AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಐಟಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಎಚ್​​ಡಿ ರೇವಣ್ಣಗೆ ಬಿಗ್​ ರಿಲೀಫ್

ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣಗೆ ನೀಡಿರುವ ಜಾಮೀನು ರದ್ದು ಕೋರಿ ಎಸ್​​ಐಟಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ವಜಾ ಮಾಡಿದೆ. ಇದರಿಂದ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಎಸ್ಐಟಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಎಚ್​​ಡಿ ರೇವಣ್ಣಗೆ ಬಿಗ್​ ರಿಲೀಫ್
ಹೆಚ್​ಡಿ ರೇವಣ್ಣ
Ramesha M
| Edited By: |

Updated on:Aug 28, 2024 | 3:23 PM

Share

ಬೆಂಗಳೂರು, (ಆಗಸ್ಟ್​ 28): ಮೈಸೂರು ಜಿಲ್ಲೆ ಕೆ.ಆರ್.‌ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ನೀಡಿರುವ ಜಾಮೀನು ರದ್ದು ಕೋರಿ SIT ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್​ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಎಸ್​​ಐಟಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಆದ್ರೆ, ಹೈಕೋರ್ಟ್​ ಇಂದು (ಆಗಸ್ಟ್ 28) ಎಸ್​ಐಟಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಎಚ್​ಡಿ ರೇವಣ್ಣಗೆ ಮತ್ತಷ್ಟು ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಇನ್ನು ಇದೇ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದೆ. ಸತೀಶ್ ಬಾಬು, ಮಧುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿಗೆ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ರೇವಣ್ಣ ಪತ್ನಿ ಭವಾನಿ ಕೂಡ  ಈಗಾಗಲೇಜಾಮೀನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್​​

ಸಂತ್ರಸ್ತೆ ಮಹಿಳೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರೇವಣ್ಣ ಅವರಿಗೆ ಮೇ 13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿತ್ತು. ಬಳಿಕ ಎಸ್​​ಐಟಿ ವಿಶೇಷ ಕೋರ್ಟ್​ನ ಜಾಮೀನು ಆದೇಶ ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ್ದು, ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ರದ್ದು ಮಾಡುವಂತೆ ಮನವಿ ಮಾಡಿತ್ತು. ಆದ್ರೆ, ಕೋರ್ಟ್​ ಜಾಮೀನು ರದ್ದಗೊಳಿಸಲು ನಿರಾಕರಿಸಿದೆ.

ಮೈಸೂರು ಜಿಲ್ಲೆಯ ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣದಲ್ಲಿ ಎಸ್‌ಐಟಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಎಚ್. ಡಿ. ರೇವಣ್ಣ ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:00 pm, Wed, 28 August 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ