AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಾಯಕ ನಾಯ್ಕ್ ಹತ್ಯೆ ಕೇಸ್: ಬಂಧಿತರು ಬಾಯ್ಬಿಡುತ್ತಿದ್ದಂತೆ ಇತ್ತ ಬ್ಯುಸಿನೆಸ್ ಮ್ಯಾನ್​ ಆತ್ಮಹತ್ಯೆ

ಕಾರವಾರ ತಾಲೂಕಿನ ಹಣಕೋಣದಲ್ಲಿ ಸೆಪ್ಟೆಂಬರ್ 22 ರಂದು ಉದ್ಯಮಿ ವಿನಾಯಕ ನಾಯ್ಕ್ ಆಗಿತ್ತು. ಇದೀಗ ಈ ಹತ್ಯೆಗೆ ಸುಪಾರಿ ಕೊಟ್ಟಿದ್ದರು ಎನ್ನಲಾದ ಗೋವಾ ಮೂಲದ ಉದ್ಯಮಿ ಗುರುಪ್ರಸಾದ ಎಂಬಾತ ಗೋವಾದ ಮಾಂಡೋವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಪತ್ತೆಯಾದ ಮೃತದೇಹ ಗುರುಪ್ರಸಾದ ರಾಣೆದೆ ಎಂಬುವುದು ದೃಢವಾಗಿದೆ.  

ವಿನಾಯಕ ನಾಯ್ಕ್ ಹತ್ಯೆ ಕೇಸ್: ಬಂಧಿತರು ಬಾಯ್ಬಿಡುತ್ತಿದ್ದಂತೆ ಇತ್ತ ಬ್ಯುಸಿನೆಸ್ ಮ್ಯಾನ್​ ಆತ್ಮಹತ್ಯೆ
ವಿನಾಯಕ ನಾಯ್ಕ್ ಹತ್ಯೆ ಕೇಸ್: ಬಂಧಿತರು ಬಾಯ್ಬಿಡುತ್ತಿದ್ದಂತೆ ಇತ್ತ ಬ್ಯುಸಿನೆಸ್ ಮ್ಯಾನ್ ಆತ್ಮಹತ್ಯೆ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 25, 2024 | 7:50 PM

ಕಾರವಾರ, ಸೆಪ್ಟೆಂಬರ್​ 25: ನಗರದ ಹಣಕೋಣದಲ್ಲಿ ಉದ್ಯಮಿ (businessman) ವಿನಾಯಕ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲು ಸುಪಾರಿ ಕೊಟ್ಟಿದ್ದರು ಎನ್ನಲಾದ ಗೋವಾ ಮೂಲದ ಉದ್ಯಮಿ ಇದೀಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಗುರುಪ್ರಸಾದ ರಾಣೆ ಮೃತ ಉದ್ಯಮಿ. ಗೋವಾದ ಮಾಂಡೋವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರವಾರ ತಾಲೂಕಿನ ಹಣಕೋಣದಲ್ಲಿ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 5:30ಕ್ಕೆ ಉದ್ಯಮಿ ವಿನಾಯಕ ನಾಯ್ಕ್​​ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ಬರ್ಬರ್ ಹತ್ಯೆ ಮಾಡಿ ಹಂತಕರು ಪರಾರಿ ಆಗಿದ್ದರು. ಬಳಿಕ ಹಂತಕರಿಗಾಗಿ ಉತ್ತರ ಕನ್ನಡ ಪೊಲೀಸರು ಬಲೆ ಬಿಸಿದ್ದರು. ಅದರಂತೆಯೇ ನಿನ್ನೆ ಮೂವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಗಣೇಶ ಪೂಜೆಗೆ ಇಟ್ಟ ಹಣದ ವಿಚಾರದಲ್ಲಿ ಸಹೋದರರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಬಂಧಿತರು ಕೊಲೆಗೆ ಗುರುಪ್ರಸಾದ ರಾಣೆ ಸುಪಾರಿ ಕೊಟ್ಟಿದ್ದಾರೆ ಎಂದು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾರೆ. ಅತ್ತ ಉದ್ಯಮಿ ಗುರುಪ್ರಸಾದ ಹೆಸರು ಹೇಳುತ್ತಿದ್ದಂತೆ ಗೋವಾ, ಮುಂಬೈ, ದೆಹಲಿಯಲ್ಲಿ ಹುಡುಕಾಟ ನಡೆಸಿದ್ದರು. ಬಳಿಕ ಕೆಲವೇ ನಿಮಿಷಗಳಲ್ಲಿ ಗೋವಾದ ಮಾಂಡೋವಿ ನದಿಯಲ್ಲಿ ಮೃತ ದೇಹ ಒಂದು ಪತ್ತೆಯಾಗಿದೆ. ಪತ್ತೆಯಾದ ಮೃತದೇಹ ಗುರುಪ್ರಸಾದ ರಾಣೆದೆ ಎಂಬುವುದು ದೃಢವಾಗಿದೆ.

ಗುರುಪ್ರಸಾದ ರಾಣೆ ಉದ್ಯಮಿ ವಿನಾಯಕ ನಾಯ್ಕ್ ಅವರನ್ನು ವೈಯಕ್ತಿಕ ಕಾರಣಕ್ಕೆ ಹತ್ತೆ ಮಾಡಿಸಿದ್ದಾರೆ ಎಂಬುವುದು ತಿಳಿದುಬಂದಿದೆ. ಬಂಧಿತ ಮೂವರ ಪೈಕಿ ಇಬ್ಬರೂ ಬಿಹಾರಿಗಳು ಹಾಗೂ ಓರ್ವ ಗುರುಪ್ರಸಾದ ಸ್ನೇಹಿತ ಎನ್ನಲಾಗಿದೆ. ಸದ್ಯ ಆರೋಪಿಗಳನ್ನು ಚಿತ್ತಾಕುಲ ಪೊಲೀಸ್​ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.

ಹೆರಿಗೆಗೆ ಬಂದಿದ್ದ ಮಹಿಳೆ ಸಾವು: ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ದಾವಣಗೆರೆ: ಜಿಲ್ಲೆಯ ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ನಿರ್ಲಕ್ಷ್ಯದಿಂದ ಮಹಿಳೆ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಹತ್ತು ದಿನಗಳ ಹಿಂದೆ ಹೆರಿಗೆಗೆ ಬಂದಿದ್ದ ಸುಚಿತ್ರಾ(23) ಮೃತ ಮಹಿಳೆ. ಸದ್ಯ ಸರ್ಕಾರಿ ಆಸ್ಪತ್ರೆ ಮುಂದೆ ಸುಚಿತ್ರಾ ಸಂಬಂಧಿಕರು ಧರಣಿ ನಡೆಸಿದ್ದಾರೆ.

ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ ಮೃತದೇಹದ ಗುರುತು ಪತ್ತೆ, ಪತಿ ಪೊಲೀಸ್ ವಶಕ್ಕೆ

ಸೆ.15ರಂದು ಜಗಳೂರು ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು. ಬಳಿಕೆ ತೀವ್ರ ರಕ್ತಸ್ರಾವದಿಂದ ಬಳಲಿದ್ದ ಸುಚಿತ್ರಾ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸುಚಿತ್ರಾಗೆ ಹೆರಿಗೆ ಆಗಿದೆ. ಮಗುವಿಗೆ ಜನ್ಮ ನೀಡಿದ ಬಳಿಕ ಸುಚಿತ್ರಾ ಮೃತಪಟ್ಟಿದ್ದಾರೆ. ಜಗಳೂರಿನಲ್ಲಿ ವೈದ್ಯರು ವಿಳಂಬ ಮಾಡಿದ್ದೇ ಘಟನೆಗೆ ಕಾರಣ ಎಂದು ವೈದ್ಯ ಹಾಗೂ ಸಿಬ್ಬಂದಿ ವಿರುದ್ಧ ಆರೋಪ ಮಾಡಲಾಗಿದ್ದು, ಈ ಸಂಬಂಧ ಜಗಳೂರು ಠಾಣೆಗೆ ಸಂಬಂಧಿಕರು ದೂರು ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ