AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಕೇವಲ 10 ರೂಪಾಯಿಗೆ.. ಮೆಜೆಸ್ಟಿಕ್​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿ!

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೊದಲ ರೈಲು ಮುಂಜಾನೆ 4.45ಕ್ಕೆ ಸಂಚಾರ ಆರಂಭಿಸಲಿದೆ.ರಾತ್ರಿ 9 ಗಂಟೆಗೆ ಕೊನೆಯ ರೈಲು ಹೊರಡಲಿದೆ. ಇನ್ನು, ಕೆಂಪೇಗೌಡ ರೈಲ್ವೆ ನಿಲ್ದಾಣದಿಂದ ಬೆಂಗಳೂರಿಗೆ ಬರಲು ಕೂಡ ರೈಲು ವ್ಯವಸ್ಥೆ ಇರಲಿದೆ.

ಇನ್ಮುಂದೆ ಕೇವಲ 10 ರೂಪಾಯಿಗೆ.. ಮೆಜೆಸ್ಟಿಕ್​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿ!
ಕೆಂಪೇಗೌಡ ವಿಮಾನ ನಿಲ್ದಾಣ
ರಾಜೇಶ್ ದುಗ್ಗುಮನೆ
|

Updated on: Jan 02, 2021 | 10:18 PM

Share

ಬೆಂಗಳೂರು: ನಗರದ ಹೃದಯಭಾಗ ಮೆಜೆಸ್ಟಿಕ್​ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲು ಕನಿಷ್ಠ ಎರಡು ಗಂಟೆ ಬೇಕು. ಅಷ್ಟೇ ಅಲ್ಲ, ಏರ್​ಪೋರ್ಟ್​ಗೆ ಹೋಗಲು ದೊಡ್ಡ ಮೊತ್ತವನ್ನು ಕೂಡ ತೆತ್ತಬೇಕು. ಆದರೆ, ಸೋಮವಾರದಿಂದ ಈ ಸಮಸ್ಯೆಗೆ ಪರಿಹಾರ ಸಿಗಲಿದೆ. ಏಕೆಂದರೆ, ಮೆಜೆಸ್ಟಿಕ್​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ರೈಲು ಸೇವೆ ಲಭ್ಯವಾಗಲಿದೆ.

ಹೌದು, ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಿರುವ ದೇವನಹಳ್ಳಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗಿರುವ ಜೊತೆಗೆ ನಗರದಿಂದ ಈ ನಿಲ್ದಾಣಕ್ಕೆ ಓಡಾಡುವ ರೈಲುಗಳ ಸಂಖ್ಯೆಯನ್ನು ಸಹ ಹೆಚ್ಚಿಸಲಾಗಿದೆ. ಅಷ್ಟೇ ಅಲ್ಲ, ಈ ರೈಲು ಪ್ರಯಾಣಕ್ಕೆ ತೆರಬೇಕಾದ ಮೊತ್ತ ತೀರಾ ಅಗ್ಗವಾಗಿದ್ದು ಕೇವಲ 10-15 ರೂಪಾಯಿಗೆ ಪ್ರಯಾಣಿಕರು ನಗರದಿಂದ ಏರ್​ಪೋರ್ಟ್​ ತಲುಪಬಹುದಾಗಿದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೊದಲ ರೈಲು ಮುಂಜಾನೆ 4.45ಕ್ಕೆ ಸಂಚಾರ ಆರಂಭಿಸಲಿದೆ. ರಾತ್ರಿ 9 ಗಂಟೆಗೆ ಕೊನೆಯ ರೈಲು ಹೊರಡಲಿದೆ. ಜೊತೆಗೆ, ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರಲು ಕೂಡ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ.

ಕೇವಲ ಪ್ರಯಾಣಿಕರಲ್ಲದೆ ವಿಮಾನ ನಿಲ್ದಾಣದ ಸಿಬ್ಬಂದಿಗೆ ಸಹ ಈ ವ್ಯವಸ್ಥೆ ಹೆಚ್ಚು ಸಹಕಾರಿಯಾಗಲಿದೆ. ಏಕೆಂದರೆ, ನಗರ ಭಾಗದಿಂದ ಅವರಿಗೆ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲು ನಿತ್ಯ 2ರಿಂದ 4 ಗಂಟೆ ವ್ಯಯ ಮಾಡುತ್ತಿದ್ದಾರೆ. ಅಲ್ಲದೆ, ಹೆಚ್ಚು ಹಣವನ್ನು ಕೂಡ ಖರ್ಚು ಮಾಡುತ್ತಿದ್ದಾರೆ. ಹೀಗಾಗಿ, ಅವರ ದಿನನಿತ್ಯದ ಸಮಸ್ಯೆಗೆ ಈಗ ಪರಿಹಾರ ಸಿಕ್ಕಂತಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ರನ್​ ವೇ ಲೋಕಾರ್ಪಣೆ; ಇನ್ಮುಂದೆ ಇರಲ್ಲ ಮಂಜಿನ ಕಾಟ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ