AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮನೆಗಳಲ್ಲಿ ಆಯುಧ ಇಟ್ಟುಕೊಳ್ಳುವ ಹಕ್ಕು ನಿಮಗಿದೆ; ಹಿಂದೂಗಳಿಗೆ ಪ್ರಜ್ಞಾ ಸಿಂಗ್ ಠಾಕೂರ್ ಕರೆ

ಹಿಂದೂಗಳು ಪ್ರತಿಯೊಬ್ಬರೂ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿರುವುದರಿಂದ ತಮ್ಮ ಮನೆಗಳಲ್ಲಿ ಚಾಕುಗಳನ್ನು ಹರಿತಗೊಳಿಸಿ ಇಟ್ಟುಕೊಳ್ಳುವಂತೆ ಕರೆ ನೀಡುವ ಮೂಲಕ ಪ್ರಜ್ಞಾ ಸಿಂಗ್ ಠಾಕೂರ್ ವಿವಾದಕ್ಕೆ ಕಾರಣರಾಗಿದ್ದಾರೆ.

ನಿಮ್ಮ ಮನೆಗಳಲ್ಲಿ ಆಯುಧ ಇಟ್ಟುಕೊಳ್ಳುವ ಹಕ್ಕು ನಿಮಗಿದೆ; ಹಿಂದೂಗಳಿಗೆ ಪ್ರಜ್ಞಾ ಸಿಂಗ್ ಠಾಕೂರ್ ಕರೆ
ಪ್ರಜ್ಞಾ ಸಿಂಗ್ ಠಾಕೂರ್
TV9 Web
| Edited By: |

Updated on: Dec 26, 2022 | 4:03 PM

Share

ಶಿವಮೊಗ್ಗ: ಹಿಂದೂ ಕಾರ್ಯಕರ್ತರ ಹತ್ಯೆ ಬಗ್ಗೆ ಶಿವಮೊಗ್ಗದಲ್ಲಿ (Shivamogga) ಮಾತನಾಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ (Pragya Singh Thakur), ತಮ್ಮ ಮೇಲೆ ಹಲ್ಲೆ ಮಾಡುವವರಿಗೆ ತಕ್ಕ ಉತ್ತರ ನೀಡುವ ಹಕ್ಕು ಹಿಂದೂಗಳಿಗೆ ಕೂಡ ಇದೆ. ಹಿಂದೂಗಳು ಪ್ರತಿಯೊಬ್ಬರೂ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿರುವುದರಿಂದ ತಮ್ಮ ಮನೆಗಳಲ್ಲಿ ಚಾಕುಗಳನ್ನು ಹರಿತಗೊಳಿಸಿ ಇಟ್ಟುಕೊಳ್ಳುವಂತೆ ಕರೆ ನೀಡುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ.

“ಮುಸ್ಲಿಮರು ಲವ್ ಜಿಹಾದ್ ಸಂಪ್ರದಾಯವನ್ನು ಹೊಂದಿದ್ದಾರೆ, ಅವರು ಲವ್ ಮಾಡಿದರೂ ಅವರು ಅದರಲ್ಲಿ ಜಿಹಾದ್ ಮಾಡುತ್ತಾರೆ. ನಾವು (ಹಿಂದೂಗಳು) ಕೂಡ ಪ್ರೀತಿಸುತ್ತೇವೆ, ದೇವರನ್ನು ಪ್ರೀತಿಸುತ್ತೇವೆ, ಸನ್ಯಾಸಿಯಾದವರು ತನ್ನ ದೇವರನ್ನು ಪ್ರೀತಿಸುತ್ತಾರೆ” ಎಂದು ಪ್ರಜ್ಞಾ ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: Pragya Singh Thakur: ಕ್ರೈಸ್ತ ಮಿಶನರಿ ಶಾಲೆಯಲ್ಲಿ ಕಲಿತ ಮಕ್ಕಳು ತಂದೆ-ತಾಯಿಯನ್ನು ವೃದ್ಧಾಶ್ರಮಕ್ಕೆ ಕಳಿಸುತ್ತಾರೆ: ಪ್ರಜ್ಞಾ ಸಿಂಗ್ ಠಾಕೂರ್

ಇದೇ ವೇಳೆ ಶಿವಮೊಗ್ಗದ ಹರ್ಷ ಸೇರಿದಂತೆ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿದ ಅವರು, ಆತ್ಮರಕ್ಷಣೆಗಾಗಿ ಮನೆಯಲ್ಲಿ ಚಾಕುಗಳನ್ನು ಹರಿತವಾಗಿಟ್ಟುಕೊಳ್ಳುವಂತೆ ಹಿಂದೂಗಳ ಬಳಿ ಮನವಿ ಮಾಡಿದರು. ನಿಮ್ಮ ಮನೆಗಳಲ್ಲಿ ಆಯುಧಗಳನ್ನು ಇಟ್ಟುಕೊಳ್ಳಿ. ಏನಿಲ್ಲವೆಂದರೂ ತರಕಾರಿಗಳನ್ನು ಕತ್ತರಿಸಲು ಬಳಸುತ್ತಿದ್ದ ಚಾಕುಗಳಾದರೂ ಹರಿತವಾಗಿರಲಿ. ಯಾವಾಗ ಯಾವ ಪರಿಸ್ಥಿತಿ ಬರುತ್ತದೋ ಗೊತ್ತಿಲ್ಲ. ಎಲ್ಲರಿಗೂ ಆತ್ಮರಕ್ಷಣೆಯ ಹಕ್ಕಿದೆ. ನಮ್ಮ ಮನೆಗೆ ಯಾರಾದರೂ ನುಸುಳಿದರೆ ಅವರಿಗೆ ತಕ್ಕ ಉತ್ತರ ನೀಡುವುದು ನಮ್ಮ ಹಕ್ಕು ಎಂದು ಹೇಳಿದ್ದಾರೆ.

ಮಕ್ಕಳನ್ನು ಕ್ರೈಸ್ತ ಮಿಶನರಿ ಶಾಲೆಗೆ ಕಳುಹಿಸಬೇಡಿ. ಅಲ್ಲಿ ಕಲಿತ ಮಕ್ಕಳು ತಂದೆ-ತಾಯಿಯನ್ನು ವೃದ್ಧಾಶ್ರಮಕ್ಕೆ ಕಳಿಸುತ್ತಾರೆ. ಲವ್ ಜಿಹಾದ್​ಗೆ ಮಹಿಳಾ ಶಕ್ತಿ ಉತ್ತರ ಕೊಡಬೇಕು. ಮಹಿಳೆಯರಿಗೆ ಅಣ್ಣ ತಮ್ಮಂದಿರು ಸಾಥ್ ಕೊಡಬೇಕು. ಲವ್ ಜಿಹಾದ್​ನಿಂದ ದೇಶದ ಮಹಿಳೆಯರನ್ನು ರಕ್ಷಣೆ ಮಾಡಬೇಕು. ಜೀವ ಉಳಿಸಲು ಬದ್ಧ, ಜೀವ ತೆಗೆಯಲು ನಾವು ಸಿದ್ಧ ಎಂದು ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಕರೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?