ನಾರ್ವೆಯಲ್ಲಿಯೂ ಹೆಸರು ಪಡೆಯಿತು ಕಾರವಾರದ ರೈಲು ನಿಲ್ದಾಣ; ಅದ್ಭುತ ಹಸಿರು ಎಂದು ಟ್ವೀಟ್​

Karwar Railway Station: ನಾರ್ವೆಯ ಅಂತರಾಷ್ಟ್ರಿಯ ಅಭಿವೃದ್ಧಿ ಖಾತೆಯ ಮಾಜಿ ಸಚಿವ ಎರಿಕ್​ ಸೋಲ್ಹಿಮ್​ ಅವರು ತಮ್ಮ ಟ್ವಿಟರ್​ ಅಧಿಕೃತ ಖಾತೆಯಲ್ಲಿ ಕಾರವಾರದ ರೈಲು ನಿಲ್ದಾಣದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ನಾರ್ವೆಯಲ್ಲಿಯೂ ಹೆಸರು ಪಡೆಯಿತು ಕಾರವಾರದ ರೈಲು ನಿಲ್ದಾಣ; ಅದ್ಭುತ ಹಸಿರು ಎಂದು ಟ್ವೀಟ್​
ಕಾರವಾರದ ರೈಲ್ವೆ ನಿಲ್ದಾಣ
Follow us
| Updated By: Digi Tech Desk

Updated on:Jul 13, 2021 | 1:18 PM

Karwar Railway Station: ಹಚ್ಚಹಸಿರು ಸೊಬಗಿನ ಸೌಂದರ್ಯದ ನಡುವೆ ಹಾಯಾಗಿ ರೈಲಿನಲ್ಲಿ ಪ್ರಯಾಣ ಮಾಡುವುದೇ ಮನಸ್ಸಿಗೆ ಖುಷಿ ತರುತ್ತದೆ. ಜಿಟಿಜಿಟಿ ಮಳೆಯಲ್ಲಿ ಈಗತಾನೆ ಮಿಂದು ನಿಂತ ಹಸಿರು ಪ್ರಕೃತಿಯ ಮಧ್ಯೆ ರೈಲು ಸಾಗುತ್ತಿರುವಾಗ ಕಿಟಕಿಯಿಂದಾಚೆ ನೋಡುವ ಖುಷಿ ಇನ್ನೆಲ್ಲೂ ಸಿಗದು. ಕಾರವಾರದ ಹಚ್ಚ ಹಸುರಿನ ಪ್ರಕೃತಿಯ ನಡುವೆ ಇರುವ ಶಿರವಾಡದ ಕೊಂಕಣ ರೈಲ್ವೆ ನಿಲ್ದಾಣ ನಾರ್ವೆ ದೇಶದಲ್ಲಿಯೂ ಹೆಸರು ಪಡೆಯುತ್ತಿದೆ. ಸುಂದರ ಪ್ರಕೃತಿಯ ನಡುವೆ ಪ್ರಯಾಣ ಕೈಗೊಳ್ಳುವುದು ಭಾಗ್ಯ ಎಂದು ನೆಟ್ಟಿಗರು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ನಾರ್ವೆಯ ಅಂತರಾಷ್ಟ್ರಿಯ ಅಭಿವೃದ್ಧಿ ಖಾತೆಯ ಮಾಜಿ ಸಚಿವ ಎರಿಕ್​ ಸೋಲ್ಹಿಮ್​ ಅವರು ತಮ್ಮ ಟ್ವಿಟರ್​ ಅಧಿಕೃತ ಖಾತೆಯಲ್ಲಿ ಕಾರವಾರದ ರೈಲು ನಿಲ್ದಾಣದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅತ್ಯಂತ ಹಸಿರಾದ ನಿಲ್ದಾಣಗಳಲ್ಲಿ ಕಾರವಾರದ ರೈಲ್ವೆ ನಿಲ್ದಾಣವೂ ಸಹ ಒಂದಾಗಿರಬೇಕು. ಅದ್ಭುತವಾದ ಹಸಿರು ಎಂದು ಬರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​ ಆಗುತ್ತಿದ್ದಂತೆಯೇ 5,800ಕ್ಕಿಂತಲೂ ಹೆಚ್ಚು ಲೈಕ್ಸ್​ಗಳನ್ನು ಗಳಿಸಿಕೊಂಡಿದೆ. 660 ರೀಟ್ವೀಟ್​ಗಳೂ ಸಹ ಲಭಿಸಿವೆ. ಸುಂದರ ಪ್ರಕೃತಿಯ ನಡುವೆ ಸಾಗುವ ರೈಲ್ವೆಯಲ್ಲಿ ಪ್ರಯಾಣಿಸಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಪರಿಸರದ ಸೊಬಗೆ ಹಾಗೇ..! ನಿಸರ್ಗದ ಸೌಂದರ್ಯ ನೋಡುತ್ತಾ ನಿಂತರೆ ಮೈಮರೆಯುವುದಂತೂ ಸತ್ಯ. ನಿಸರ್ಗದ ಸಹಜತೆ ಜನರಿಗೆ ಖುಷಿಕೊಡುವುದಂತೂ ಸತ್ಯ.

ಇದನ್ನೂ ಓದಿ:

ಮೈಸೂರು ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಕ್ಕೆ ಮರು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ

ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ, 2ಬಿ ಹಂತಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

Published On - 11:30 am, Tue, 13 July 21

ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು