AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಹರಣ ಪ್ರಕರಣ: ಹೆಚ್​ಡಿ ರೇವಣ್ಣ ಜೈಲಿಂದ ಬಿಡುಗಡೆ, ಲಾಠಿಚಾರ್ಜ್

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಈ ಅಶ್ಲೀಲ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಲಾಗಿತ್ತು ಎಂಬ ಆರೋಪದ ಮೇಲೆ ಮಾಜಿ ಸಚಿವ, ಶಾಸಕ ಹೆಚ್​ಡಿ ರೇವಣ್ಣ ಅವರು ಜೈಲು ಪಾಲಾಗಿದ್ದರು. ಇದೀಗ 11 ದಿನಗಳ ಬಳಿಕ ಸೋಮವಾರ ಅವರಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು, ಇಂದು ಜೈಲಿನಿಂದ ಹೊರಗಡೆ ಬಂದಿದ್ದಾರೆ.

ಅಪಹರಣ ಪ್ರಕರಣ: ಹೆಚ್​ಡಿ ರೇವಣ್ಣ ಜೈಲಿಂದ ಬಿಡುಗಡೆ, ಲಾಠಿಚಾರ್ಜ್
ಶಾಸಕ ಹೆಚ್​ಡಿ ರೇವಣ್ಣ
ಶಿವಪ್ರಸಾದ್​ ಬಿ.
| Edited By: ವಿವೇಕ ಬಿರಾದಾರ|

Updated on:May 14, 2024 | 2:01 PM

Share

ಬೆಂಗಳೂರು, ಮೇ 14: ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆ ಅಪಹಿರಸಿದ ಆರೋಪದ ಮೇಲೆ ಜೈಲು ಸೇರಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಅವರಿಗೆ ಸೋಮವಾರ (ಮೇ. 13) ಷರತ್ತು ಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು (ಮೇ 14) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹೆಚ್​ಡಿ ರೇವಣ್ಣ ಅವರು ಮಂಗಳವಾರ ಬಿಡುಗಡೆಯಾಗುತ್ತಾರೆ ಎಂಬ ವಿಚಾರ ತಿಳಿದಿದ್ದ ಅವರ ಬೆಂಬಲಿಗರು ಮತ್ತು ನೂರಾರು ಜೆಡಿಎಸ್​ ಕಾರ್ಯಕರ್ತರು ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಜಮಾಯಿಸಿದ್ದರು. ಹೆಚ್​ಡಿ ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು. ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದರು.

ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ನ್ಯಾಯಾಲಯ ಸೋಮವಾರವೇ ​ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನು ನೀಡುವಷ್ಟರಲ್ಲಿ ನ್ಯಾಯಾಲಯದ ಸಮಯ ಆಗಿದ್ದರಿಂದ ಕೋರ್ಟ್​ ಪ್ರಕ್ರಿಯೆಗಳು ಇಂದಿಗೆ (ಮೇ 14) ಮುಂದೂಡಲಾಗಿತ್ತು. ಹೀಗಾಗಿ ಹೆಚ್​ಡಿ ರೇವಣ್ಣ ಸೋಮವಾರದ ರಾತ್ರಿಯನ್ನು ಜೈಲಿನಲ್ಲೇ ಕಳೆದರು. ಮಂಗಳವಾರ ಕೋರ್ಟ್​​ ಪ್ರಕ್ರಿಯೆಗಳು ಮುಗಿದಿದ್ದು, ಇದೀಗ ಜೈಲಿಂದ ಬಿಡುಗಡೆಯಾಗಿದ್ದಾರೆ.

ಏನಿದು ಕಿಡ್ನಾಪ್ ಕೇಸ್?

ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್​ಐಟಿ ಬಂಧಿಸಿದೆ. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್​ಐಟಿ ಗುರುತಿಸಿದೆ. ರೇವಣ್ಣ ಮೊದಲ ಆರೋಪಿಯಾಗಿದ್ದಾರೆ.

ಮಹಿಳೆಯ ಪತ್ತೆಗಾಗಿ ನಂತರ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಸಂತ್ರಸ್ತೆ ಹೆಚ್​ಡಿ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು. ಬಳಿಕ ಮೇ 03ರ ಸಂಜೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ರೇವಣ್ಣಗೆ ಎಸ್​​ಐಟಿ ಮೂರನೇ ನೋಟಿಸ್ ನೀಡಿತ್ತು.

ಎಸ್​ಐಟಿ ನೋಟಿಸ್​ ನೀಡುತ್ತಿದ್ದಂತೆ ಮಾಜಿ ಹೆಚ್​ಡಿ ರೇವಣ್ಣ ವಕೀಲರ ಮೊರೆ ಹೋಗಿದ್ದು, ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಜಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಸಿದ್ದರು. ಆದರೆ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಬಳಿಕ ಎಸ್​ಐಟಿ ಪ್ರಜ್ವಲ್​ ರೇವಣ್ಣ ಅವರನ್ನು ಬಂಧಿಸಿತ್ತು. ಸೋಮವಾರ ಜಾಮೀನು ಅರ್ಜಿ ಪುರಸ್ಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೆಚ್​ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

Published On - 1:44 pm, Tue, 14 May 24

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ