AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಹರಣ ಪ್ರಕರಣ: ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಕೊನೆಗೂ ಅರೆಸ್ಟ್

ಕಿಡ್ನ್ಯಾಪ್​ ಬಗ್ಗೆ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಮಗ ದೂರು ನೀಡಿದ್ದ. ಇದರ ಅನ್ವಯ ಭವಾನಿ ಕಾರು ಚಾಲಕ ಅಜಿತ್ ವಿರುದ್ಧ ಎಸ್​ಐಟಿ ಎಫ್​ಐಆರ್ ದಾಖಲಿಸಿತ್ತು. ಮತ್ತೊಂದೆಡೆ, ಪ್ರಕರಣದಲ್ಲಿ 20ಕ್ಕೂ ಹೆಚ್ಚು ದಿನಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಶುಕ್ರವಾರ ವಿಚಾರಣೆಗೆ ಹಾಜರಾದರು.

ಅಪಹರಣ ಪ್ರಕರಣ: ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಕೊನೆಗೂ ಅರೆಸ್ಟ್
ಭವಾನಿ ರೇವಣ್ಣ ಕಾರು ಚಾಲಕ ಅಜಿತ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jun 07, 2024 | 2:21 PM

Share

ಬೆಂಗಳೂರು, ಜೂನ್ 7: ಮೈಸೂರು ಜಿಲ್ಲೆ ಕೆಆರ್ ನಗರ ಮಹಿಳೆಯ ಅಪಹರಣ (Kidnap Case) ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ (Bhavani Revanna) ವಿಚಾರಣೆಗೆ ಹಾಜರಾದ ಬೆನ್ನಲ್ಲೇ ಅವರ ಕಾರು ಚಾಲಕ ಅಜಿತ್​​ನನ್ನೂ ಎಸ್​ಐಟಿ (SIT) ಬಂಧಿಸಿರುವ ವಿಚಾರ ಬೆಳಕಿಗೆ ಬಂದಿದೆ. ಬುಧವಾರ ರಾತ್ರಿಯೇ ಚಿಕ್ಕಮಗಳೂರಿನಲ್ಲಿ ಅಜಿತ್​​ನನ್ನು ಎಸ್​ಐಟಿ ಬಂಧಿಸಿತ್ತು. ಚಾಲಕ ಅಜಿತ್ ಚಿಕ್ಕಮಗಳೂರಿನ ಸಂಬಂಧಿಕರ ಮನೆಯಲ್ಲಿ ಇದ್ದ. ಈ ಮಾಹಿತಿ ಆಧರಿಸಿ ಚಿಕ್ಕಮಗಳೂರಿನಲ್ಲಿ ಎಸ್​ಐಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಈ ಹಿಂದೆ ಅಜಿತ್ ಮಾವನ ಮನೆಯಲ್ಲಿ ಕೂಡ ಶೋಧ ನಡೆಸಿದ್ದರು.

ಸಂತ್ರಸ್ತೆಯ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಆರೋಪ ಅಜಿತ್ ಮೇಲಿದೆ. ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪ ಕೂಡ ಇದೆ. ಭವಾನಿ ಸೂಚನೆ ಮೇರೆಗೆ ಅಜಿತ್ ಸಂತ್ರಸ್ತೆಯನ್ನು ಮನೆಯಿಂದ ಕರೆದೊಯ್ದ ಎನ್ನಲಾಗಿತ್ತು.

ಕಿಡ್ನ್ಯಾಪ್​ ಬಗ್ಗೆ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಮಗ ದೂರು ನೀಡಿದ್ದ. ಇದರ ಅನ್ವಯ ಭವಾನಿ ಕಾರು ಚಾಲಕ ಅಜಿತ್ ವಿರುದ್ಧ ಎಸ್​ಐಟಿ ಎಫ್​ಐಆರ್ ದಾಖಲಿಸಿತ್ತು.

ಮತ್ತೊಂದೆಡೆ, ಪ್ರಕರಣದಲ್ಲಿ 20ಕ್ಕೂ ಹೆಚ್ಚು ದಿನಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಶುಕ್ರವಾರ ವಿಚಾರಣೆಗೆ ಹಾಜರಾದರು. ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಅವರು ಎಸ್​ಐಟಿ ವಿಚಾರಣೆಗೆ ಹಾಜರಾದರು.

ಇದನ್ನೂ ಓದಿ: ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಎಸ್​ಐಟಿ ಮುಂದೆ ಹಾಜರಾದ ಭವಾನಿ ರೇವಣ್ಣ!

ಹಾಸನ ಮಾಜಿ ಸಂಸದ ಪ್ರಜ್ವಲ್​ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಎಸ್​ಐಟಿ ಬಂಧಿಸಿತ್ತು. ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಮೊದಲ ಆರೋಪಿಯಾಗಿದ್ದಾರೆ. ರೇವಣ್ಣ ಅವರನ್ನು ಈಗಾಗಲೇ ಎಸ್​ಐಟಿ ಬಂಧಿಸಿ ವಿಚಾರಣೆ ನಡೆಸಿದೆ. ಇದೀಗ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್