AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಜಾದಿಂದ ಬಂದ ಎಂಟು ಪ್ರಯಾಣಿಕರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲಾಕ್; ಸಿಗರೇಟ್, ಮದ್ಯದ ಬಾಟಲಿಗಳು ಜಪ್ತಿ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಚುರುಕಿನ ತಪಾಸಣೆಯಿಂದಾಗಿ ಅಕ್ರಮ ಸಾಗಾಟದ ಎರಡು ಪ್ರಕರಣಗಳು ಪತ್ತೆಯಾಗಿವೆ. ಎಂಟು ಮಂದಿಯನ್ನು ಬಂಧಿಸಿ ಗ್ಯಾಜೆಟ್‌ಗಳು, ಸಿಗರೇಟ್ ಮತ್ತು ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ಎಲ್ಲಾ ಎಂಟು ಪ್ರಯಾಣಿಕರು ಏರ್ ಅರೇಬಿಯಾ ಫ್ಲೈಟ್ ಜಿ9-496 ನಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಶಾರ್ಜಾದಿಂದ ಬಂದ ಎಂಟು ಪ್ರಯಾಣಿಕರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲಾಕ್; ಸಿಗರೇಟ್, ಮದ್ಯದ ಬಾಟಲಿಗಳು ಜಪ್ತಿ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರುImage Credit source: Joe Ravi / Getty Images
Rakesh Nayak Manchi
Rakesh Nayak Manchi|

Updated on: Oct 03, 2023 | 11:30 AM

Share

ದೇವನಹಳ್ಳಿ, ಅ.3: ಬೆಂಗಳೂರು (Bangalore) ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಕಸ್ಟಮ್ಸ್ ಅಧಿಕಾರಿಗಳ ಚುರುಕಿನ ತಪಾಸಣೆಯಿಂದಾಗಿ ಅಕ್ರಮ ಸಾಗಾಟದ ಎರಡು ಪ್ರಕರಣಗಳು ಪತ್ತೆಯಾಗಿವೆ.

ಎಂಟು ಮಂದಿಯನ್ನು ಬಂಧಿಸಿ ಗ್ಯಾಜೆಟ್‌ಗಳು, ಸಿಗರೇಟ್ ಮತ್ತು ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ಎಲ್ಲಾ ಎಂಟು ಪ್ರಯಾಣಿಕರು ಏರ್ ಅರೇಬಿಯಾ ಫ್ಲೈಟ್ ಜಿ9-496 ನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ ಎಂದು ಬೆಂಗಳೂರು ಏರ್ ಕಸ್ಟಮ್ಸ್ ಸುದ್ದಿ ಪ್ರಕಟಣೆಯಲ್ಲಿ ದೃಢಪಡಿಸಿದೆ.

ಇದನ್ನೂ ಓದಿ: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ, 2 ವರ್ಷದ ಪುಟ್ಟ ಮಗು ಸೇರಿ ಇಬ್ಬರು ಸಾವು

ಮೊದಲಿಗೆ, ಅಧಿಕಾರಿಗಳು ಏಳು ಪ್ರಯಾಣಿಕರನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಸಿಗರೇಟ್, ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಹೀಗಾಗಿ ಏಳು ಮಂದಿಯನ್ನು ಬಂಧಿಸಿ ಅವರ ಬಳಿ ಇದ್ದ ಒಟ್ಟು 75 ಮೊಬೈಲ್, 21 ಲ್ಯಾಪ್‌ಟಾಪ್‌, 28 ಮದ್ಯದ ಬಾಟಲಿಗಳು ಮತ್ತು 7,000 ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅದೇ ವಿಮಾನದಲ್ಲಿ ಆಗಮಿಸಿದ ಮಹಿಳಾ ಪ್ರಯಾಣಿಕರೊಬ್ಬರು ಮೂರು ಬ್ಯಾಗ್‌ಗಳಲ್ಲಿ 248 ಔಟರ್‌ಗಳಲ್ಲಿ 49,600 ಐಟಿಸಿ ಬ್ರಾಂಡ್ ಸಿಗರೇಟ್‌ಗಳನ್ನು ಸಾಗಿಸುತ್ತಿರುವುದನ್ನು ಕೂಡ ಪತ್ತೆಹಚ್ಚಲಾಗಿದೆ. ಕಸ್ಟಮ್ಸ್ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಜಪ್ತಿ ಮಾಡಲಾದ ಗ್ಯಾಜೆಟ್​ಗಳು, ಸಿಗರೇಟ್​ಗಳು ಮತ್ತು ಮದ್ಯದ ಬಾಟಲಿಗಳ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ