AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ವೈದ್ಯರ ಕಳ್ಳಾಟ ಪ್ರಕರಣ; ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ

ಟಿವಿ 9 ರಹಸ್ಯ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಕಳ್ಳಾಟ ಬಯಲಾಗಿತ್ತು. ವೈದ್ಯರು ಬೆಳಿಗ್ಗೆ ಆಸ್ಪತ್ರೆಗೆ ಬಂದು ಪಂಚ್ ಮಾಡಿ, ಆ ನಂತರ ಖಾಸಗಿ ಆಸ್ಪತ್ರೆಗೆ ಹೋಗಿ ಕೆಲಸ ಮಾಡುತ್ತಿದ್ದರು. ಇದು ಟಿವಿ9 ಕ್ಯಾಮಾರಾದಲ್ಲಿ ಸೆರೆಯಾಗಿತ್ತು.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ವೈದ್ಯರ ಕಳ್ಳಾಟ ಪ್ರಕರಣ; ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ
ಹುಬ್ಬಳಿಯ ಕಿಮ್ಸ್​ ಆಸ್ಪತ್ರೆ
TV9 Web
| Edited By: sandhya thejappa|

Updated on: Jun 09, 2021 | 12:13 PM

Share

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕಳ್ಳಾಟ ಪ್ರಕರಣಕ್ಕೆ ಸಂಬಂಧಿಸಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಜೂನ್ 8) ಸಲ್ಲಿಕೆ ಮಾಡಿದ್ದೇನೆ ಎಂದು ಟಿವಿ9ಗೆ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಮಾಹಿತಿ ನೀಡಿದ್ದಾರೆ. 11 ವೈದ್ಯರ ಒಂದು ವರ್ಷದ ಹಾಜರಾತಿ ಬಗ್ಗೆ ವರದಿಯನ್ನು ಸರ್ಕಾರಕ್ಕೆ ಕಳುಹಿಸಿದ್ದು, ಧಾರವಾಡ ಜಿಲ್ಲಾಧಿಕಾರಿಗೂ ಕಳುಹಿಸುತ್ತೇನೆ ಎಂದು ತಿಳಿಸಿದ್ದಾರೆ. ವೈದ್ಯರು ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಬಿಟ್ಟಿದ್ದು ಎಂದು ಕಿಮ್ಸ್ ನಿರ್ದೇಶಕ ಅಭಿಪ್ರಾಯಪಟ್ಟರು.

ಟಿವಿ 9 ರಹಸ್ಯ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಕಳ್ಳಾಟ ಬಯಲಾಗಿತ್ತು. ವೈದ್ಯರು ಬೆಳಿಗ್ಗೆ ಆಸ್ಪತ್ರೆಗೆ ಬಂದು ಪಂಚ್ ಮಾಡಿ, ಆ ನಂತರ ಖಾಸಗಿ ಆಸ್ಪತ್ರೆಗೆ ಹೋಗಿ ಕೆಲಸ ಮಾಡುತ್ತಿದ್ದರು. ಇದು ಟಿವಿ9 ಕ್ಯಾಮಾರಾದಲ್ಲಿ ಸೆರೆಯಾಗಿತ್ತು. ಸೆರೆಯಾದ ದೃಶ್ಯವನ್ನು ಪ್ರಸಾರ ಮಾಡಲಾಗಿತ್ತು. ಟಿವಿ9 ವರದಿಯಿಂದ ಎಚ್ಚೆತ್ತುಕೊಂಡ ಸರ್ಕಾರ ವೈದ್ಯರ ಬಗ್ಗೆ ವರದಿ ನೀಡಲು ಸೂಚನೆಯನ್ನು ನೀಡಿತ್ತು.

ಇನ್ನೂ ಡಿಸಿ ಕಚೇರಿ ತಲುಪದ ಕಿಮ್ಸ್ ನಿರ್ದೇಶಕರ ವರದಿ 11 ವೈದ್ಯರ ಬಗ್ಗೆ ವರದಿ ಜಿಲ್ಲಾಧಿಕಾರಿ ಕಚೇರಿಗೆ ಬಂದಿಲ್ಲ ಎಂದು ಧಾರವಾಡ ಡಿಸಿ ನಿತೇಶ್ ಪಾಟೀಲ್ ಮಾಹಿತಿ ನೀಡಿದ್ದಾರೆ. ನಿನ್ನೆ ಸಂಜೆಯೇ ವರದಿ ನೀಡಲು ಹೇಳಿದ್ದೆ. ಆದರೆ ಇಲ್ಲಿಯವರೆಗೂ ಕಿಮ್ಸ್ನಿಂದ ವರದಿ ಬಂದಿಲ್ಲ ಎಂದು ತಿಳಿಸಿದ್ದಾರೆ. ಎಲ್ಲಾ 11 ವೈದ್ಯರ ವಿರುದ್ಧವೂ ಕೂಲಂಕಷವಾಗಿ ಪರಿಶೀಲಿಸಿ ವರದಿ ನೀಡಲು ಸೂಚಿಸಿದ್ದೆ. ವರದಿ ಬಂದ ತಕ್ಷಣ ಜಿಲ್ಲಾಡಳಿತದಿಂದ ಆರೋಗ್ಯ ಇಲಾಖೆ ಶಿಫಾರಸು ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಇದನ್ನೂ ಓದಿ

ಕಿಮ್ಸ್‌ನ ನಿರ್ದೇಶಕರ ಶೋಕಾಸ್ ನೋಟಿಸ್ಗೆ ಉತ್ತರಿಸಿದ್ದು 9 ವೈದ್ಯರು, ಇನ್ನು ಇಬ್ಬರು ಬಾಕಿ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಪ್ರಕರಣ; ಟಿವಿ9 ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ.ಕೆ.ಸುಧಾಕರ್

(KIMS hospital Director Dr Ramalingappa has submitted a report to the State Government regarding KIMS Hospital Doctors)

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು