AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KEA Exam Scam: ಅಭ್ಯರ್ಥಿಗೆ ಉತ್ತರ ನೀಡಲು ಸಹಾಯ ಮಾಡಿದ್ದ ದೈಹಿಕ ಶಿಕ್ಷಕನ ಬಂಧನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಅಶೋಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಭ್ಯರ್ಥಿಗೆ ಉತ್ತರಗಳನ್ನು ನೀಡಿದ್ದ ಆರೋಪದ ಮೇಲೆ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಸಂತೋಷ್ ಗುತ್ತೇದಾರ್​ನನ್ನು ಬಂಧಿಸಲಾಗಿದೆ.

KEA Exam Scam: ಅಭ್ಯರ್ಥಿಗೆ ಉತ್ತರ ನೀಡಲು ಸಹಾಯ ಮಾಡಿದ್ದ ದೈಹಿಕ ಶಿಕ್ಷಕನ ಬಂಧನ
ಬಂಧಿತ ದೈಹಿಕ ಶಿಕ್ಷಕ ಸಂತೋಷ್ ಗುತ್ತೇದಾರ್ ಹಾಗೂ ಕಿಂಗ್​ಪಿನ್ ಆರ್​ಡಿ ಪಾಟೀಲ್
ಸಂಜಯ್ಯಾ ಚಿಕ್ಕಮಠ
| Edited By: Rakesh Nayak Manchi|

Updated on: Nov 11, 2023 | 9:37 PM

Share

ಕಲಬುರಗಿ, ನ.11: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಅಶೋಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಭ್ಯರ್ಥಿಗೆ ಉತ್ತರಗಳನ್ನು ನೀಡಿದ್ದ ಆರೋಪದ ಮೇಲೆ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಸಂತೋಷ್ ಗುತ್ತೇದಾರ್​ನನ್ನು ಬಂಧಿಸಲಾಗಿದೆ.

ಸಂತೋಷ್ ಗುತ್ತೇದಾರ್ ಅಕ್ರಮ ಪ್ರಕರಣದ ಕಿಂಗ್​ಪಿಂಗ್ ಆಗಿರುವ ಬಂಧಿತ ಆರೋಪಿ ಆರ್​ಡಿ ಪಾಟೀಲ್​ನ ಬೆಂಬಲಿಗನಾಗಿದ್ದಾನೆ. ಪ್ರಶ್ನೆ ಪತ್ರಿಕೆ ಫೋಟೋ ಕಾಪಿ ತೆಗೆದುಹಾಕಲು ಆರ್​ಡಿ ಪಾಟೀಲ್, ಸಂತೋಷ್​ನನ್ನು ಅಫಜಲಪುರ ಪರೀಕ್ಷಾ ಕೇಂದ್ರದಲ್ಲಿ ನೇಮಿಸಿದ್ದನು.

ಇದನ್ನೂ ಓದಿ: ಕೆಇಎ ಪರೀಕ್ಷೆಯಲ್ಲಿ ಅಕ್ರಮ: ಗೃಹ ಇಲಾಖೆ ಸೂಚನೆ ಮೇರೆಗೆ ತನಿಖೆ ಸಿಐಡಿಗೆ ಹಸ್ತಾಂತರ‌‌

ಆರ್​ಡಿ ಪಾಟೀಲ್​ಗೆ ವೈದ್ಯಕೀಯ ತಪಾಸಣೆ

ಆರ್​ಡಿ ಪಾಟೀಲ್​ನನ್ನು ಬಂಧಿಸಿ ಸ್ಥಳ ಮಹಜರು ನಡೆಸಿದ ಪೊಲೀಸರು, ಬಳಿಕ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಿದ್ದಾರೆ. ಅಲ್ಲದೆ, ಕಲಬುರಗಿ 2ನೇ ಜೆಎಂಎಫ್‌ಸಿ ಕೋರ್ಟ್‌ನ ಜಡ್ಜ್‌ ಸ್ಮಿತಾ ಮುಂದೆ ಆರೋಪಿಯನ್ನು ಹಾಜರುಪಡಿಸಲು ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More