AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಮಂಗನಕಾಯಿಲೆಗೆ ಒಂದೇ ದಿನ ಇಬ್ಬರು ಸಾವು: ಕೆಎಫ್​ಡಿಯಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಾಪುರ ತಾಲೂಕಿನಲ್ಲಿ ಮಂಗನಕಾಯಿಲೆಗೆ ಒಂದೇ ದಿನ ಇಬ್ಬರು ಸಾವನ್ನಪ್ಪಿದ್ದಾರೆ. ಹೆಗ್ಗೆಕೊಪ್ಪ ಗ್ರಾಮದ 88 ವರ್ಷದ ವೃದ್ಧ ಮತ್ತು ಸಿದ್ದಾಪುರ ತಾಲೂಕಿನ ಕಲ್ಲೂರು ಗ್ರಾಮದ 65 ವರ್ಷದ ವೃದ್ಧೆ ಮೃತರು. ಆ ಮೂಲಕ ಜಿಲ್ಲೆಯಲ್ಲಿ ಕೆಎಫ್​ಡಿಯಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆ ಆಗಿದೆ.

ಕಾರವಾರ: ಮಂಗನಕಾಯಿಲೆಗೆ ಒಂದೇ ದಿನ ಇಬ್ಬರು ಸಾವು: ಕೆಎಫ್​ಡಿಯಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆ
ಮಂಗನಕಾಯಿಲೆ (ಪ್ರಾತಿನಿಧಿಕ ಚಿತ್ರ)
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Mar 04, 2024 | 10:38 PM

Share

ಕಾರವಾರ, ಮಾರ್ಚ್​ 4: ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಾಪುರ ತಾಲೂಕಿನಲ್ಲಿ ಮಂಗನಕಾಯಿಲೆ (Monkey Fever) ಗೆ ಒಂದೇ ದಿನ ಇಬ್ಬರು ಸಾವನ್ನಪ್ಪಿದ್ದಾರೆ. ಹೆಗ್ಗೆಕೊಪ್ಪ ಗ್ರಾಮದ 88 ವರ್ಷದ ವೃದ್ಧ ಮತ್ತು ಸಿದ್ದಾಪುರ ತಾಲೂಕಿನ ಕಲ್ಲೂರು ಗ್ರಾಮದ 65 ವರ್ಷದ ವೃದ್ಧೆ ಮೃತರು. ಆ ಮೂಲಕ ಜಿಲ್ಲೆಯಲ್ಲಿ ಕೆಎಫ್​ಡಿಯಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆ ಆಗಿದೆ. ಸರಣಿ ಸಾವಿನಿಂದ ಸಿದ್ದಾಪುರ, ಶಿರಸಿ ತಾಲೂಕಿನಲ್ಲಿ ಆತಂಕ ಹೆಚ್ಚಿದೆ. ಸೂಕ್ತ ಲಸಿಕೆ ಇಲ್ಲದೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರದಾಡುವಂತಾಗಿದೆ.

ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಮೃತ್ಯು ಮೃದಂಗ: ಮತ್ತೊಂದು ಸಾವು

ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಮೃತ್ಯು ಮೃದಂಗ ಶುರು ಮಾಡಿದ್ದು, ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮೂರನೇ ಸಾವಾಗಿದೆ. 71 ವರ್ಷದ ಬಸವ ಪೂಜಾರಿ ಮೃತ ವ್ಯಕ್ತಿ. ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದ ನಿವಾಸಿ. ತೀವ್ರ ಜ್ವರದಿಂದ ಬಳಲುತ್ತಿದ್ದ ಬಸವ ಪೂಜಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕಳೆದ ಮೂರು ದಿನದ ಹಿಂದೆ KFD ಸೋಂಕಿರುವುದು ಪತ್ತೆಯಾಗಿತ್ತು. ರಾಜ್ಯದಲ್ಲೇ 8 ಜನರನ್ನ ಮಂಗನ ಕಾಯಿಲೆ ಬಲಿ ಪಡೆದಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ KFD ಹೆಚ್ಚುತ್ತಿದೆ. ಜಿಲ್ಲೆಯ 53 ಜನರಲ್ಲಿ KFD ಪತ್ತೆಯಾಗಿತ್ತು. 36 ಜನರು ಗುಣಮುಖ ‌,14 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಸಿಲ‌ತಾಪ ಹೆಚ್ಚಾದಂತೆ, ಮಲೆನಾಡು ಭಾಗದಲ್ಲಿ ಹೆಚ್ಚುತ್ತಿದೆ.

ಮಂಗನಕಾಯಿಲೆ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನಿರ್ನಳ್ಳಿ ಗ್ರಾಮದ ರಸ್ತೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಮೃತ ದೇಹ ಪತ್ತೆ ಆಗಿದೆ. ಇದು ನಿರ್ನಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಸದ್ಯ ಮಲೆನಾಡಿನ ಜನ ಭಯದಲ್ಲೆ ಜೀವನ ಸಾಗಿಸುತ್ತಿದ್ದಾರೆ.

ಇದನ್ನೂ ಓದಿ: ಮಂಗನ ಕಾಯಿಲೆ ಉಲ್ಭಣ ಬೆನ್ನಲ್ಲೇ ಉತ್ತರ ಕನ್ನಡದಲ್ಲಿ ಕೋತಿ ಮೃತ ದೇಹ ಪತ್ತೆ: ಹೆಚ್ಚಿದ ಆತಂಕ

ಪ್ರಸಕ್ತ ಸಾಲಿನಲ್ಲಿ ಬರದಿಂದ ತತ್ತರಿಸಿ ರಾಜ್ಯದ ಜನರಿಗೆ ಕೃಷಿಯಲ್ಲಿ ನಷ್ಟ, ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿರುವ ಬೆನ್ನಲ್ಲೇ ಕೆಲ ವರ್ಷಗಳಿಂದ ತನ್ನಗಾಗಿದ್ದ ರೋಗಗಳು ಮತ್ತೆ ಉಲ್ಭಣಿಸುತ್ತಿವೆ. ಮಳೆನಾಡು ಭಾಗದಲ್ಲಿಕಳೆದ ಐದು ವರ್ಷಗಳಿಂದ ಕಾಡಿದ್ದ ಮಂಗನ ಕಾಯಿಲೆ ಇತ್ತೀಚೆಗೆ ಮತ್ತೆ ಎಂಟ್ರಿ ಕೊಟ್ಟಿತ್ತು. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪೂರ ತಾಲೂಕಿನ ಜಿಡ್ಡಿ ಗ್ರಾಮದ ವ್ಯಾಪ್ತಿಯ ಕಾಡಿನಲ್ಲಿ ಕಳೆದ 15 ದಿನಗಳ ಹಿಂದೆ ಚರ್ಮ ರೋಗದಿಂದ ಮಂಗ ಸಾವನಪ್ಪಿದ್ದರು. ಅದರ ಅಂತ್ಯಕ್ರಿಯೆ ಮಾಡದೆ ಹಾಗೆ ಇದ್ದಿದ್ದರಿಂದ. ಅದರ ಉಣ್ಣೆಯಿಂದ ಬಂದ ವೈರಸ್ ಜಿಡ್ಡಿ ಗ್ರಾಮದ ಸುತ್ತಮುತ್ತಲು ಪಸರಿಸಲು ಆರಂಭಿಸಿತ್ತು.

ಇದುವರೆಗೂ 47 ಜನರಲ್ಲಿ ಮಂಗನ ಕಾಯಿಲೆ ಪತ್ತೆ ಆಗಿದೆ. 24 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 13 ಜನ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗ ಅಂಟಿದ 37 ಜನರು ಔಟ್ ಆಫ್ ಡೆಂಜರ್ ಇದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ ಮೂರಕ್ಕೇರಿಕೆ

ರೋಗ ಕಾಣಿಸಿಕೊಂಡಿರುವವರ ಪೈಕಿ ಸದ್ಯ ಯಾರಿಗೂ ಪ್ರಾಣಾಪಾಯ ಇಲ್ಲ. ಆದರೆ ಈಗ ಬಂದವರಲ್ಲಿ ಮತ್ತೆ ರೋಗ ಕಾಣಿಸಿಕೊಂಡರೆ, ತಿವ್ರ ಜ್ವರಕ್ಕೆ ತುತ್ತಾಗಿ ರಕ್ತಸ್ರಾವ ಆಗುವ ಸಾಧ್ಯತೆ ಇರುತ್ತದೆ. ಹಾಗಾಗಿ ರೋಗ ಬರದಂತೆ ಮುಂಜಾಗೃತೆ ಕ್ರಮ ಕೈಗೊಳ್ಳುವುದು ಭಾರಿ ಅವಶ್ಯಕ ಎಂದು ಉತ್ತರ ಕನ್ನಡ ಜಿಲ್ಲಾಆರೋಗ್ಯಧಿಕಾರಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:23 pm, Mon, 4 March 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ