AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಹರಣ ಪ್ರಕರಣ: ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಕೊನೆಗೂ ಅರೆಸ್ಟ್

ಕಿಡ್ನ್ಯಾಪ್​ ಬಗ್ಗೆ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಮಗ ದೂರು ನೀಡಿದ್ದ. ಇದರ ಅನ್ವಯ ಭವಾನಿ ಕಾರು ಚಾಲಕ ಅಜಿತ್ ವಿರುದ್ಧ ಎಸ್​ಐಟಿ ಎಫ್​ಐಆರ್ ದಾಖಲಿಸಿತ್ತು. ಮತ್ತೊಂದೆಡೆ, ಪ್ರಕರಣದಲ್ಲಿ 20ಕ್ಕೂ ಹೆಚ್ಚು ದಿನಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಶುಕ್ರವಾರ ವಿಚಾರಣೆಗೆ ಹಾಜರಾದರು.

ಅಪಹರಣ ಪ್ರಕರಣ: ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಕೊನೆಗೂ ಅರೆಸ್ಟ್
ಭವಾನಿ ರೇವಣ್ಣ ಕಾರು ಚಾಲಕ ಅಜಿತ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma|

Updated on: Jun 07, 2024 | 2:21 PM

Share

ಬೆಂಗಳೂರು, ಜೂನ್ 7: ಮೈಸೂರು ಜಿಲ್ಲೆ ಕೆಆರ್ ನಗರ ಮಹಿಳೆಯ ಅಪಹರಣ (Kidnap Case) ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ (Bhavani Revanna) ವಿಚಾರಣೆಗೆ ಹಾಜರಾದ ಬೆನ್ನಲ್ಲೇ ಅವರ ಕಾರು ಚಾಲಕ ಅಜಿತ್​​ನನ್ನೂ ಎಸ್​ಐಟಿ (SIT) ಬಂಧಿಸಿರುವ ವಿಚಾರ ಬೆಳಕಿಗೆ ಬಂದಿದೆ. ಬುಧವಾರ ರಾತ್ರಿಯೇ ಚಿಕ್ಕಮಗಳೂರಿನಲ್ಲಿ ಅಜಿತ್​​ನನ್ನು ಎಸ್​ಐಟಿ ಬಂಧಿಸಿತ್ತು. ಚಾಲಕ ಅಜಿತ್ ಚಿಕ್ಕಮಗಳೂರಿನ ಸಂಬಂಧಿಕರ ಮನೆಯಲ್ಲಿ ಇದ್ದ. ಈ ಮಾಹಿತಿ ಆಧರಿಸಿ ಚಿಕ್ಕಮಗಳೂರಿನಲ್ಲಿ ಎಸ್​ಐಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಈ ಹಿಂದೆ ಅಜಿತ್ ಮಾವನ ಮನೆಯಲ್ಲಿ ಕೂಡ ಶೋಧ ನಡೆಸಿದ್ದರು.

ಸಂತ್ರಸ್ತೆಯ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಆರೋಪ ಅಜಿತ್ ಮೇಲಿದೆ. ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪ ಕೂಡ ಇದೆ. ಭವಾನಿ ಸೂಚನೆ ಮೇರೆಗೆ ಅಜಿತ್ ಸಂತ್ರಸ್ತೆಯನ್ನು ಮನೆಯಿಂದ ಕರೆದೊಯ್ದ ಎನ್ನಲಾಗಿತ್ತು.

ಕಿಡ್ನ್ಯಾಪ್​ ಬಗ್ಗೆ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಮಗ ದೂರು ನೀಡಿದ್ದ. ಇದರ ಅನ್ವಯ ಭವಾನಿ ಕಾರು ಚಾಲಕ ಅಜಿತ್ ವಿರುದ್ಧ ಎಸ್​ಐಟಿ ಎಫ್​ಐಆರ್ ದಾಖಲಿಸಿತ್ತು.

ಮತ್ತೊಂದೆಡೆ, ಪ್ರಕರಣದಲ್ಲಿ 20ಕ್ಕೂ ಹೆಚ್ಚು ದಿನಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಶುಕ್ರವಾರ ವಿಚಾರಣೆಗೆ ಹಾಜರಾದರು. ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಅವರು ಎಸ್​ಐಟಿ ವಿಚಾರಣೆಗೆ ಹಾಜರಾದರು.

ಇದನ್ನೂ ಓದಿ: ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕ ಬೆನ್ನಲ್ಲೇ ಎಸ್​ಐಟಿ ಮುಂದೆ ಹಾಜರಾದ ಭವಾನಿ ರೇವಣ್ಣ!

ಹಾಸನ ಮಾಜಿ ಸಂಸದ ಪ್ರಜ್ವಲ್​ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಎಸ್​ಐಟಿ ಬಂಧಿಸಿತ್ತು. ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಮೊದಲ ಆರೋಪಿಯಾಗಿದ್ದಾರೆ. ರೇವಣ್ಣ ಅವರನ್ನು ಈಗಾಗಲೇ ಎಸ್​ಐಟಿ ಬಂಧಿಸಿ ವಿಚಾರಣೆ ನಡೆಸಿದೆ. ಇದೀಗ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್