ಸೀಮೆಎಣ್ಣೆ ಸ್ಟೌವ್ ಸಿಡಿದು ಗಾಯಗೊಂಡಿದ್ದ ಯುವಕ ಸಾವು

ತುಮಕೂರು: ಸೀಮೆಎಣ್ಣೆ ಸ್ಟೌವ್ ಸಿಡಿದು ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕಳೆದ 4 ದಿನಗಳ ಹಿಂದೆ ಪಾವಗಡ ತಾಲೂಕಿನ ಎ.ಹೆಚ್.ಪಾಳ್ಯದಲ್ಲಿ ಸ್ಟೌವ್ ಸ್ಫೋಟಗೊಂಡ ನವೀನ್(22) ಗಾಯಗೊಂಡಿದ್ದ. ಗಾಯಾಳು ನವೀನ್​ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನವೀನ್(22) ಸಾವಿಗೀಡಾಗಿದ್ದಾನೆ. ವೈದ್ಯರ ನಿರ್ಲಕ್ಷ್ಯದಿಂದಲೇ ನವೀನ್ ಮೃತಪಟ್ಟಿದ್ದಾನೆಂದು ಪಾವಗಡ ಪಟ್ಟಣದ ರಸ್ತೆ ತಡೆ ನಡೆಸಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪಾವಗಡ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೀಮೆಎಣ್ಣೆ ಸ್ಟೌವ್ ಸಿಡಿದು ಗಾಯಗೊಂಡಿದ್ದ ಯುವಕ ಸಾವು
ಸಾಧು ಶ್ರೀನಾಥ್​

Updated on: Dec 07, 2019 | 2:14 PM

ತುಮಕೂರು: ಸೀಮೆಎಣ್ಣೆ ಸ್ಟೌವ್ ಸಿಡಿದು ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕಳೆದ 4 ದಿನಗಳ ಹಿಂದೆ ಪಾವಗಡ ತಾಲೂಕಿನ ಎ.ಹೆಚ್.ಪಾಳ್ಯದಲ್ಲಿ ಸ್ಟೌವ್ ಸ್ಫೋಟಗೊಂಡ ನವೀನ್(22) ಗಾಯಗೊಂಡಿದ್ದ.

ಗಾಯಾಳು ನವೀನ್​ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನವೀನ್(22) ಸಾವಿಗೀಡಾಗಿದ್ದಾನೆ. ವೈದ್ಯರ ನಿರ್ಲಕ್ಷ್ಯದಿಂದಲೇ ನವೀನ್ ಮೃತಪಟ್ಟಿದ್ದಾನೆಂದು ಪಾವಗಡ ಪಟ್ಟಣದ ರಸ್ತೆ ತಡೆ ನಡೆಸಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪಾವಗಡ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us