AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರ್ವೆಯಲ್ಲಿಯೂ ಹೆಸರು ಪಡೆಯಿತು ಕಾರವಾರದ ರೈಲು ನಿಲ್ದಾಣ; ಅದ್ಭುತ ಹಸಿರು ಎಂದು ಟ್ವೀಟ್​

Karwar Railway Station: ನಾರ್ವೆಯ ಅಂತರಾಷ್ಟ್ರಿಯ ಅಭಿವೃದ್ಧಿ ಖಾತೆಯ ಮಾಜಿ ಸಚಿವ ಎರಿಕ್​ ಸೋಲ್ಹಿಮ್​ ಅವರು ತಮ್ಮ ಟ್ವಿಟರ್​ ಅಧಿಕೃತ ಖಾತೆಯಲ್ಲಿ ಕಾರವಾರದ ರೈಲು ನಿಲ್ದಾಣದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ನಾರ್ವೆಯಲ್ಲಿಯೂ ಹೆಸರು ಪಡೆಯಿತು ಕಾರವಾರದ ರೈಲು ನಿಲ್ದಾಣ; ಅದ್ಭುತ ಹಸಿರು ಎಂದು ಟ್ವೀಟ್​
ಕಾರವಾರದ ರೈಲ್ವೆ ನಿಲ್ದಾಣ
TV9 Web
| Edited By: |

Updated on:Jul 13, 2021 | 1:18 PM

Share

Karwar Railway Station: ಹಚ್ಚಹಸಿರು ಸೊಬಗಿನ ಸೌಂದರ್ಯದ ನಡುವೆ ಹಾಯಾಗಿ ರೈಲಿನಲ್ಲಿ ಪ್ರಯಾಣ ಮಾಡುವುದೇ ಮನಸ್ಸಿಗೆ ಖುಷಿ ತರುತ್ತದೆ. ಜಿಟಿಜಿಟಿ ಮಳೆಯಲ್ಲಿ ಈಗತಾನೆ ಮಿಂದು ನಿಂತ ಹಸಿರು ಪ್ರಕೃತಿಯ ಮಧ್ಯೆ ರೈಲು ಸಾಗುತ್ತಿರುವಾಗ ಕಿಟಕಿಯಿಂದಾಚೆ ನೋಡುವ ಖುಷಿ ಇನ್ನೆಲ್ಲೂ ಸಿಗದು. ಕಾರವಾರದ ಹಚ್ಚ ಹಸುರಿನ ಪ್ರಕೃತಿಯ ನಡುವೆ ಇರುವ ಶಿರವಾಡದ ಕೊಂಕಣ ರೈಲ್ವೆ ನಿಲ್ದಾಣ ನಾರ್ವೆ ದೇಶದಲ್ಲಿಯೂ ಹೆಸರು ಪಡೆಯುತ್ತಿದೆ. ಸುಂದರ ಪ್ರಕೃತಿಯ ನಡುವೆ ಪ್ರಯಾಣ ಕೈಗೊಳ್ಳುವುದು ಭಾಗ್ಯ ಎಂದು ನೆಟ್ಟಿಗರು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ನಾರ್ವೆಯ ಅಂತರಾಷ್ಟ್ರಿಯ ಅಭಿವೃದ್ಧಿ ಖಾತೆಯ ಮಾಜಿ ಸಚಿವ ಎರಿಕ್​ ಸೋಲ್ಹಿಮ್​ ಅವರು ತಮ್ಮ ಟ್ವಿಟರ್​ ಅಧಿಕೃತ ಖಾತೆಯಲ್ಲಿ ಕಾರವಾರದ ರೈಲು ನಿಲ್ದಾಣದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅತ್ಯಂತ ಹಸಿರಾದ ನಿಲ್ದಾಣಗಳಲ್ಲಿ ಕಾರವಾರದ ರೈಲ್ವೆ ನಿಲ್ದಾಣವೂ ಸಹ ಒಂದಾಗಿರಬೇಕು. ಅದ್ಭುತವಾದ ಹಸಿರು ಎಂದು ಬರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​ ಆಗುತ್ತಿದ್ದಂತೆಯೇ 5,800ಕ್ಕಿಂತಲೂ ಹೆಚ್ಚು ಲೈಕ್ಸ್​ಗಳನ್ನು ಗಳಿಸಿಕೊಂಡಿದೆ. 660 ರೀಟ್ವೀಟ್​ಗಳೂ ಸಹ ಲಭಿಸಿವೆ. ಸುಂದರ ಪ್ರಕೃತಿಯ ನಡುವೆ ಸಾಗುವ ರೈಲ್ವೆಯಲ್ಲಿ ಪ್ರಯಾಣಿಸಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಪರಿಸರದ ಸೊಬಗೆ ಹಾಗೇ..! ನಿಸರ್ಗದ ಸೌಂದರ್ಯ ನೋಡುತ್ತಾ ನಿಂತರೆ ಮೈಮರೆಯುವುದಂತೂ ಸತ್ಯ. ನಿಸರ್ಗದ ಸಹಜತೆ ಜನರಿಗೆ ಖುಷಿಕೊಡುವುದಂತೂ ಸತ್ಯ.

ಇದನ್ನೂ ಓದಿ:

ಮೈಸೂರು ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಕ್ಕೆ ಮರು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ

ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ, 2ಬಿ ಹಂತಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

Published On - 11:30 am, Tue, 13 July 21

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ