AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಾಯಕ ನಾಯ್ಕ್ ಹತ್ಯೆ ಕೇಸ್: ಬಂಧಿತರು ಬಾಯ್ಬಿಡುತ್ತಿದ್ದಂತೆ ಇತ್ತ ಬ್ಯುಸಿನೆಸ್ ಮ್ಯಾನ್​ ಆತ್ಮಹತ್ಯೆ

ಕಾರವಾರ ತಾಲೂಕಿನ ಹಣಕೋಣದಲ್ಲಿ ಸೆಪ್ಟೆಂಬರ್ 22 ರಂದು ಉದ್ಯಮಿ ವಿನಾಯಕ ನಾಯ್ಕ್ ಆಗಿತ್ತು. ಇದೀಗ ಈ ಹತ್ಯೆಗೆ ಸುಪಾರಿ ಕೊಟ್ಟಿದ್ದರು ಎನ್ನಲಾದ ಗೋವಾ ಮೂಲದ ಉದ್ಯಮಿ ಗುರುಪ್ರಸಾದ ಎಂಬಾತ ಗೋವಾದ ಮಾಂಡೋವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಪತ್ತೆಯಾದ ಮೃತದೇಹ ಗುರುಪ್ರಸಾದ ರಾಣೆದೆ ಎಂಬುವುದು ದೃಢವಾಗಿದೆ.  

ವಿನಾಯಕ ನಾಯ್ಕ್ ಹತ್ಯೆ ಕೇಸ್: ಬಂಧಿತರು ಬಾಯ್ಬಿಡುತ್ತಿದ್ದಂತೆ ಇತ್ತ ಬ್ಯುಸಿನೆಸ್ ಮ್ಯಾನ್​ ಆತ್ಮಹತ್ಯೆ
ವಿನಾಯಕ ನಾಯ್ಕ್ ಹತ್ಯೆ ಕೇಸ್: ಬಂಧಿತರು ಬಾಯ್ಬಿಡುತ್ತಿದ್ದಂತೆ ಇತ್ತ ಬ್ಯುಸಿನೆಸ್ ಮ್ಯಾನ್ ಆತ್ಮಹತ್ಯೆ
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 25, 2024 | 7:50 PM

Share

ಕಾರವಾರ, ಸೆಪ್ಟೆಂಬರ್​ 25: ನಗರದ ಹಣಕೋಣದಲ್ಲಿ ಉದ್ಯಮಿ (businessman) ವಿನಾಯಕ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲು ಸುಪಾರಿ ಕೊಟ್ಟಿದ್ದರು ಎನ್ನಲಾದ ಗೋವಾ ಮೂಲದ ಉದ್ಯಮಿ ಇದೀಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಗುರುಪ್ರಸಾದ ರಾಣೆ ಮೃತ ಉದ್ಯಮಿ. ಗೋವಾದ ಮಾಂಡೋವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರವಾರ ತಾಲೂಕಿನ ಹಣಕೋಣದಲ್ಲಿ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 5:30ಕ್ಕೆ ಉದ್ಯಮಿ ವಿನಾಯಕ ನಾಯ್ಕ್​​ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ಬರ್ಬರ್ ಹತ್ಯೆ ಮಾಡಿ ಹಂತಕರು ಪರಾರಿ ಆಗಿದ್ದರು. ಬಳಿಕ ಹಂತಕರಿಗಾಗಿ ಉತ್ತರ ಕನ್ನಡ ಪೊಲೀಸರು ಬಲೆ ಬಿಸಿದ್ದರು. ಅದರಂತೆಯೇ ನಿನ್ನೆ ಮೂವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಗಣೇಶ ಪೂಜೆಗೆ ಇಟ್ಟ ಹಣದ ವಿಚಾರದಲ್ಲಿ ಸಹೋದರರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಬಂಧಿತರು ಕೊಲೆಗೆ ಗುರುಪ್ರಸಾದ ರಾಣೆ ಸುಪಾರಿ ಕೊಟ್ಟಿದ್ದಾರೆ ಎಂದು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾರೆ. ಅತ್ತ ಉದ್ಯಮಿ ಗುರುಪ್ರಸಾದ ಹೆಸರು ಹೇಳುತ್ತಿದ್ದಂತೆ ಗೋವಾ, ಮುಂಬೈ, ದೆಹಲಿಯಲ್ಲಿ ಹುಡುಕಾಟ ನಡೆಸಿದ್ದರು. ಬಳಿಕ ಕೆಲವೇ ನಿಮಿಷಗಳಲ್ಲಿ ಗೋವಾದ ಮಾಂಡೋವಿ ನದಿಯಲ್ಲಿ ಮೃತ ದೇಹ ಒಂದು ಪತ್ತೆಯಾಗಿದೆ. ಪತ್ತೆಯಾದ ಮೃತದೇಹ ಗುರುಪ್ರಸಾದ ರಾಣೆದೆ ಎಂಬುವುದು ದೃಢವಾಗಿದೆ.

ಗುರುಪ್ರಸಾದ ರಾಣೆ ಉದ್ಯಮಿ ವಿನಾಯಕ ನಾಯ್ಕ್ ಅವರನ್ನು ವೈಯಕ್ತಿಕ ಕಾರಣಕ್ಕೆ ಹತ್ತೆ ಮಾಡಿಸಿದ್ದಾರೆ ಎಂಬುವುದು ತಿಳಿದುಬಂದಿದೆ. ಬಂಧಿತ ಮೂವರ ಪೈಕಿ ಇಬ್ಬರೂ ಬಿಹಾರಿಗಳು ಹಾಗೂ ಓರ್ವ ಗುರುಪ್ರಸಾದ ಸ್ನೇಹಿತ ಎನ್ನಲಾಗಿದೆ. ಸದ್ಯ ಆರೋಪಿಗಳನ್ನು ಚಿತ್ತಾಕುಲ ಪೊಲೀಸ್​ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.

ಹೆರಿಗೆಗೆ ಬಂದಿದ್ದ ಮಹಿಳೆ ಸಾವು: ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ದಾವಣಗೆರೆ: ಜಿಲ್ಲೆಯ ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯದಿಂದ ಮಹಿಳೆ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಹತ್ತು ದಿನಗಳ ಹಿಂದೆ ಹೆರಿಗೆಗೆ ಬಂದಿದ್ದ ಸುಚಿತ್ರಾ(23) ಮೃತ ಮಹಿಳೆ. ಸದ್ಯ ಸರ್ಕಾರಿ ಆಸ್ಪತ್ರೆ ಮುಂದೆ ಸುಚಿತ್ರಾ ಸಂಬಂಧಿಕರು ಧರಣಿ ನಡೆಸಿದ್ದಾರೆ.

ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ ಮೃತದೇಹದ ಗುರುತು ಪತ್ತೆ, ಪತಿ ಪೊಲೀಸ್ ವಶಕ್ಕೆ

ಸೆ.15ರಂದು ಜಗಳೂರು ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು. ಬಳಿಕೆ ತೀವ್ರ ರಕ್ತಸ್ರಾವದಿಂದ ಬಳಲಿದ್ದ ಸುಚಿತ್ರಾ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸುಚಿತ್ರಾಗೆ ಹೆರಿಗೆ ಆಗಿದೆ. ಮಗುವಿಗೆ ಜನ್ಮ ನೀಡಿದ ಬಳಿಕ ಸುಚಿತ್ರಾ ಮೃತಪಟ್ಟಿದ್ದಾರೆ. ಜಗಳೂರಿನಲ್ಲಿ ವೈದ್ಯರು ವಿಳಂಬ ಮಾಡಿದ್ದೇ ಘಟನೆಗೆ ಕಾರಣ ಎಂದು ವೈದ್ಯ ಹಾಗೂ ಸಿಬ್ಬಂದಿ ವಿರುದ್ಧ ಆರೋಪ ಮಾಡಲಾಗಿದ್ದು, ಈ ಸಂಬಂಧ ಜಗಳೂರು ಠಾಣೆಗೆ ಸಂಬಂಧಿಕರು ದೂರು ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು