Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಣಿಜ್ಯ ಸಂಸ್ಥೆಗಳು, ಕೈಗಾರಿಕಾ ಉದ್ಯಮಕ್ಕೆ ಸಿಹಿ ಸುದ್ದಿ ನೀಡಿದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ

ಉತ್ಪಾದಕರಿಂದ ನೇರವಾಗಿ ವಿದ್ಯುತ್​ ಖರೀದಿಸುವ ವಾಣಿಜ್ಯ ಸಂಸ್ಥೆಗಳು, ಐಟಿ ಪಾರ್ಕ್‌ಗಳು ಮತ್ತು ಕೈಗಾರಿಕೆಗಳಂತಹ ಬೃಹತ್ ವಿದ್ಯುತ್ ಗ್ರಾಹಕರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಸಿಹಿ ಸುದ್ದಿ ನೀಡಿದೆ. ಕೆಇಆರ್‌ಸಿ ಹೆಚ್ಚುವರಿ ಶುಲ್ಕವನ್ನು ಪ್ರತಿ ಯೂನಿಟ್‌ಗೆ 1.40 ರೂ.ಗೆ ಇಳಿಸಿದೆ. ಪರಿಷ್ಕೃತ ಬೆಲೆಯು 2024ರ ಆರ್ಥಿಕ ವರ್ಷದಲ್ಲಿ ಜಾರಿಗೆ ಬರುತ್ತದೆ.

ವಾಣಿಜ್ಯ ಸಂಸ್ಥೆಗಳು, ಕೈಗಾರಿಕಾ ಉದ್ಯಮಕ್ಕೆ ಸಿಹಿ ಸುದ್ದಿ ನೀಡಿದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Nov 28, 2023 | 12:54 PM

ಬೆಂಗಳೂರು ನ.27: ಉತ್ಪಾದಕರಿಂದ ನೇರವಾಗಿ ವಿದ್ಯುತ್​ ಖರೀದಿಸುವ ವಾಣಿಜ್ಯ ಸಂಸ್ಥೆಗಳು, ಐಟಿ ಪಾರ್ಕ್‌ಗಳು ಮತ್ತು ಕೈಗಾರಿಕೆಗಳಂತಹ ಬೃಹತ್ ವಿದ್ಯುತ್ ಗ್ರಾಹಕರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ಸಿಹಿ ಸುದ್ದಿ ನೀಡಿದೆ. ವಿದ್ಯುತ್​ ಖರೀದಿ ವೇಳೆ ಪಾವತಿಸಬೇಕಾದ ಹೆಚ್ಚುವರಿ ಶುಲ್ಕದಲ್ಲಿ (ASC) 8 ಪೈಸೆಯನ್ನು ಕಡಿತಗೊಳಿಸಿದೆ.

ಇದಲ್ಲದೆ, ನಿಯಂತ್ರಣ ಸಂಸ್ಥೆಯು ಪವನ ಮತ್ತು ಸೌರಶಕ್ತಿಯಂತಹ ನವೀಕರಿಸಬಹುದಾದ ಮೂಲಗಳಿಂದ ವಿದ್ಯುತ್ ಅನ್ನು ಸಂಗ್ರಹಿಸುವ ಸಂಸ್ಥೆಗಳಿಗೆ ಹೆಚ್ಚುವರಿ ಶುಲ್ಕಗಳಲ್ಲಿ ಶೇ 50 ಪ್ರತಿಶತ ರಿಯಾಯಿತಿಯನ್ನು ಸಹ ನೀಡಿದೆ.

2023ರ ಮೇನಲ್ಲಿ ಕೆಇಆರ್​ಸಿ ಹೆಚ್ಚುವರಿ ಶುಲ್ಕವನ್ನು ಪ್ರತಿ ಯೂನಿಟ್‌ಗೆ ರೂ 1.48 ರೂ. ವಿಧಿಸಿತ್ತು. ಇದರಿಂದ ಪ್ರವೇಶ ಜಾಲದಿಂದ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್​ ಖರೀದಿಸುವ ಗ್ರಾಹಕರಿಗೆ ಹೊರೆಯಾಗುತ್ತಿತ್ತು. ಹೀಗಾಗಿ ಕೆಇಆರ್‌ಸಿಯ ಆದೇಶಗಳನ್ನು ಕೆಲವು ನವೀಕರಿಸಬಹುದಾದ ಇಂಧನ ಸಂಸ್ಥೆಗಳು ಪ್ರಶ್ನಿಸಿದವು.

ಇದನ್ನೂ ಓದಿ: ಉಚಿತ ವಿದ್ಯುತ್‌ ಕೊಟ್ಟರೆ ದುರುಪಯೋಗವಾಗುತ್ತದೆ ಎಂಬ ಮಾತಿತ್ತು, ಆದರೆ 8 ಜಿಲ್ಲೆಗಳ ಗ್ರಾಹಕರು ನಿರೀಕ್ಷೆಗೂ ಮೀರಿ ಕಡಿಮೆ ವಿದ್ಯುತ್ ಬಳಸಿದ್ದಾರೆ! ಇಲ್ಲಿದೆ ಇಂಟರೆಸ್ಟಿಂಗ್​ ಮಾಹಿತಿ

ಸಂಸ್ಥೆಗಳಿಂದ ಅರ್ಜಿಗಳನ್ನು ಸ್ವೀಕರಿಸಿದ ನಂತರ, ಕೆಇಆರ್‌ಸಿ ಹೆಚ್ಚುವರಿ ಶುಲ್ಕವನ್ನು ಪ್ರತಿ ಯೂನಿಟ್‌ಗೆ 1.40 ರೂ.ಗೆ ಇಳಿಸಿದೆ. ಪರಿಷ್ಕೃತ ಬೆಲೆಯು 2024ರ ಆರ್ಥಿಕ ವರ್ಷದಲ್ಲಿ ಜಾರಿಗೆ ಬರುತ್ತದೆ. ಹಾಗೆ ಶೇ 50 ರಿಯಾಯಿತಿ ಕೂಡ 2024 ಆರ್ಥಿಕ ವರ್ಷದಲ್ಲಿ ಜಾರಿಗೆ ಬರುತ್ತದೆ.

ಎಫ್‌ಕೆಸಿಸಿಐನ ಎನರ್ಜಿ ಗ್ರೂಪ್‌ನ ಸದಸ್ಯ ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ವಿತರಕರ ಅಧ್ಯಕ್ಷ ರಮೇಶ್ ಶಿವಣ್ಣ ಮಾತನಾಡಿ, ಎಸ್ಕಾಮ್‌ಗಳನ್ನು ಬಿಟ್ಟು ವಿದ್ಯುತ್ ಖರೀದಿಸುವ ದೊಡ್ಡ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಖಂಡಿತವಾಗಿಯೂ ಇದು ತುಂಬಾ ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:12 am, Tue, 28 November 23

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ