AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಪ್ರಯಾಣಿಕರಿಂದ ಜೀವಕಳೆ ಪಡೆದುಕೊಂಡ ಕೆಂಪೇಗೌಡ ವಿಮಾನ ನಿಲ್ದಾಣ; ಟ್ಯಾಕ್ಸಿ ಚಾಲಕರ ಮೊಗದಲ್ಲಿ ಮಂದಹಾಸ

ಲಾಕ್​ಡೌನ್ ವೇಳೆ ದಿನದ 24 ಗಂಟೆ ಕಾದರು ಪ್ರಯಾಣಿಕರು ಬರುತ್ತಿರಲಿಲ್ಲ. ಹೀಗಾಗಿ ನಾವು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಇದೀಗ ದಿನಕ್ಕೆರಡು ಬಾಡಿಗೆಗಳು ಸಿಗುತ್ತಿದ್ದು, ಏರ್ಪೋಟ್ ಟ್ಯಾಕ್ಸಿ ಚಾಲಕರು ನಿಟ್ಟುಸಿರು ಬಿಡುವಂತಾಗಿದೆ ಎಂದು ಟ್ಯಾಕ್ಸಿ ಚಾಲಕ ಶಿವರಾಜ್ ತಿಳಿಸಿದ್ದಾರೆ.

ಮತ್ತೆ ಪ್ರಯಾಣಿಕರಿಂದ ಜೀವಕಳೆ ಪಡೆದುಕೊಂಡ ಕೆಂಪೇಗೌಡ ವಿಮಾನ ನಿಲ್ದಾಣ; ಟ್ಯಾಕ್ಸಿ ಚಾಲಕರ ಮೊಗದಲ್ಲಿ ಮಂದಹಾಸ
ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣ
TV9 Web
| Updated By: ಸಾಧು ಶ್ರೀನಾಥ್​|

Updated on:Jun 30, 2021 | 1:11 PM

Share

ಬೆಂಗಳೂರು: ಸಿಲಿಕಾನ್ ಸಿಟಿಯ ಏರ್ಪೋಟ್ ಎಂದರೆ ಜನ ಮತ್ತು ಗ್ರೀನರಿಗೆ ಹೆಸರುವಾಸಿ. ಹೀಗಾಗಿ ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣ (ಕೆಐಎಎಲ್) ಹಚ್ಚ ಹಸಿರಿನ ಪರಿಸರ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣೀಕರ ಪ್ರಯಾಣದಿಂದ ದೇಶದಲ್ಲೇ ಉತ್ತಮ ಏರ್ಪೋಟ್ ಆಗಿ ಹೊರಹೊಮಿತ್ತು. ಆದರೆ ಈ ನಡುವೆ ಕೊರೊನಾ ಒಂದು ಮತ್ತು ಎರಡನೇ ಅಲೆ ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣದ ಚಿತ್ರಣವನ್ನೇ ಬದಲಾಯಿಸಿದ್ದು, ಜನರಿಲ್ಲದೆ ಬಿಕೋ ಎನ್ನುವಂತಾಗಿತ್ತು. ವಿಮಾನದ ಹಾರಾಟವಿಲ್ಲದೆ, ಸುತ್ತಲಿನ ಅಂಗಡಿ ಮುಂಗಟ್ಟುಗಳು ಕೂಡ ಬಂದ್ ಆಗಿದ್ದವು. ಆದರೆ ಕೆಐಎಎಲ್​ಗೆ ಇದೀಗ ಪ್ರಯಾಣಿಕರ ಆಗಮನದಿಂದ ಜೀವಕಳೆ ಬಂದಿದ್ದು, ಪ್ರಯಾಣಿಕರು ಮತ್ತು ಅಂಗಡಿ ಮುಂಗಟ್ಟುಗಳಿಂದ ಟರ್ಮಿನಲ್ ಕಂಗೋಳಿಸುತ್ತಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದೀಗ ಸ್ವಲ್ಪ ಚೇತರಿಕೆ ಕಾಣಲು ಮುಂದಾಗಿದೆ. ಈ ವರ್ಷ ಸತತ ಎರಡು ತಿಂಗಳಿಂದ ಒಂದು ಸಾವಿರ ಜನ ಪ್ರಯಾಣಿಕರು ಆಗಮಿಸದ, ಕೆಐಎಎಲ್​ನಲ್ಲಿ ಇದೀಗ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಕಳೆದ ಒಂದು ವಾರದಿಂದ ಪ್ರತಿನಿತ್ಯ 5 ರಿಂದ 8 ಸಾವಿರ ಜನ ಪ್ರಯಾಣಿಕರು ಕೆಐಎಎಲ್ ನಿಂದ ಬೇರೆಡೆ ಸಂಚಾರ ಮಾಡುತ್ತಿದ್ದು, ಇಷ್ಟು ದಿನ ಬಿಕೋ ಎನ್ನುತ್ತಿದ್ದ ಟರ್ಮಿನಲ್​ನಲ್ಲಿ ಪ್ರಯಾಣಿಕರ ಕಲರವ ಶುರುವಾಗಿದೆ. ಜತೆಗೆ ಪ್ರಯಾಣಿಕರ ನಿರ್ಗಮನ ಮತ್ತು ಆಗಮನದಿಂದಾಗಿ ಟರ್ಮಿನಲ್​ನ ಅಂಗಡಿ ಮುಂಗಟ್ಟುಗಳು, ಬಿಎಂಟಿಸಿ ಬಸ್ ಮತ್ತು ಟ್ಯಾಕ್ಸಿ ಚಾಲಕರಿಗೂ ಒಂದಷ್ಟು ಖುಷಿ ತಂದಿದೆ.

ಕಳೆದ ಒಂದು ವರ್ಷದಲ್ಲಿ ಏರ್ಪೋಟ್ ಮೇಲೆ ಕೊರೊನಾ ಬೀರಿದ ಪರಿಣಾಮ

* 2019 – 20 ನೇ ಸಾಲಿನಲ್ಲಿ ಕೆಐಎಎಲ್​ನಿಂದ 32.3 ಲಕ್ಷ ಪ್ರಯಾಣೀಕರು ದೇಶದ ವಿವಿಧ ಭಾಗಗಳಿಗೆ ಪ್ರಯಾಣ ಬೆಳೆಸಿದ್ದಾರೆ.

* 2020 – 21 ನೇ ಸಾಲಿನಲ್ಲಿ ಕೊರೊನಾ ಪರಿಣಾಮ ಕೇವಲ 10.31 ಲಕ್ಷ ಪ್ರಯಾಣಿಕರು ಮಾತ್ರ ಸಂಚಾರ ಮಾಡಿದ್ದು, ಶೇಖಡ 63% ರಷ್ಟು ಪ್ರಯಾಣೀಕರ ಸಂಖ್ಯೆ ಇಳಿಕೆ ಕಂಡಿದೆ.

* 2019 – 20 ನೇ ಆರ್ಥಿಕ ವರ್ಷದಲ್ಲಿ ಕೆಐಎಎಲ್ ನಿಂದ 40 ಲಕ್ಷ ಪ್ರಯಾಣಿಕರು ವಿದೇಶಗಳಿಗೆ ಪ್ರಯಾಣ ಮಾಡಿದ್ದರು.

* 2020 – 21 ನೇ ಸಾಲಿನಲ್ಲಿ ಕೇವಲ 4 ಲಕ್ಷ ಜನರು ಮತ್ತು ವಿದೇಶಗಳಿಗೆ ಪ್ರಯಾಣ ಮಾಡಿದ್ದು, ಶೇ 90% ರಷ್ಟು ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ.

ಲಾಕ್​ಡೌನ್ ವೇಳೆ ದಿನದ 24 ಗಂಟೆ ಕಾದರು ಪ್ರಯಾಣಿಕರು ಬರುತ್ತಿರಲಿಲ್ಲ. ಹೀಗಾಗಿ ನಾವು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಇದೀಗ ದಿನಕ್ಕೆರಡು ಬಾಡಿಗೆಗಳು ಸಿಗುತ್ತಿದ್ದು, ಏರ್ಪೋಟ್ ಟ್ಯಾಕ್ಸಿ ಚಾಲಕರು ನಿಟ್ಟುಸಿರು ಬಿಡುವಂತಾಗಿದೆ ಎಂದು ಟ್ಯಾಕ್ಸಿ ಚಾಲಕ ಶಿವರಾಜ್ ತಿಳಿಸಿದ್ದಾರೆ.

ಒಟ್ಟಾರೆ ಕೊರೊನಾ ಒಂದು ಮತ್ತು ಎರಡನೇ ಅಲೆಯಿಂದಾಗಿ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದ ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣ ಮತ್ತೆ ಹಿಂದಿನಂತೆ ಪ್ರಯಾಣಿಕರಿಂದ ತುಂಬಲು ಶುರುವಾಗಿರುವುದು ಸಂತಸ ಸೃಷ್ಟಿಸಿದೆ. ಆದರೆ ಕೊರೊನಾ ದೂರವಾಗಿದೆ ಎಂದು ಸಾಮಾಜಿಕ ಅಂತರ ಮತ್ತು ಮಾಸ್ಕ್ ಮರೆಯುವ ಬದಲು ಎಚ್ಚರಿಕೆ ವಹಿಸುವುದು ಸೂಕ್ತ.

ಇದನ್ನೂ ಓದಿ:

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡಿ ಬೇಕೆಂದು ವ್ಯಕ್ತಿ ರಂಪಾಟ; ವಿಡಿಯೋ ನೋಡಿ

ಏರ್ ಇಂಡಿಯಾ ವಿಮಾನದಲ್ಲಿ ಏಕಾಂಗಿ ಪ್ರಯಾಣ; ಮಹಾರಾಜನಂತೆ ಅನಿಸಿತು ಎಂದು ಅನುಭವ ಹಂಚಿಕೊಂಡ ವ್ಯಕ್ತಿ!

Published On - 12:38 pm, Wed, 30 June 21

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು