AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಹಾಪೋಹಗಳಿಗೆ ತೆರೆ: ಚುನಾವಣಾ ಸಂಬಂಧಿ ಚರ್ಚೆಗಷ್ಟೇ ಸೀಮಿತವಾಯ್ತಾ ಕಾಂಗ್ರೆಸಿಗರ ಹೈವೋಲ್ಟೇಜ್​​ ಮೀಟಿಂಗ್​?

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆಗೆ ದೆಹಲಿಯಲ್ಲಿ ಹೈಕಮಾಂಡ್ ಹೈವೋಲ್ಟೇಜ್ ಸಭೆಯ ನಂತರ, ಕೇವಲ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆ ಕುರಿತು ಮಾತ್ರ ಚರ್ಚೆಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಆ ಮೂಲಕ ಇಂದಿನ ಸಭೆಯಲ್ಲಾದರೂ ರಾಜ್ಯದಲ್ಲಿನ ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ತೆರೆ ಬೀಳಬಹುದೆಂಬ ಬೆಂಬಲಿಗರ ನಿರೀಕ್ಷೆ ಹುಸಿಯಾಗಿದೆ.

ಊಹಾಪೋಹಗಳಿಗೆ ತೆರೆ: ಚುನಾವಣಾ ಸಂಬಂಧಿ ಚರ್ಚೆಗಷ್ಟೇ ಸೀಮಿತವಾಯ್ತಾ ಕಾಂಗ್ರೆಸಿಗರ ಹೈವೋಲ್ಟೇಜ್​​ ಮೀಟಿಂಗ್​?
ಕಾಂಗ್ರೆಸಿಗರ ಜಂಟಿ ಸುದ್ದಿಗೋಷ್ಠಿImage Credit source: Tv9 Kannada
Pramod Shastri G
| Edited By: |

Updated on:May 26, 2026 | 6:31 PM

Share

ನವದೆಹಲಿ, ಮೇ 26: ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar)​​ ಅವರ ಜೊತೆಗಿನ ಸುದೀರ್ಘ ಸಭೆ ಬಳಿಕ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ  ಸಭೆ ಹಿಂದಿನ ಕಾರಣವನ್ನು ರಿವೀಲ್​​ ಮಾಡಿದ್ದಾರೆ. ರಾಜ್ಯ ನಾಯಕರಿಗೆ ಹೈಕಮಾಂಡ್​​ನಿಂದ ದಿಢೀರ್​​ ಬುಲಾವ್​​ ಬಂದಿದ್ದ ಹಿನ್ನೆಲೆ ನಾಯಕತ್ವ ಬದಲಾವಣೆ ಸೇರಿ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ನಾಯಕರು ಈ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.

ಮುಖ್ಯಾಂಶಗಳು

  • ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಜೊತೆಗಿನ ಹೈಕಮಾಂಡ್​​ ಸಭೆ ಅಂತ್ಯ
  • ಸಭೆ ಬಳಿಕ ಕಾಂಗ್ರೆಸ್​​ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ
  • ರಾಜ್ಯಸಭೆ, ಪರಿಷತ್​​ ಚುನಾವಣೆ ಸಂಬಂಧ ಮಾತ್ರ ಚರ್ಚೆ ಎಂದ ನಾಯಕರು

ಸಭೆಯಲ್ಲೆ ಚರ್ಚೆಯಾಗಿದ್ದೇನು?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್​​ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​​ ಸಮ್ಮುಖದಲ್ಲಿ ಇವತ್ತು ದೆಹಲಿಯಲ್ಲಿ ಹೈವೋಲ್ಟೇಜ್​​ ಮೀಟಿಂಗ್​​ ನಡೆದಿತ್ತು. ಹೀಗಾಗಿ ವರಿಷ್ಠರು ಸದ್ಯ ಪಕ್ಷದಲ್ಲಿರುವ ಎಲ್ಲ ಗೊಂದಲಗಳಿಗೂ ತೆರೆ ಎಳೆಯಬಹುದೆಂಬ ನಿರೀಕ್ಷೆ ಇತ್ತು. ಆದರೆ ಸಭೆ ಬಗ್ಗೆ ಮಾಹಿತಿ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯಸಭೆ ಮತ್ತು ವಿಧಾನಪರಿಷತ್​ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್​ನಲ್ಲಿ ಯಾವುದೇ ಗೊಂದಲ ಇಲ್ಲ. ಚುನಾವಣೆ ಸಂಬಂಧ ಮಾತ್ರ ಸಿಎಂ, ಡಿಸಿಎಂ ಜತೆ ಮಾತುಕತೆ ನಡೆಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಕೈ ಕಾದಾಟ ದಿಲ್ಲಿಗೆ ಶಿಫ್ಟ್; ಸಿಎಂ-ಡಿಸಿಎಂ ಲೆಕ್ಕವೇ ಬೇರೆ, ಶಾಸಕರ ಲೆಕ್ಕಾಚಾರವೇ ಇನ್ನೊಂದು

ಪ್ರತಿಕ್ರಿಯೆ ನೀಡದ ಡಿಕೆಶಿ

ಇನ್ನು ಸಭೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್​​ ಅವರನ್ನು ಮಾಧ್ಯಮಗಳ ವರದಿಗಾರರು ಮಾತನಾಡಿಸಲು ಯತ್ನಿಸಿದರಾದರೂ ಡಿಕೆಶಿ ಮಾತ್ರ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಮಾಧ್ಯಮದವರು ಪ್ರಶ್ನೆ ಕೇಳುತ್ತಿದ್ದಂತೆ ಕೈ ಮುಗಿದು ಅವರು ತೆರಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:08 pm, Tue, 26 May 26

Follow Us
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ
8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ
ಥಣಿಸಂದ್ರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವ ಕೃಷ್ಣಭೈರೇಗೌಡ ಚಾಲನೆ
ಥಣಿಸಂದ್ರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವ ಕೃಷ್ಣಭೈರೇಗೌಡ ಚಾಲನೆ