Monkey disease: ಉತ್ತರ ಕನ್ನಡ ಜಿಲ್ಲೆಯಲ್ಲಿ ಶತಕ ದಾಟಿದ ಮಂಗನ ಕಾಯಿಲೆ ಪ್ರಕರಣಗಳು

| Updated By: ಗಂಗಾಧರ​ ಬ. ಸಾಬೋಜಿ

Updated on: May 22, 2024 | 10:17 PM

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಶತಕ ದಾಟಿದೆ. ಜಿಲ್ಲೆಯಲ್ಲಿ ಈವರೆಗೆ 108 ಜನರಲ್ಲಿ ಕೆಎಫ್​​ಡಿ ಪತ್ತೆ ಆಗಿದೆ. ಸಿದ್ದಾಪುರ ಒಂದೇ ತಾಲೂಕಿನಲ್ಲಿ ಮಂಗನಕಾಯಿಲೆ 100ಕ್ಕೇರಿದೆ. ಮಂಗನ ಕಾಯಿಲೆ ಪ್ರಕರಣ ತಡೆಗಟ್ಟುವಲ್ಲಿ ಜಿಲ್ಲಾಡಳಿತ ವಿಫಲವಾಗಿದ್ದು, ಮಂಗನಕಾಯಿಲೆ ಸಾವಿನ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ಹೀಗಾಗಿ ಕಾಡಂಚಿನ ಗ್ರಾಮಗಳಲ್ಲಿ ಹೆಚ್ಚಿದ ಆತಂಕ ಶುರುವಾಗಿದೆ.

Monkey disease: ಉತ್ತರ ಕನ್ನಡ ಜಿಲ್ಲೆಯಲ್ಲಿ ಶತಕ ದಾಟಿದ ಮಂಗನ ಕಾಯಿಲೆ ಪ್ರಕರಣಗಳು
ಉತ್ತರ ಕನ್ನಡ ಜಿಲ್ಲೆಯಲ್ಲಿ ಶತಕ ದಾಟಿದ ಮಂಗನ ಕಾಯಿಲೆ ಪ್ರಕರಣಗಳು
Follow us on

ಕಾರವಾರ, ಮೇ 22: ಬರ ಬಿಸಿಲಿನಲ್ಲಿ ಸದ್ದಿಲ್ಲದೆ ಮಂಗನ ಕಾಯಿಲೆ (Monkey disease) ಪಸರಿಸುತ್ತಿದ್ದು, ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 108 ಜನರಲ್ಲಿ ಕೆಎಫ್​​ಡಿ ಪತ್ತೆ ಆಗಿದೆ. ಆ ಮೂಲಕ ಮಂಗನ ಕಾಯಿಲೆ ಪ್ರಕರಣದಲ್ಲಿ ಜಿಲ್ಲೆಯು ಶತಕ ದಾಟಿದೆ. ಸಿದ್ದಾಪುರ ಒಂದೇ ತಾಲೂಕಿನಲ್ಲಿ ಮಂಗನಕಾಯಿಲೆ 100 ಕ್ಕೇರಿದೆ. 11 ವರ್ಷದ ಬಾಲಕನಲ್ಲಿ ಕೂಡ ಮಂಗನಕಾಯಿಲೆ ಪತ್ತೆ ಆಗಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ಕೆಎಫ್​ಡಿ ಹೆಮಟೆ ಮನೆಯಲ್ಲಿ ಪತ್ತೆಯಾಗಿದೆ.

ಕೊರ್ಲಕೈ ಒಂದೇ ಗ್ರಾಮದಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆ ಆಗಿದ್ದು, ಮಂಗನ ಕಾಯಿಲೆ ಪ್ರಕರಣ ತಡೆಗಟ್ಟಲು ಜಿಲ್ಲಾಡಳಿತ ವಿಫಲವಾಗಿದೆ. ಇನ್ನು ಮಂಗನಕಾಯಿಲೆಯಿಂದಾಗಿ ಸಾವಿನ ಸಂಖ್ಯೆ 9ಕ್ಕೆ ಏರಿದೆ. ಹೀಗಾಗಿ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಹೆಚ್ಚಿದೆ.

ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಮಂಗನ ಕಾಯಿಲೆಗೆ ಕಾರ್ಮಿಕ ಮಹಿಳೆ ಬಲಿ, ಸೌದೆ ತರಲು ಎಸ್ಟೇಟಿಗೆ ಹೋಗಿದ್ದೇ ತಪಾಯ್ತಾ?

ಈ ವರ್ಷದ ಪ್ರಾರಂಭದಲ್ಲೇ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಮಂಗನಕಾಯಿಲೆ ಖಾತೆ ತೆರೆದಿತ್ತು. ಕಾಯಿಲೆಗೆ ಈ ಹಿಂದೆ ನೀಡಲಾಗುತಿದ್ದ ಲಸಿಕೆಯನ್ನು ಪರಿಣಾಮಕಾರಿ ಅಲ್ಲ ಹಾಗೂ ಗುಣಮಟ್ಟದ ಕಾರಣ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಹಿಂಪಡೆದಿತ್ತು. ಹೀಗಾಗಿ ಮಂಗನಕಾಯಿಲೆ ಗೆ ಲಸಿಕೆ ಸಹ ಇಲ್ಲ.ಹೀಗಾಗಿ ಜಿಲ್ಲಾ ಆರೋಗ್ಯ ಇಲಾಖೆ ಸೊಳ್ಳೆ, ಉಣಗು, ತಿಗಣೆಗಳು ಕಚ್ಚದಂತೆ ತಡೆಯುವ ಡಿ.ಎಮ್.ಪಿ ಆಯಲ್ ನನ್ನು ಮಾತ್ರ ಜನರಿಗೆ ನೀಡುತ್ತಿದ್ದು ಎರಡು ವರ್ಷದಿಂದ ಲಸಿಕೆ ಬಂದ್ ಮಾಡಿತ್ತು.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿ, ಹೆಚ್ಚಾದ ಆತಂಕ

ಹೀಗಾಗಿ ಜನರಲ್ಲಿ ಸಹ ಲಸಿಕೆ ಇಲ್ಲದ ಕಾರಣ ಸೊಂಕಿನ ಪ್ರಮಾಣ ಸಹ ಗಣನೀಯ ಏರಿಕೆ ಕಂಡಿದೆ. ಇನ್ನು ಈ ಹಿಂದೆ ಸರ್ಕಾರ ಮಂಗನಕಾಯಿಲೆಯಿಂದ ಮೃತರಾದ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿತ್ತು. ಇದರಂತೆ ಶಿವಮೊಗ್ಗ ಜಿಲ್ಲೆಯ ಮೃತರ ಕುಟುಂಬಕ್ಕೆ ಪರಿಹಾರ ನೀಡಿತ್ತು. ಆದರೆ ಉತ್ತರ ಕನ್ನಡ ಜಿಲ್ಲೆಯ ಮೃತರ ಕುಟುಂಬಕ್ಕೆ ಪರಿಹಾರ ಈವರೆಗೂ ಬಿಡುಗಡೆಯಾಗಿಲ್ಲ. ಇನ್ನು ವೈದ್ಯಕೀಯ ಮೂಲಭೂತ ವ್ಯವಸ್ಥೆ ಸಹ ಅಷ್ಟಕಷ್ಟೆ ಆಗಿದ್ದು ಸ್ಥಳೀಯ ಜನರು ಆರೋಗ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:59 pm, Wed, 22 May 24