AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಎಸ್‌ ಪೂರ್ವಭಾವಿ ಪರೀಕ್ಷೆ: ಕೆಪಿಎಸ್​ಸಿ ವಿರುದ್ಧ ಕಿಡಕಾರಿದ ಹೆಚ್​ಡಿ ಕುಮಾರಸ್ವಾಮಿ

ಆಗಸ್ಟ್​ 25ರಂದು ನಿಗದಿಯಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆಯನ್ನು ಇತ್ತೀಚೆಗೆ ಮತ್ತೆ ಮುಂದೂಡಿಕೆ ಮಾಡಲಾಗಿತ್ತು. ಸದ್ಯ ಈ ವಿಚಾರವಾಗಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆ: ಕೆಪಿಎಸ್​ಸಿ ವಿರುದ್ಧ ಕಿಡಕಾರಿದ ಹೆಚ್​ಡಿ ಕುಮಾರಸ್ವಾಮಿ
ಕೆಎಎಸ್‌ ಪೂರ್ವಭಾವಿ ಪರೀಕ್ಷೆ: ಕೆಪಿಎಸ್​ಸಿ ವಿರುದ್ಧ ಕಿಡಕಾರಿದ ಹೆಚ್​ಡಿ ಕುಮಾರಸ್ವಾಮಿ
ಗಂಗಾಧರ​ ಬ. ಸಾಬೋಜಿ
|

Updated on: Aug 15, 2024 | 3:37 PM

Share

ಬೆಂಗಳೂರು, ಆಗಸ್ಟ್​ 15: ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ ಕೆಎಎಸ್​​ (KAS) ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ ಕೆಪಿಎಸ್​ಸಿ ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ ಕೆಪಿಎಸ್​ಸಿಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ ಎಂದು ತಿಳಿಸಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. ಕಾಂಗ್ರೆಸ್​ ಸರಕಾರ ಹಾಗೂ ಕೆಪಿಎಸ್​ಸಿ ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ: ಹೊಸ ದಿನಾಂಕ ನಿಗದಿಪಡಿಸಿದ ಕೆಪಿಎಸ್​​ಸಿ

ಆಗಸ್ಟ್​ 25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆಯನ್ನು ಇತ್ತೀಚೆಗೆ ಮತ್ತೆ ಮುಂದೂಡಿಕೆ ಮಾಡಲಾಗಿತ್ತು. ಆ.25ರಂದೇ ಬ್ಯಾಂಕಿಂಗ್‌ ಪರೀಕ್ಷೆ ನಿಗದಿಯಾಗಿದ್ದರಿಂದ ಕೆಎಎಸ್‌ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಕೆಪಿಎಸ್​ಸಿ ಪರೀಕ್ಷೆ ದಿನಾಂಕ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ