AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರ್ವೆಯಲ್ಲಿಯೂ ಹೆಸರು ಪಡೆಯಿತು ಕಾರವಾರದ ರೈಲು ನಿಲ್ದಾಣ; ಅದ್ಭುತ ಹಸಿರು ಎಂದು ಟ್ವೀಟ್​

Karwar Railway Station: ನಾರ್ವೆಯ ಅಂತರಾಷ್ಟ್ರಿಯ ಅಭಿವೃದ್ಧಿ ಖಾತೆಯ ಮಾಜಿ ಸಚಿವ ಎರಿಕ್​ ಸೋಲ್ಹಿಮ್​ ಅವರು ತಮ್ಮ ಟ್ವಿಟರ್​ ಅಧಿಕೃತ ಖಾತೆಯಲ್ಲಿ ಕಾರವಾರದ ರೈಲು ನಿಲ್ದಾಣದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ನಾರ್ವೆಯಲ್ಲಿಯೂ ಹೆಸರು ಪಡೆಯಿತು ಕಾರವಾರದ ರೈಲು ನಿಲ್ದಾಣ; ಅದ್ಭುತ ಹಸಿರು ಎಂದು ಟ್ವೀಟ್​
ಕಾರವಾರದ ರೈಲ್ವೆ ನಿಲ್ದಾಣ
TV9 Web
| Edited By: |

Updated on:Jul 13, 2021 | 1:18 PM

Share

Karwar Railway Station: ಹಚ್ಚಹಸಿರು ಸೊಬಗಿನ ಸೌಂದರ್ಯದ ನಡುವೆ ಹಾಯಾಗಿ ರೈಲಿನಲ್ಲಿ ಪ್ರಯಾಣ ಮಾಡುವುದೇ ಮನಸ್ಸಿಗೆ ಖುಷಿ ತರುತ್ತದೆ. ಜಿಟಿಜಿಟಿ ಮಳೆಯಲ್ಲಿ ಈಗತಾನೆ ಮಿಂದು ನಿಂತ ಹಸಿರು ಪ್ರಕೃತಿಯ ಮಧ್ಯೆ ರೈಲು ಸಾಗುತ್ತಿರುವಾಗ ಕಿಟಕಿಯಿಂದಾಚೆ ನೋಡುವ ಖುಷಿ ಇನ್ನೆಲ್ಲೂ ಸಿಗದು. ಕಾರವಾರದ ಹಚ್ಚ ಹಸುರಿನ ಪ್ರಕೃತಿಯ ನಡುವೆ ಇರುವ ಶಿರವಾಡದ ಕೊಂಕಣ ರೈಲ್ವೆ ನಿಲ್ದಾಣ ನಾರ್ವೆ ದೇಶದಲ್ಲಿಯೂ ಹೆಸರು ಪಡೆಯುತ್ತಿದೆ. ಸುಂದರ ಪ್ರಕೃತಿಯ ನಡುವೆ ಪ್ರಯಾಣ ಕೈಗೊಳ್ಳುವುದು ಭಾಗ್ಯ ಎಂದು ನೆಟ್ಟಿಗರು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ನಾರ್ವೆಯ ಅಂತರಾಷ್ಟ್ರಿಯ ಅಭಿವೃದ್ಧಿ ಖಾತೆಯ ಮಾಜಿ ಸಚಿವ ಎರಿಕ್​ ಸೋಲ್ಹಿಮ್​ ಅವರು ತಮ್ಮ ಟ್ವಿಟರ್​ ಅಧಿಕೃತ ಖಾತೆಯಲ್ಲಿ ಕಾರವಾರದ ರೈಲು ನಿಲ್ದಾಣದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅತ್ಯಂತ ಹಸಿರಾದ ನಿಲ್ದಾಣಗಳಲ್ಲಿ ಕಾರವಾರದ ರೈಲ್ವೆ ನಿಲ್ದಾಣವೂ ಸಹ ಒಂದಾಗಿರಬೇಕು. ಅದ್ಭುತವಾದ ಹಸಿರು ಎಂದು ಬರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​ ಆಗುತ್ತಿದ್ದಂತೆಯೇ 5,800ಕ್ಕಿಂತಲೂ ಹೆಚ್ಚು ಲೈಕ್ಸ್​ಗಳನ್ನು ಗಳಿಸಿಕೊಂಡಿದೆ. 660 ರೀಟ್ವೀಟ್​ಗಳೂ ಸಹ ಲಭಿಸಿವೆ. ಸುಂದರ ಪ್ರಕೃತಿಯ ನಡುವೆ ಸಾಗುವ ರೈಲ್ವೆಯಲ್ಲಿ ಪ್ರಯಾಣಿಸಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಪರಿಸರದ ಸೊಬಗೆ ಹಾಗೇ..! ನಿಸರ್ಗದ ಸೌಂದರ್ಯ ನೋಡುತ್ತಾ ನಿಂತರೆ ಮೈಮರೆಯುವುದಂತೂ ಸತ್ಯ. ನಿಸರ್ಗದ ಸಹಜತೆ ಜನರಿಗೆ ಖುಷಿಕೊಡುವುದಂತೂ ಸತ್ಯ.

ಇದನ್ನೂ ಓದಿ:

ಮೈಸೂರು ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಕ್ಕೆ ಮರು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ

ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ, 2ಬಿ ಹಂತಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

Published On - 11:30 am, Tue, 13 July 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ