AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಾಯಕ ನಾಯ್ಕ್ ಹತ್ಯೆ ಕೇಸ್: ಬಂಧಿತರು ಬಾಯ್ಬಿಡುತ್ತಿದ್ದಂತೆ ಇತ್ತ ಬ್ಯುಸಿನೆಸ್ ಮ್ಯಾನ್​ ಆತ್ಮಹತ್ಯೆ

ಕಾರವಾರ ತಾಲೂಕಿನ ಹಣಕೋಣದಲ್ಲಿ ಸೆಪ್ಟೆಂಬರ್ 22 ರಂದು ಉದ್ಯಮಿ ವಿನಾಯಕ ನಾಯ್ಕ್ ಆಗಿತ್ತು. ಇದೀಗ ಈ ಹತ್ಯೆಗೆ ಸುಪಾರಿ ಕೊಟ್ಟಿದ್ದರು ಎನ್ನಲಾದ ಗೋವಾ ಮೂಲದ ಉದ್ಯಮಿ ಗುರುಪ್ರಸಾದ ಎಂಬಾತ ಗೋವಾದ ಮಾಂಡೋವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಪತ್ತೆಯಾದ ಮೃತದೇಹ ಗುರುಪ್ರಸಾದ ರಾಣೆದೆ ಎಂಬುವುದು ದೃಢವಾಗಿದೆ.  

ವಿನಾಯಕ ನಾಯ್ಕ್ ಹತ್ಯೆ ಕೇಸ್: ಬಂಧಿತರು ಬಾಯ್ಬಿಡುತ್ತಿದ್ದಂತೆ ಇತ್ತ ಬ್ಯುಸಿನೆಸ್ ಮ್ಯಾನ್​ ಆತ್ಮಹತ್ಯೆ
ವಿನಾಯಕ ನಾಯ್ಕ್ ಹತ್ಯೆ ಕೇಸ್: ಬಂಧಿತರು ಬಾಯ್ಬಿಡುತ್ತಿದ್ದಂತೆ ಇತ್ತ ಬ್ಯುಸಿನೆಸ್ ಮ್ಯಾನ್ ಆತ್ಮಹತ್ಯೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Sep 25, 2024 | 7:50 PM

Share

ಕಾರವಾರ, ಸೆಪ್ಟೆಂಬರ್​ 25: ನಗರದ ಹಣಕೋಣದಲ್ಲಿ ಉದ್ಯಮಿ (businessman) ವಿನಾಯಕ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲು ಸುಪಾರಿ ಕೊಟ್ಟಿದ್ದರು ಎನ್ನಲಾದ ಗೋವಾ ಮೂಲದ ಉದ್ಯಮಿ ಇದೀಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಗುರುಪ್ರಸಾದ ರಾಣೆ ಮೃತ ಉದ್ಯಮಿ. ಗೋವಾದ ಮಾಂಡೋವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರವಾರ ತಾಲೂಕಿನ ಹಣಕೋಣದಲ್ಲಿ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 5:30ಕ್ಕೆ ಉದ್ಯಮಿ ವಿನಾಯಕ ನಾಯ್ಕ್​​ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ಬರ್ಬರ್ ಹತ್ಯೆ ಮಾಡಿ ಹಂತಕರು ಪರಾರಿ ಆಗಿದ್ದರು. ಬಳಿಕ ಹಂತಕರಿಗಾಗಿ ಉತ್ತರ ಕನ್ನಡ ಪೊಲೀಸರು ಬಲೆ ಬಿಸಿದ್ದರು. ಅದರಂತೆಯೇ ನಿನ್ನೆ ಮೂವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಗಣೇಶ ಪೂಜೆಗೆ ಇಟ್ಟ ಹಣದ ವಿಚಾರದಲ್ಲಿ ಸಹೋದರರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಬಂಧಿತರು ಕೊಲೆಗೆ ಗುರುಪ್ರಸಾದ ರಾಣೆ ಸುಪಾರಿ ಕೊಟ್ಟಿದ್ದಾರೆ ಎಂದು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾರೆ. ಅತ್ತ ಉದ್ಯಮಿ ಗುರುಪ್ರಸಾದ ಹೆಸರು ಹೇಳುತ್ತಿದ್ದಂತೆ ಗೋವಾ, ಮುಂಬೈ, ದೆಹಲಿಯಲ್ಲಿ ಹುಡುಕಾಟ ನಡೆಸಿದ್ದರು. ಬಳಿಕ ಕೆಲವೇ ನಿಮಿಷಗಳಲ್ಲಿ ಗೋವಾದ ಮಾಂಡೋವಿ ನದಿಯಲ್ಲಿ ಮೃತ ದೇಹ ಒಂದು ಪತ್ತೆಯಾಗಿದೆ. ಪತ್ತೆಯಾದ ಮೃತದೇಹ ಗುರುಪ್ರಸಾದ ರಾಣೆದೆ ಎಂಬುವುದು ದೃಢವಾಗಿದೆ.

ಗುರುಪ್ರಸಾದ ರಾಣೆ ಉದ್ಯಮಿ ವಿನಾಯಕ ನಾಯ್ಕ್ ಅವರನ್ನು ವೈಯಕ್ತಿಕ ಕಾರಣಕ್ಕೆ ಹತ್ತೆ ಮಾಡಿಸಿದ್ದಾರೆ ಎಂಬುವುದು ತಿಳಿದುಬಂದಿದೆ. ಬಂಧಿತ ಮೂವರ ಪೈಕಿ ಇಬ್ಬರೂ ಬಿಹಾರಿಗಳು ಹಾಗೂ ಓರ್ವ ಗುರುಪ್ರಸಾದ ಸ್ನೇಹಿತ ಎನ್ನಲಾಗಿದೆ. ಸದ್ಯ ಆರೋಪಿಗಳನ್ನು ಚಿತ್ತಾಕುಲ ಪೊಲೀಸ್​ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.

ಹೆರಿಗೆಗೆ ಬಂದಿದ್ದ ಮಹಿಳೆ ಸಾವು: ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ದಾವಣಗೆರೆ: ಜಿಲ್ಲೆಯ ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯದಿಂದ ಮಹಿಳೆ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಹತ್ತು ದಿನಗಳ ಹಿಂದೆ ಹೆರಿಗೆಗೆ ಬಂದಿದ್ದ ಸುಚಿತ್ರಾ(23) ಮೃತ ಮಹಿಳೆ. ಸದ್ಯ ಸರ್ಕಾರಿ ಆಸ್ಪತ್ರೆ ಮುಂದೆ ಸುಚಿತ್ರಾ ಸಂಬಂಧಿಕರು ಧರಣಿ ನಡೆಸಿದ್ದಾರೆ.

ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ ಮೃತದೇಹದ ಗುರುತು ಪತ್ತೆ, ಪತಿ ಪೊಲೀಸ್ ವಶಕ್ಕೆ

ಸೆ.15ರಂದು ಜಗಳೂರು ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು. ಬಳಿಕೆ ತೀವ್ರ ರಕ್ತಸ್ರಾವದಿಂದ ಬಳಲಿದ್ದ ಸುಚಿತ್ರಾ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸುಚಿತ್ರಾಗೆ ಹೆರಿಗೆ ಆಗಿದೆ. ಮಗುವಿಗೆ ಜನ್ಮ ನೀಡಿದ ಬಳಿಕ ಸುಚಿತ್ರಾ ಮೃತಪಟ್ಟಿದ್ದಾರೆ. ಜಗಳೂರಿನಲ್ಲಿ ವೈದ್ಯರು ವಿಳಂಬ ಮಾಡಿದ್ದೇ ಘಟನೆಗೆ ಕಾರಣ ಎಂದು ವೈದ್ಯ ಹಾಗೂ ಸಿಬ್ಬಂದಿ ವಿರುದ್ಧ ಆರೋಪ ಮಾಡಲಾಗಿದ್ದು, ಈ ಸಂಬಂಧ ಜಗಳೂರು ಠಾಣೆಗೆ ಸಂಬಂಧಿಕರು ದೂರು ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ