AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಐಎಡಿಬಿ ಅಕ್ರಮ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ಒಂದೆಡೆ ಮುಡಾ ಹಗರಣ ವಿಚಾರವಾಗಿ ಬಿಜೆಪಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ರಾಜಕೀಯ ಹೋರಾಟ ನಡೆಸುತ್ತಿದ್ದರೆ ಅತ್ತ ಕಾಂಗ್ರೆಸ್ ನಾಯಕರು ಸಹ ಬಿಜೆಪಿ ಅವಧಿಯ ಹಗರಣಗಳನ್ನು, ಅಕ್ರಮಗಳನ್ನು ಪ್ರಸ್ತಾಪಿಸಿ ತಿರುಗೇಟು ನೀಡುತ್ತಿದ್ದಾರೆ. ಇದೀಗ ಕೆಐಎಡಿಬಿ ಅಕ್ರಮ ಆರೋಪ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಕೆಐಎಡಿಬಿ ಅಕ್ರಮ ಆರೋಪ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು
ಛಲವಾದಿ ನಾರಾಯಣಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: |

Updated on: Sep 03, 2024 | 12:37 PM

Share

ಬೆಂಗಳೂರು, ಸೆಪ್ಟೆಂಬರ್ 3: ಕೆಐಎಡಿಬಿಯಿಂದ ಅಕ್ರಮವಾಗಿ ಭೂಮಿ ಪಡೆದ ಆರೋಪ ಸಂಬಂಧ ಬಿಜೆಪಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಸಲೀಂ ಅಹ್ಮದ್ ನೇತೃತ್ವದ ಕಾಂಗ್ರೆಸ್ ಸದಸ್ಯರ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಛಲವಾದಿ ನಾರಾಯಣಸ್ವಾಮಿ ಕೆಐಎಡಿಬಿಯಿಂದ ಬೇರೆಯವರ ಹೆಸರಲ್ಲಿ ಭೂಮಿ ಪಡೆದು ತಮ್ಮ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಸದಸ್ಯರು ತನಿಖೆ ನಡೆಸಲು ಅನುಮತಿ ನೀಡುವಂತೆ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ನೇತೃತ್ವದ ನಿಯೋಗದಲ್ಲಿ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ವಸಂತ ಕುಮಾರ್, ಪುಟ್ಟಣ್ಣ, ರವಿ, ಉಮಾಶ್ರೀ ಹಾಗೂ ಸುಧಾಮ್ ದಾಸ್, ದಿನೇಶ್ ಗೂಳಿಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಕೆಐಎಡಿಬಿ ಸಿಎ ನಿವೇಶನ ಹಂಚಿಕೆಯಲ್ಲಿ ಇಬ್ಬಗೆ ನೀತಿ

ಮತ್ತೊಂದೆಡೆ, ಕೆಐಎಡಿಬಿ ಸಿಎ ನಿವೇಶನ ಹಂಚಿಕೆಯಲ್ಲಿ ಇಬ್ಬಗೆ ನೀತಿ ಆರೋಪ ಕೇಳಿಬಂದಿದೆ. ಸರ್ಕಾರದ ಇಲಾಖೆಗೆ ಜಾಗ ನೀಡಲು ಮೀನಾಮೇಷ ಎಣಿಸಲಾಗುತ್ತಿದ್ದು, ಖಾಸಗಿ ಟ್ರಸ್ಟ್, ಕಂಪೆನಿಗಳಿಗೆ ಸಿಎ ನಿವೇಶನ ನೀಡಲು ಕೆಐಎಡಿಬಿ ಅತ್ಯುತ್ಸಾಹ ತೋರಿದೆ ಎನ್ನಲಾಗಿದೆ.

ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರು: ಹೊಸ ಕ್ರಮ ಕೈಗೊಳ್ಳಲು ಮುಂದಾದ ಬಿಬಿಎಂಪಿ

ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಜಾಗ ನೀಡುವ ಕೆಐಎಡಿಬಿ, ಸರ್ಕಾರದ ಇಲಾಖೆಗೆ ಜಾಗ ನೀಡಿಲ್ಲ. ಇದೇ ಹೈಟೆಕ್‌ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್​​ನಲ್ಲೇ ಸಮಾಜ ಕಲ್ಯಾಣ ಇಲಾಖೆ ಜಾಗಕ್ಕಾಗಿ ಅರ್ಜಿ ಹಾಕಿತ್ತು. ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಎರಡು ಎಕರೆ ಜಾಗಕ್ಕಾಗಿ ಮನವಿ ಮಾಡಿದ್ದರು. ಹೈಸ್ಕೂಲ್ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್, ಸ್ಕಿಲ್ ಡೆವಲಪ್ಮೆಂಟ್ ಕೇಂದ್ರ ಮಾಡಲು ಇಲಾಖೆ ಜಾಗ ಕೇಳಿತ್ತು. ಆದರೆ ಕೆಐಎಡಿಬಿ ಸಮಾಜ ಕಲ್ಯಾಣ ಇಲಾಖೆಗೆ ಜಾಗ ನೀಡಿಲ್ಲ. ಜಾಗ ಹಂಚಿಕೆಗೆ ಸಮಾಜ ಕಲ್ಯಾಣ ಇಲಾಖೆಯ ಮನವಿ ಪುರಸ್ಕರಿಸಬಹುದು ಎಂದು ಏಕಗವಾಕ್ಷಿ ಸಮಿತಿ ಕೂಡ ಶಿಫಾರಸ್ಸು ಮಾಡಿತ್ತು. ಆದರೆ ಪ್ರಾಜೆಕ್ಟ್ ರಿಪೋರ್ಟ್ ಸಲ್ಲಿಸಿಲ್ಲ ಎಂಬ ಕಾರಣಕ್ಕೆ ಅರ್ಜಿಯನ್ನು ಕೆಐಎಡಿಬಿ ಪರಿಗಣಿಸಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ