AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಿಮ್ಸ್​ನಲ್ಲಿ ನಿರ್ಲಕ್ಷ್ಯ, ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಓಡಾಡ್ತಿದ್ದಾರೆ ಸೋಂಕಿತರು

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊವಿಡ್ ರೂಲ್ಸ್ ಪಾಲನೆಯಾಗುತ್ತಿಲ್ಲ, ಕೊರೊನಾ ಬಗ್ಗೆ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಸೋಂಕಿತರು ಓಡಾಡ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು ಕಿಮ್ಸ್​ನಲ್ಲಿ ನಿರ್ಲಕ್ಷ್ಯ, ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಓಡಾಡ್ತಿದ್ದಾರೆ ಸೋಂಕಿತರು
ಕಿಮ್ಸ್ ಆಸ್ಪತ್ರೆ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 26, 2021 | 12:11 PM

Share

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಾಗಲು ಕಾರಣ ದೊಡ್ಡ ದೊಡ್ಡ ಹಾಸ್ಪಿಟಲ್ಗಳ ನಿರ್ಲಕ್ಷ್ಯ. ಏಕೆಂದರೆ ಇಲ್ಲೊಂದು ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ಬೇಕಾಬಿಟ್ಟಿಯಾಗಿ ಬಿಟ್ಟಿದ್ದಾರೆ. ಅವರಿಗೆ ಸರಿಯಾಗಿ ಚಿಕಿತ್ಸೆ ಕೊಡುತ್ತಿಲ್ಲ. ಸರಿಯಾದ ವ್ಯವಸ್ಥೆ ಮಾಡಿಲ್ಲ. ಈ ಆಸ್ಪತ್ರೆಯಲ್ಲಿ ಸೋಂಕಿತರ್ಯಾರು ರೋಗಿಗಳ್ಯಾರು ಎಂದು ಗೊತ್ತೇ ಆಗಲ್ಲ.

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊವಿಡ್ ರೂಲ್ಸ್ ಪಾಲನೆಯಾಗುತ್ತಿಲ್ಲ, ಕೊರೊನಾ ಬಗ್ಗೆ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಸೋಂಕಿತರು ಓಡಾಡ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿಗಳು ಯಾರು? ಕೊರೊನಾ ಸೋಂಕಿತರು ಯಾರೆಂದು ತಿಳಿಯುವುದೇ ಕಷ್ಟವಾಗಿದೆ.

ಮಹಾಮಾರಿಯ ಭೀಕರತೆ ಬಗ್ಗೆ ತಿಳಿದಿದ್ದರೂ ಆಸ್ಪತ್ರೆ ಸಿಬ್ಬಂದಿಯೇ ಕೊರೊನಾವನ್ನು ನಿರ್ಲಕ್ಷಿಸುತ್ತಿದ್ದಾರೆ. ಕೊರೊನಾ ಸೋಂಕಿತರು ಆಸ್ಪತ್ರೆಯ ಎಲ್ಲ ಕಡೆ ಓಡಾಡುತ್ತಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಯಾವುದೇ ಮಾರ್ಗಸೂಚಿ ಪಾಲಿಸ್ತಿಲ್ಲ. ಸೋಂಕಿತರು ಎಲ್ಲಿ ಹೋಗಬೇಕೆಂದು ಸೂಚನೆಯೇ ಇಲ್ಲ. ಯಾವ ವಾರ್ಡ್‌ಗೆ ಹೋಗಬೇಕು ಎಂಬ ಸ್ಪಷ್ಟ ಮಾಹಿತಿ ಇಲ್ಲ. ಆಸ್ಪತ್ರೆಯ ಸಿಬ್ಬಂದಿಯೂ ಯಾವುದೇ ಸೂಚನೆ ನೀಡುತ್ತಿಲ್ಲ. ಹೀಗಾಗಿ ಕಿಮ್ಸ್‌ನಲ್ಲಿ ಸೋಂಕಿತರು ಎಲ್ಲೆಂದರಲ್ಲಿ ಓಡಾಡ್ತಿದ್ದಾರೆ.

ಇಂತಹ ಸ್ಥಿತಿಯೊಂದು ಕಿಮ್ಸ್ನಲ್ಲಿ ಕಂಡು ಬಂದಿದೆ. ಆದಷ್ಟು ಬೇಗ ಆಸ್ಪತ್ರೆ ಆಡಳಿತ ಮಂಡಳಿ ಈ ಬಗ್ಗೆ ಗಮನಹರಿಸಬೇಕು. ಇಲ್ಲದಿದ್ದರೆ ಕೊರೊನಾ ಮತ್ತಷ್ಟು ಜನರಿಗೆ ಹರಡಬಹುದು.

ಇದನ್ನೂ ಓದಿ: ಬುರ್ಜ್​ ಖಲೀಫಾದಷ್ಟೇ ಎತ್ತರದ ಸಂದೇಶ ನೀಡಿದ ದುಬೈ; ತ್ರಿವರ್ಣ ಧ್ವಜ ಹಾರಿಸಿ ಭಾರತೀಯರೇ ದೃಢವಾಗಿರಿ ಎಂದು ಹಾರೈಸಿದ ಮಿತ್ರ ರಾಷ್ಟ್ರ

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ