AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ, ವೈಮಾನಿಕ ತರಬೇತಿ ಶಾಲೆ ಪುನಾರಂಭ: ನಾರಾಯಣಗೌಡ ಮಾಹಿತಿ

ಬೆಂಗಳೂರು: ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ ನೀಡುವ ಕುರಿತು ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಇಂದು (ಸಪ್ಟೆಂಬರ್ 8) ವಿಕಾಸಸೌಧದಲ್ಲಿ ಹೇಳಿಕೆ ನೀಡಿದ್ದಾರೆ. 1,666 ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲಾಗುವುದು. ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ ನೀಡುತ್ತೇವೆ ಎಂದು ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ವಿಕಾಸಸೌಧದಲ್ಲಿ ನಾರಾಯಣಗೌಡ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಯುವ ಸಬಲೀಕರಣ, ಕ್ರೀಡಾ ಸಚಿವ ನಾರಾಯಣಗೌಡ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಶೀಘ್ರದಲ್ಲೇ […]

ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ, ವೈಮಾನಿಕ ತರಬೇತಿ ಶಾಲೆ ಪುನಾರಂಭ: ನಾರಾಯಣಗೌಡ ಮಾಹಿತಿ
ಸಚಿವ ಕೆ.ಸಿ. ನಾರಾಯಣ ಗೌಡ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Sep 08, 2021 | 5:40 PM

Share

ಬೆಂಗಳೂರು: ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ ನೀಡುವ ಕುರಿತು ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಇಂದು (ಸಪ್ಟೆಂಬರ್ 8) ವಿಕಾಸಸೌಧದಲ್ಲಿ ಹೇಳಿಕೆ ನೀಡಿದ್ದಾರೆ. 1,666 ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲಾಗುವುದು. ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ ನೀಡುತ್ತೇವೆ ಎಂದು ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ವಿಕಾಸಸೌಧದಲ್ಲಿ ನಾರಾಯಣಗೌಡ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಯುವ ಸಬಲೀಕರಣ, ಕ್ರೀಡಾ ಸಚಿವ ನಾರಾಯಣಗೌಡ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.

ಶೀಘ್ರದಲ್ಲೇ ತರಬೇತಿ ಆರಂಭಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ತಳಮಟ್ಟದಲ್ಲೇ ಕ್ರೀಡಾಪಟುಗಳನ್ನು ಗುರುತಿಸಿ ತರಬೇತಿ ಕೊಡುತ್ತೇವೆ. ತಿಂಗಳಾಂತ್ಯದಲ್ಲಿ ಕ್ರೀಡಾ ಇಲಾಖೆಯಿಂದ ತರಬೇತಿ ಶುರು ಮಾಡುತ್ತೇವೆ ಎಂದು ನಾರಾಯಣಗೌಡ ಮಾಹಿತಿ ನೀಡಿದ್ದಾರೆ.

ಅಧಿವೇಶನ ಮುಗಿದ ಮರುದಿನವೇ ವೈಮಾನಿಕ ತರಬೇತಿ ಪುನಾರಂಭ ಮಾಡಲಾಗುತ್ತದೆ. ಜಕ್ಕೂರು ವೈಮಾನಿಕ ತರಬೇತಿ ಶಾಲೆ ಪುನಾರಂಭವಾಗುತ್ತೆ. ಸಿಎಂ ಬಸವರಾಜ ಬೊಮ್ಮಾಯಿ ಆಹ್ವಾನಿಸಿ ಉದ್ಘಾಟಿಸಲು ತೀರ್ಮಾನ ಮಾಡಿದ್ದೇವೆ ಎಂದು ಕೂಡ ನಾರಾಯಣಗೌಡ ಹೇಳಿದ್ದಾರೆ. ಹಳೇ ವಿದ್ಯಾರ್ಥಿಗಳಿಗೆ ಹಿಂದಿನ ಶುಲ್ಕ ದರದಲ್ಲೇ ತರಬೇತಿ ನೀಡುತ್ತೇವೆ. ಹೊಸದಾಗಿ ಪ್ರವೇಶ ಪಡೆಯುವವರಿಗೆ ಪರಿಷ್ಕೃತ ದರ ಹೇಳಲಾಗುವುದು. ಈ ಬಗ್ಗೆ ಕೂಡ ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಖೇಲೋ ಇಂಡಿಯಾ ಕೇಂದ್ರ ಪ್ರಾರಂಭ ವಿಚಾರವಾಗಿ ಮಾತನಾಡಿದ ಅವರು, ಹಣ ಬಿಡುಗಡೆಯಾದರೂ ಕೇಂದ್ರ ಆರಂಭವಾಗದ ಹಿನ್ನೆಲೆ ಅಧಿಕಾರಿಗಳ ಕಾರ್ಯವೈಖರಿಗೆ ನಾರಾಯಣಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೇಸರ ಹೊರಹಾಕಿದ್ದಾರೆ. ಇದುವರೆಗೂ ಯಾವುದೇ ಪ್ರಕ್ರಿಯೆಯೂ ಆರಂಭವಾಗಿಲ್ಲ. ಕೇವಲ ಘೋಷಣೆಗಷ್ಟೇ ಯೋಜನೆ ಸೀಮಿತವಾದರೆ ಹೇಗೆ? ತಕ್ಷಣ ಕೆಲಸ ಆರಂಭಿಸದಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ನಾರಾಯಣಗೌಡ ಎಚ್ಚರಿಕೆ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, 1 ವಾರದೊಳಗೆ ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಪ್ರತಿ ಶಾಲೆಯಲ್ಲೂ ಕನಿಷ್ಠ ಒಂದು ಗುಂಟೆಯಾದರೂ ಆಟದ ಮೈದಾನ ಇರಬೇಕು: ಕ್ರೀಡಾ ಸಚಿವ ನಾರಾಯಣಗೌಡ

ಇದನ್ನೂ ಓದಿ: ಪ್ಯಾರಾ ಓಲಂಪಿಕ್​ನಲ್ಲಿ ಚಿನ್ನ ಗೆದ್ದರೆ 5 ಕೋಟಿ ರೂಪಾಯಿ ಬಹುಮಾನ: ಸಚಿವ ಡಾ. ನಾರಾಯಣಗೌಡ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!