AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ರೇವಣ್ಣಗೆ ಜಾಮೀನಾ, ಎಸ್​ಐಟಿ ಕಸ್ಟಡಿಯಾ? ಇಂದೇ ನಿರ್ಣಾಯಕ ದಿನ

ಕಿಡ್ನ್ಯಾಪ್​ ಪ್ರಕರಣದಲ್ಲಿ ಎಸ್​ಐಟಿ ವಶದಲ್ಲಿರುವ ರೇವಣ್ಣ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಹೀಗಾಗಿ ರೇವಣ್ಣಗೆ ಇಂದು ನಿರ್ಣಾಯಕ ದಿನ ಆಗಿದೆ. ರೇವಣ್ಣಗೆ ಬೇಲ್ ಸಿಗುತ್ತಾ? ಮತ್ತೆ ಕಸ್ಟಡಿಗೆ ತೆಗೆದುಕೊಳ್ತಾರಾ? ಅಥವಾ ಜೈಲು ಪಾಲಾಗ್ತಾರಾ ಅನ್ನೋದು ಕುತೂಹಲ ಮೂಡಿಸಿದೆ.

ಹೆಚ್​ಡಿ ರೇವಣ್ಣಗೆ ಜಾಮೀನಾ, ಎಸ್​ಐಟಿ ಕಸ್ಟಡಿಯಾ? ಇಂದೇ ನಿರ್ಣಾಯಕ ದಿನ
ಹೆಚ್​ಡಿ ರೇವಣ್ಣ
TV9 Web
| Edited By: |

Updated on: May 08, 2024 | 6:51 AM

Share

ಬೆಂಗಳೂರು, ಮೇ 8: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜ್ಯನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ವಿರುದ್ಧ ದಿನ ದಿನಕ್ಕೂ ಕಾನೂನು ಕುಣಿಕೆ ಬಿಗಿಯಾಗುತ್ತಿದೆ. ಎಸ್​​ಐಟಿ ಕಸ್ಟಡಿಯಲ್ಲಿರುವ ರೇವಣ್ಣ ವಿಚಾರಣೆ ಚುರುಕುಗೊಂಡಿದೆ. ಮಹಿಳೆ ಕಿಡ್ನ್ಯಾಪ್​ (Kidnap Case) ಪ್ರಕರಣದಲ್ಲಿ ಎಸ್​ಐಟಿ ಅಧಿಕಾರಿಗಳು ಮ್ಯಾರಾಥಾನ್​ ಎನ್​ಕ್ವರಿಯಲ್ಲಿ ವ್ಯಸ್ತರಾಗಿದ್ದಾರೆ. ಪ್ರಕರಣ ಸಂಬಂಧ ಮಾಜಿ ಸಚಿವ ರೇವಣ್ಣ ಹಾಗೂ ಆಪ್ತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಎಸ್​ಐಟಿ ಕಸ್ಟಡಿಯಲ್ಲಿರುವ ರೇವಣ್ಣ ಜಾಮೀನಿಗೆ ಅವರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಕಸ್ಟಡಿಯಲ್ಲಿರೋ ವ್ಯಕ್ತಿಗೆ ಜಾಮೀನು ಕೊಡುವುದು ಹೇಗೆ ಅಂತ ನ್ಯಾಯಾಧೀಶರು ರೇವಣ್ಣ ಪರ ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ವಕೀಲರು ವಾದ ಮುಂದಿಟ್ಟಿದ್ದಾರೆ. ಆದರೂ ಈ ಬಗ್ಗೆ ಎಸ್‌ಐಟಿ ಪ್ರತಿಕ್ರಿಯಿಸಲಿ ಅಂತಾ ಎಸ್​ಐಟಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು.

ಕಿಡ್ನ್ಯಾಪ್​ ಪ್ರಕರಣದಲ್ಲಿ ಎಸ್​ಐಟಿ ವಶದಲ್ಲಿರುವ ರೇವಣ್ಣ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಹೀಗಾಗಿ ರೇವಣ್ಣಗೆ ಇಂದು ನಿರ್ಣಾಯಕ ದಿನ ಆಗಿದೆ. ರೇವಣ್ಣಗೆ ಬೇಲ್ ಸಿಗುತ್ತಾ? ಮತ್ತೆ ಕಸ್ಟಡಿಗೆ ತೆಗೆದುಕೊಳ್ತಾರಾ? ಅಥವಾ ಜೈಲು ಪಾಲಾಗ್ತಾರಾ ಅನ್ನೋದು ಕುತೂಹಲ ಮೂಡಿಸಿದೆ.

ರೇವಣ್ಣ ಹಾಗೂ ಬಾಬಣ್ಣನಿಂದ ಮಾಹಿತಿ ಕಲೆಹಾಕಿದ ಎಸ್​​ಐಟಿ

ಮತ್ತೊಂದು ಕಡೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್​ಐಟಿ ಅಧಿಕಾರಿಗಳಿಗೆ ರೇವಣ್ಣ ಉತ್ತರವೇ ತಲೆ ಬಿಸಿ ತಂದಿದೆ. ಎಸ್ಐಟಿ ಅಧಿಕಾರಿಗಳು ಎಷ್ಟೇ ಪ್ರಶ್ನೆ ಕೇಳಿದರೂ, ರೇವಣ್ಣ ಮಾತ್ರ ಒಂದೇ ಉತ್ತರ ಕೊಡ್ತಿದ್ದಾರೆ. ಕಿಡ್ನಾಪ್ ಕೇಸ್‌ಗೂ ತನಗೂ ಸಂಬಂಧವೇ ಇಲ್ಲ. ಪದೇ ಪದೆ ಹೇಳಿದ್ದೇ ತಡ, ಕಿಡ್ನ್ಯಾಪ್ ಕೇಸ್‌ನ 2ನೇ ಆರೋಪಿ ಸತೀಶ್‌ ಬಾಬಣ್ಣನನ್ನು ಒಟ್ಟಿಗೆ ಕೂರಿಸಿ ಎಸ್​​ಐಟಿ ವಿಚಾರಣೆ ನಡೆಸಿ, ಪ್ರಕರಣ ಸಂಬಂಧ ಒಂದಿಷ್ಟು ಮಾಹಿತಿ ಕಲೆ ಹಾಕಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ: 196 ರಾಷ್ಟ್ರಗಳಿಗೆ ಮಾಹಿತಿ ರವಾನಿಸಿದ ಇಂಟರ್ ಪೋಲ್

ರೇವಣ್ಣಗೆ ಸಾಲು ಪ್ರಶ್ನೆ

ವಿಚಾರಣೆ ವೇಳೆ ರೇವಣ್ಣಗೆ ಎಸ್​ಐಟಿ ಅಧಿಕಾರಿಗಳು ಪ್ರಶ್ನೆಗಳು ಸುರಿಮಳೆಗೈದಿದ್ದಾರೆ. ಸತೀಶ್ ನಿಮಗೆ ಎಷ್ಟು ವರ್ಷದಿಂದ ಪರಿಚಯ ಇದೆ. ಸತೀಶ್​​ಗೆ ನೀವು ಸಂತ್ರಸ್ತೆಯನ್ನು ಕರೆದುಕೊಂಡು ಬರಲು ಹೇಳಿಲ್ವಾ. ಕಿಡ್ನ್ಯಾಪ್​ ಯಾಕೆ ಮಾಡಿಸಿದ್ದು. ಕಿಡ್ನ್ಯಾಪ್ ಹಿಂದೆ ಏನೆಲ್ಲಾ ಪ್ಲ್ಯಾನ್​ ಇತ್ತು. ಸಂತ್ರಸ್ತ ಮಹಿಳೆ ನಿಮ್ಮ ಮನೆಯಲ್ಲಿ ಯಾವಗಿನಿಂದ ಕೆಲಸ ಮಾಡ್ತಿದ್ದರು. ಯಾವಾಗ ಕೆಲಸ ಬಿಟ್ಟರು ಎಂದೆಲ್ಲಾ ಪ್ರಶ್ನೆ ಕೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ