AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಎಸ್​ಐಟಿ ಮುಂದೆ ಹಾಜರಾದ ಭವಾನಿ ರೇವಣ್ಣ!

ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅಲ್ಲದೆ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್​ಡ್ರೈವ್​​ನಲ್ಲಿನ ಮಹಿಳೆಯನ್ನು ಅಪಹರಿಸಲಾಗಿದೆ ಎಂದು ದೂರು ದಾಖಲಾಗಿದೆ. ಈ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಎಸ್​ಐಟಿ ಅವರನ್ನು ವಿಚಾರಣೆ ನಡೆಸುತ್ತಿದೆ.

ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಎಸ್​ಐಟಿ ಮುಂದೆ ಹಾಜರಾದ ಭವಾನಿ ರೇವಣ್ಣ!
ಭವಾನಿ ರೇವಣ್ಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 07, 2024 | 1:55 PM

Share

ಬೆಂಗಳೂರು, ಜೂನ್​ 07: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ವಿಶೇಷ ತನಿಖಾ ದಳ (SIT) ಅಧಿಕಾರಿಗಳ ವಿಚಾರಣೆಗೆ ಹಾಜರಾಗದೆ ಕಳೆದ 15-20 ದಿನಗಳಿಂದ ನಾಪತ್ತೆಯಾಗಿದ್ದ ಭವಾನಿ ರೇವಣ್ಣ (Bhavani Revanna) ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ಹೈಕೋರ್ಟ್​​ನ ​ ಏಕ ಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಪತ್ನಿ ಭವಾನಿ ರೇವಣ್ಣ ವಿಚಾರಣೆಗೆ ಎಸ್​ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ.

ಏನಿದು ಪ್ರಕರಣ?

ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ದಾಖಲಾಗಿದೆ. ಹೆಚ್​ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು.

ಹೆಚ್​ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಸದ್ಯ ಹೆಚ್​ಡಿ ರೇವಣ್ಣ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್​ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್​ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್​ ಕೊಟ್ಟಿತ್ತು. ನೋಟಿಸ್​ ನೀಡುತ್ತಿದ್ದಂತೆ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕತಿಸಿತ್ತು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಾ? ಸಾಮಾಜಿಕ ಜಾಲತಾಣದಲ್ಲಿ ಶುರುವಾಯ್ತು ದಂಧೆ, ಕಣ್ಮುಚ್ಚಿ ಕುಳಿತಿದೆಯಾ ಎಸ್​ಐಟಿ

ಅರ್ಜಿ ತಿರಸ್ಕೃತಗೊಳ್ಳುತ್ತಿದ್ದಂತೆ ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ತಯಾರಿ ನಡೆಸಿದರು. ಇದೇ ವೇಳೆ ಭವಾನಿ ರೇವಣ್ಣ ಕೂಡ ಎಸ್​ಐಟಿಗೆ “ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ” ಪತ್ರ ಬರೆದಿದ್ದರು. ಪತ್ರದಂತೆ ಎಸ್​ಐಟಿ ಅಧಿಕಾರಿಗಳು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ತೆರಳಿದ್ದರು. ಆದರೆ, ಮನೆಯೊಳಗೆ ಹೋದ ಎಸ್​ಐಟಿ ಅಧಿಕಾರಿಗಳಿಗೆ ಶಾಕ್ ಕಾದಿತ್ತು. ಭವಾನಿ ರೇವಣ್ಣ ಮನೆಯಲ್ಲಿ ಇರಲಿಲ್ಲ. ಇದರಿಂದ ಎಸ್​ಐಟಿ ಅಧಿಕಾರಿಗಳು ಸಂಜೆಯ ವರೆಗು ಕಾದು ನಿರಾಸೆಯಿಂದ ತೆರಳಿದ್ದರು. ಇದೀಗ ಜಾಮೀನು ಸಿಕ್ಕ ಬೆನ್ನಲ್ಲೇ ಭವಾನಿ ರೇವಣ್ಣ ವಿಚಾರಣೆಗೆ ಎಸ್​ಐಟಿ ಎದುರು ಹಾಜರಾಗಿದ್ದಾರೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Fri, 7 June 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ