುಗನ್

ಲಘು ವಾಹನಗಳಿಗೆ ಅವಕಾಶ ನೀಡಬಹುದೆಂದು ಮಧ್ಯಾಹ್ನ NHAI ವರದಿ ನೀಡಿತ್ತು. ಆದರೆ ಭಾರಿ ವಾಹನಗಳಿಗೆ ಅನುವು ನೀಡುವ ಬಗ್ಗೆ ಇನ್ನೂ ಸರ್ವೆ ಮುಂದುವರೆದಿದೆ. ಪೊಲೀಸರ ಉಪಸ್ಥಿತಿಯಲ್ಲಿ ಅವಕಾಶ ನೀಡಬಹುದೆಂದು ಎನ್​​ಹೆಚ್​ಎಐ ಅಭಿಪ್ರಾಯ ಪಟ್ಟಿದ್ದು ಸೇತುವೆ ಡಿಸೈನರ್ ತಜ್ಞ ಸೋಮಶೇಖರ ಶಾಸ್ತ್ರಿ ಸಲಹೆಯಂತೆ ಅವಕಾಶ ನೀಡಲು ಮುಂದಾಗಿದೆ. ಪೊಲೀಸರ ಕಣ್ಗಾವಲಿನಲ್ಲಿ ಇಂದು ರಾತ್ರಿ ಭಾರಿ ವಾಹನ ಸಂಚಾರ ಸಾಧ್ಯತೆ ಇದೆ. 2013ರಲ್ಲಿ ಕಾರವಾರದಿಂದ ಗೋವಾಗೆ ಸಂಪರ್ಕ ಕಲ್ಪಿಸಲು ಹೊಸ ಸೇತುವೆ ನಿರ್ಮಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ