AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಕೇವಲ 10 ರೂಪಾಯಿಗೆ.. ಮೆಜೆಸ್ಟಿಕ್​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿ!

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೊದಲ ರೈಲು ಮುಂಜಾನೆ 4.45ಕ್ಕೆ ಸಂಚಾರ ಆರಂಭಿಸಲಿದೆ.ರಾತ್ರಿ 9 ಗಂಟೆಗೆ ಕೊನೆಯ ರೈಲು ಹೊರಡಲಿದೆ. ಇನ್ನು, ಕೆಂಪೇಗೌಡ ರೈಲ್ವೆ ನಿಲ್ದಾಣದಿಂದ ಬೆಂಗಳೂರಿಗೆ ಬರಲು ಕೂಡ ರೈಲು ವ್ಯವಸ್ಥೆ ಇರಲಿದೆ.

ಇನ್ಮುಂದೆ ಕೇವಲ 10 ರೂಪಾಯಿಗೆ.. ಮೆಜೆಸ್ಟಿಕ್​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿ!
ಕೆಂಪೇಗೌಡ ವಿಮಾನ ನಿಲ್ದಾಣ
ರಾಜೇಶ್ ದುಗ್ಗುಮನೆ
|

Updated on: Jan 02, 2021 | 10:18 PM

Share

ಬೆಂಗಳೂರು: ನಗರದ ಹೃದಯಭಾಗ ಮೆಜೆಸ್ಟಿಕ್​ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲು ಕನಿಷ್ಠ ಎರಡು ಗಂಟೆ ಬೇಕು. ಅಷ್ಟೇ ಅಲ್ಲ, ಏರ್​ಪೋರ್ಟ್​ಗೆ ಹೋಗಲು ದೊಡ್ಡ ಮೊತ್ತವನ್ನು ಕೂಡ ತೆತ್ತಬೇಕು. ಆದರೆ, ಸೋಮವಾರದಿಂದ ಈ ಸಮಸ್ಯೆಗೆ ಪರಿಹಾರ ಸಿಗಲಿದೆ. ಏಕೆಂದರೆ, ಮೆಜೆಸ್ಟಿಕ್​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ರೈಲು ಸೇವೆ ಲಭ್ಯವಾಗಲಿದೆ.

ಹೌದು, ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಿರುವ ದೇವನಹಳ್ಳಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಮಾಡಲಾಗಿರುವ ಜೊತೆಗೆ ನಗರದಿಂದ ಈ ನಿಲ್ದಾಣಕ್ಕೆ ಓಡಾಡುವ ರೈಲುಗಳ ಸಂಖ್ಯೆಯನ್ನು ಸಹ ಹೆಚ್ಚಿಸಲಾಗಿದೆ. ಅಷ್ಟೇ ಅಲ್ಲ, ಈ ರೈಲು ಪ್ರಯಾಣಕ್ಕೆ ತೆರಬೇಕಾದ ಮೊತ್ತ ತೀರಾ ಅಗ್ಗವಾಗಿದ್ದು ಕೇವಲ 10-15 ರೂಪಾಯಿಗೆ ಪ್ರಯಾಣಿಕರು ನಗರದಿಂದ ಏರ್​ಪೋರ್ಟ್​ ತಲುಪಬಹುದಾಗಿದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೊದಲ ರೈಲು ಮುಂಜಾನೆ 4.45ಕ್ಕೆ ಸಂಚಾರ ಆರಂಭಿಸಲಿದೆ. ರಾತ್ರಿ 9 ಗಂಟೆಗೆ ಕೊನೆಯ ರೈಲು ಹೊರಡಲಿದೆ. ಜೊತೆಗೆ, ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರಲು ಕೂಡ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ.

ಕೇವಲ ಪ್ರಯಾಣಿಕರಲ್ಲದೆ ವಿಮಾನ ನಿಲ್ದಾಣದ ಸಿಬ್ಬಂದಿಗೆ ಸಹ ಈ ವ್ಯವಸ್ಥೆ ಹೆಚ್ಚು ಸಹಕಾರಿಯಾಗಲಿದೆ. ಏಕೆಂದರೆ, ನಗರ ಭಾಗದಿಂದ ಅವರಿಗೆ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲು ನಿತ್ಯ 2ರಿಂದ 4 ಗಂಟೆ ವ್ಯಯ ಮಾಡುತ್ತಿದ್ದಾರೆ. ಅಲ್ಲದೆ, ಹೆಚ್ಚು ಹಣವನ್ನು ಕೂಡ ಖರ್ಚು ಮಾಡುತ್ತಿದ್ದಾರೆ. ಹೀಗಾಗಿ, ಅವರ ದಿನನಿತ್ಯದ ಸಮಸ್ಯೆಗೆ ಈಗ ಪರಿಹಾರ ಸಿಕ್ಕಂತಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ರನ್​ ವೇ ಲೋಕಾರ್ಪಣೆ; ಇನ್ಮುಂದೆ ಇರಲ್ಲ ಮಂಜಿನ ಕಾಟ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!