AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ ನೌಕಾನೆಲೆಗೆ ಹಾರಿಬಂದ ಸೀಗಲ್​ ಹಕ್ಕಿಯಲ್ಲಿ ಚೀನಾದ ಜಿಪಿಎಸ್​ ಟ್ರ್ಯಾಕರ್ ಪತ್ತೆ

ಕಾರವಾದಲ್ಲಿ ಅದೊಂದು ವಲಸಿಗ ಸೀಗಲ್​ ಹಕ್ಕಿಯಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕದಂಬ ನೌಕಾನೆಲೆ ಪ್ರದೇಶದಲ್ಲಿ ಮಂಗಳವಾರ ಕಾಣಿಸಿಕೊಂಡ ಸೀಗಲ್ ಹಕ್ಕಿ ಪೊಲೀಸರನ್ನು ದಂಗಾಗಿಸಿದೆ. ಸದ್ಯ ಪತ್ತೆಯಾದ ಈ ಸೀಗಲ್ ಹಕ್ಕಿ ಕುರಿತು ತನಿಖೆಗೆ ನೌಕಾದಳ ಪೊಲೀಸರು ಮುಂದಾಗಿದ್ದಾರೆ.

ಕಾರವಾರ ನೌಕಾನೆಲೆಗೆ ಹಾರಿಬಂದ ಸೀಗಲ್​ ಹಕ್ಕಿಯಲ್ಲಿ ಚೀನಾದ ಜಿಪಿಎಸ್​ ಟ್ರ್ಯಾಕರ್ ಪತ್ತೆ
ಚೀನಾದ ಜಿಪಿಎಸ್​ ಟ್ರ್ಯಾಕರ್​​ ಹೊಂದಿರುವ ಸೀಗಲ್​ ಪಕ್ಷಿ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Dec 17, 2025 | 4:13 PM

Share

ಕಾರವಾರ, ಡಿಸೆಂಬರ್ 17: ಕಳೆದ ವರ್ಷ ಕಾರವಾರದ (Karwar) ಬಳಿ ಜಿಪಿಎಸ್ ಟ್ರಾನ್ಸ್‌ಮೀಟರ್ ಹೊಂದಿದ್ದ ರಣಹದ್ದು ಒಂದು ಕಂಡು ಬಂದಿತ್ತು. ಅದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಇದೀಗ ಅಂತಹದೇ ಒಂದು ಘಟನೆ ಮರುಕಳಿಸಿದೆ. ಚೀನಾದ ಜಿಪಿಎಸ್​ ಟ್ರ್ಯಾಕರ್​​ (China GPS tracker) ಹೊಂದಿರುವ ಸೀಗಲ್​ ಪಕ್ಷಿ (ಕಡಲ ಹಕ್ಕಿ) ಒಂದು ಕದಂಬ ನೌಕಾನೆಲೆ ಪ್ರದೇಶದಲ್ಲಿ ಮಂಗಳವಾರ ಕಾಣಿಸಿಕೊಂಡಿದೆ. ಟ್ರ್ಯಾಕರ್ ಹೊಂದಿದ್ದ ಸೀಗಲ್​ ಹಕ್ಕಿಯನ್ನು ಅರಣ್ಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಸದ್ಯ ಇದು ಜನರ ಆತಂಕಕ್ಕೆ ಕಾರಣವಾಗಿದೆ. ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚೀನಾದ ಜಿಪಿಎಸ್​ ಟ್ರ್ಯಾಕರ್​​ ಪತ್ತೆ: ದಂಗಾದ ಪೊಲೀಸರು

ಕರ್ನಾಟಕದಲ್ಲಿ ಚಳಿ ಹೆಚ್ಚಿದೆ. ಆದರೆ ಇತ್ತ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಾತ್ರ ಬೆಚ್ಚಗಿನ ವಾತಾವರಣವಿದೆ. ಹೀಗಾಗಿ ಸೀಗಲ್​​ ಹಕ್ಕಿಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಹೀಗೆ ಹಾರಿಬಂದ ವಲಸಿಗ ಸೀಗಲ್​ ಹಕ್ಕಿಯಲ್ಲಿ ಚೀನಾದ ಜಿಪಿಎಸ್​ ಟ್ರ್ಯಾಕರ್​​ ಪತ್ತೆ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಕದಂಬ ನೌಕಾನೆಲೆ ಪ್ರದೇಶದಲ್ಲಿ ಕಾಣಿಸಿಕೊಂಡ ಈ ಸೀಗಲ್ ಹಕ್ಕಿ ಕಂಡು ಪೊಲೀಸರು ಕೂಡ ಆತಂಕಗೊಂಡಿದ್ದಾರೆ.

ಇದನ್ನೂ ಓದಿ: ಕಾರವಾರದಲ್ಲಿ ಆತಂಕ ಸೃಷ್ಠಿಸಿದ ಜಿಪಿಎಸ್ ಟ್ರಾನ್ಸ್​ಮಿಟರ್ ಟ್ಯಾಗ್ ಹೊಂದಿದ ರಣಹದ್ದು

ಸದ್ಯ ಕಾರವಾರ ಪೊಲೀಸರು ಈ ಟ್ರ್ಯಾಕರ್ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜಿಪಿಎಸ್​ ಟ್ರ್ಯಾಕರ್​ನಲ್ಲಿ ಚೀನಾದ ವಿಜ್ಞಾನ ಅಕಾಡೆಮಿಯ ಇಕೋ-ಎನ್ವಿರಾನ್ಮೆಂಟ್ ಸೈನ್ಸ್ ಎಂದು ಬರಹ ನಮೂದಿಸಲಾಗಿದೆ. ಸೀಗಲ್ ಹಕ್ಕಿಗಳ ಚಲನವಲನ, ಅವುಗಳ ಆಹಾರ ಪದ್ಧತಿ ಹಾಗೂ ವಲಸೆ ಸಮೀಕ್ಷೆಗೆ ಜಿಪಿಎಸ್​ ಟ್ರ್ಯಾಕರ್ ಅಳವಡಿಸಲಾಗಿದೆ ಎನ್ನಲಾಗುತ್ತಿದೆ.​​

ಇದನ್ನೂ ಓದಿ: ಅಂಕೋಲಾದ ಕಡಲ ತೀರದಲ್ಲಿ ವಿದೇಶಿ ಹಕ್ಕಿಗಳ ಕಲರವ: ವಲಸೆ ಬಂದಿರೋ ಬಾನಾಡಿಗಳನ್ನೊಮ್ಮೆ ನೋಡಿ

ಸದ್ಯ ಸೀಗಲ್ ಹಕ್ಕಿ ಮರೈನ್ ಅರಣ್ಯ ವಿಭಾಗದ ಕಚೇರಿಗೆ ಶಿಫ್ಟ್ ಮಾಡಲಾಗಿದ್ದು, ಚೀನಾದ ಅಕಾಡೆಮಿಯನ್ನು ಅರಣ್ಯ ಅಧಿಕಾರಿಗಳು ಸಂಪರ್ಕಿಸುತ್ತಿದ್ದಾರೆ. ಸೀಗಲ್ ಹಕ್ಕಿ ಪತ್ತೆಯಾದ ಪ್ರದೇಶ ನೌಕಾನೆಲೆ ಸ್ಥಳವಿದ್ದು, ಈ ಕುರಿತು ನೌಕಾದಳ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ