AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರ್ವೆಯಲ್ಲಿಯೂ ಹೆಸರು ಪಡೆಯಿತು ಕಾರವಾರದ ರೈಲು ನಿಲ್ದಾಣ; ಅದ್ಭುತ ಹಸಿರು ಎಂದು ಟ್ವೀಟ್​

Karwar Railway Station: ನಾರ್ವೆಯ ಅಂತರಾಷ್ಟ್ರಿಯ ಅಭಿವೃದ್ಧಿ ಖಾತೆಯ ಮಾಜಿ ಸಚಿವ ಎರಿಕ್​ ಸೋಲ್ಹಿಮ್​ ಅವರು ತಮ್ಮ ಟ್ವಿಟರ್​ ಅಧಿಕೃತ ಖಾತೆಯಲ್ಲಿ ಕಾರವಾರದ ರೈಲು ನಿಲ್ದಾಣದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ನಾರ್ವೆಯಲ್ಲಿಯೂ ಹೆಸರು ಪಡೆಯಿತು ಕಾರವಾರದ ರೈಲು ನಿಲ್ದಾಣ; ಅದ್ಭುತ ಹಸಿರು ಎಂದು ಟ್ವೀಟ್​
ಕಾರವಾರದ ರೈಲ್ವೆ ನಿಲ್ದಾಣ
TV9 Web
| Edited By: |

Updated on:Jul 13, 2021 | 1:18 PM

Share

Karwar Railway Station: ಹಚ್ಚಹಸಿರು ಸೊಬಗಿನ ಸೌಂದರ್ಯದ ನಡುವೆ ಹಾಯಾಗಿ ರೈಲಿನಲ್ಲಿ ಪ್ರಯಾಣ ಮಾಡುವುದೇ ಮನಸ್ಸಿಗೆ ಖುಷಿ ತರುತ್ತದೆ. ಜಿಟಿಜಿಟಿ ಮಳೆಯಲ್ಲಿ ಈಗತಾನೆ ಮಿಂದು ನಿಂತ ಹಸಿರು ಪ್ರಕೃತಿಯ ಮಧ್ಯೆ ರೈಲು ಸಾಗುತ್ತಿರುವಾಗ ಕಿಟಕಿಯಿಂದಾಚೆ ನೋಡುವ ಖುಷಿ ಇನ್ನೆಲ್ಲೂ ಸಿಗದು. ಕಾರವಾರದ ಹಚ್ಚ ಹಸುರಿನ ಪ್ರಕೃತಿಯ ನಡುವೆ ಇರುವ ಶಿರವಾಡದ ಕೊಂಕಣ ರೈಲ್ವೆ ನಿಲ್ದಾಣ ನಾರ್ವೆ ದೇಶದಲ್ಲಿಯೂ ಹೆಸರು ಪಡೆಯುತ್ತಿದೆ. ಸುಂದರ ಪ್ರಕೃತಿಯ ನಡುವೆ ಪ್ರಯಾಣ ಕೈಗೊಳ್ಳುವುದು ಭಾಗ್ಯ ಎಂದು ನೆಟ್ಟಿಗರು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ನಾರ್ವೆಯ ಅಂತರಾಷ್ಟ್ರಿಯ ಅಭಿವೃದ್ಧಿ ಖಾತೆಯ ಮಾಜಿ ಸಚಿವ ಎರಿಕ್​ ಸೋಲ್ಹಿಮ್​ ಅವರು ತಮ್ಮ ಟ್ವಿಟರ್​ ಅಧಿಕೃತ ಖಾತೆಯಲ್ಲಿ ಕಾರವಾರದ ರೈಲು ನಿಲ್ದಾಣದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅತ್ಯಂತ ಹಸಿರಾದ ನಿಲ್ದಾಣಗಳಲ್ಲಿ ಕಾರವಾರದ ರೈಲ್ವೆ ನಿಲ್ದಾಣವೂ ಸಹ ಒಂದಾಗಿರಬೇಕು. ಅದ್ಭುತವಾದ ಹಸಿರು ಎಂದು ಬರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​ ಆಗುತ್ತಿದ್ದಂತೆಯೇ 5,800ಕ್ಕಿಂತಲೂ ಹೆಚ್ಚು ಲೈಕ್ಸ್​ಗಳನ್ನು ಗಳಿಸಿಕೊಂಡಿದೆ. 660 ರೀಟ್ವೀಟ್​ಗಳೂ ಸಹ ಲಭಿಸಿವೆ. ಸುಂದರ ಪ್ರಕೃತಿಯ ನಡುವೆ ಸಾಗುವ ರೈಲ್ವೆಯಲ್ಲಿ ಪ್ರಯಾಣಿಸಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಪರಿಸರದ ಸೊಬಗೆ ಹಾಗೇ..! ನಿಸರ್ಗದ ಸೌಂದರ್ಯ ನೋಡುತ್ತಾ ನಿಂತರೆ ಮೈಮರೆಯುವುದಂತೂ ಸತ್ಯ. ನಿಸರ್ಗದ ಸಹಜತೆ ಜನರಿಗೆ ಖುಷಿಕೊಡುವುದಂತೂ ಸತ್ಯ.

ಇದನ್ನೂ ಓದಿ:

ಮೈಸೂರು ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಕ್ಕೆ ಮರು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ

ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ, 2ಬಿ ಹಂತಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

Published On - 11:30 am, Tue, 13 July 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ