AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕ ನೌಕರರು ಈ ಬಟ್ಟೆ ಧರಿಸುವುದು ಕಡ್ಡಾಯ

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಯೋಜನೆ ಏಪ್ರಿಲ್ 24ರಿಂದ ಜಾರಿಗೆ ಬರಲಿದೆ.

ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕ ನೌಕರರು ಈ ಬಟ್ಟೆ ಧರಿಸುವುದು ಕಡ್ಡಾಯ
ವಿಧಾನಸೌಧImage Credit source: karnataka.gov.in
ಹರೀಶ್ ಜಿ.ಆರ್​.
| Edited By: |

Updated on:Jan 29, 2026 | 4:22 PM

Share

ಬೆಂಗಳೂರು, ಜನವರಿ 29: ರಾಜ್ಯ ಸರ್ಕಾರಿ ನೌಕರರಿಗೆ (government employees) ಖಾದಿ (Khadi) ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ.

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಸಭೆ ಮಾಡಲಾಗಿದೆ.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು

  • ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವುದು.
  • ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು.

ಇದನ್ನೂ ಓದಿ: ಕರ್ನಾಟಕ ಪೊಲೀಸರಿಗೆ ಭರ್ಜರಿ ಗಿಫ್ಟ್, ಕುಟುಂಬಸ್ಥರ ಜತೆ ಕಾಲ ಕಳೆಯಲು ರಜೆ ಭಾಗ್ಯ

  • ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ, ನೌಕರರಿಗೆ ಶೇ. 5% ಹೆಚ್ಚುವರಿ ರಿಯಾಯಿತಿ ನೀಡುವುದು.
  • ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು.
  • ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು.
  • ಎಂಎಸ್​ಐಎಲ್​ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು “ಸರ್ಕಾರಿ ನೌಕರರ ಕ್ಯಾಂಟೀನ್” ಪ್ರಾರಂಭಿಸಲು 2026-27ನೇ ಸಾಲಿನ ಆಯ-ವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡುವುದು.

ಇದನ್ನೂ ಓದಿ: ಸರ್ಕಾರದಿಂದ ಮಹತ್ವದ ಆದೇಶ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಕನಸು ಕಾಣುತ್ತಿದ್ದವರಿಗೆ ಬಿಗ್ ಶಾಕ್

  • ಕೆಎಸ್​ಐಸಿ ಸಂಸ್ಥೆಯು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಖರೀದಿಸುವ ರೇಷ್ಮೆ ಸೀರೆ ಮತ್ತು ರೇಷ್ಮೆ ವಸ್ತ್ರಗಳಿಗೆ ಹೆಚ್ಚುವರಿ ಶೇ.5% ವಿಶೇಷ ರಿಯಾಯಿತಿ ನೀಡುತ್ತಿರುವ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರಿಗೂ ಹೆಚ್ಚುವರಿ ಶೇ. 5% ವಿಶೇಷ ರಿಯಾಯಿತಿ ನೀಡುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:18 pm, Thu, 29 January 26

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ