AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಿಮ್ಸ್​ನಲ್ಲಿ ನಿರ್ಲಕ್ಷ್ಯ, ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಓಡಾಡ್ತಿದ್ದಾರೆ ಸೋಂಕಿತರು

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊವಿಡ್ ರೂಲ್ಸ್ ಪಾಲನೆಯಾಗುತ್ತಿಲ್ಲ, ಕೊರೊನಾ ಬಗ್ಗೆ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಸೋಂಕಿತರು ಓಡಾಡ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು ಕಿಮ್ಸ್​ನಲ್ಲಿ ನಿರ್ಲಕ್ಷ್ಯ, ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಓಡಾಡ್ತಿದ್ದಾರೆ ಸೋಂಕಿತರು
ಕಿಮ್ಸ್ ಆಸ್ಪತ್ರೆ
ಆಯೇಷಾ ಬಾನು
|

Updated on: Apr 26, 2021 | 12:11 PM

Share

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಾಗಲು ಕಾರಣ ದೊಡ್ಡ ದೊಡ್ಡ ಹಾಸ್ಪಿಟಲ್ಗಳ ನಿರ್ಲಕ್ಷ್ಯ. ಏಕೆಂದರೆ ಇಲ್ಲೊಂದು ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರನ್ನು ಬೇಕಾಬಿಟ್ಟಿಯಾಗಿ ಬಿಟ್ಟಿದ್ದಾರೆ. ಅವರಿಗೆ ಸರಿಯಾಗಿ ಚಿಕಿತ್ಸೆ ಕೊಡುತ್ತಿಲ್ಲ. ಸರಿಯಾದ ವ್ಯವಸ್ಥೆ ಮಾಡಿಲ್ಲ. ಈ ಆಸ್ಪತ್ರೆಯಲ್ಲಿ ಸೋಂಕಿತರ್ಯಾರು ರೋಗಿಗಳ್ಯಾರು ಎಂದು ಗೊತ್ತೇ ಆಗಲ್ಲ.

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊವಿಡ್ ರೂಲ್ಸ್ ಪಾಲನೆಯಾಗುತ್ತಿಲ್ಲ, ಕೊರೊನಾ ಬಗ್ಗೆ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಸೋಂಕಿತರು ಓಡಾಡ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿಗಳು ಯಾರು? ಕೊರೊನಾ ಸೋಂಕಿತರು ಯಾರೆಂದು ತಿಳಿಯುವುದೇ ಕಷ್ಟವಾಗಿದೆ.

ಮಹಾಮಾರಿಯ ಭೀಕರತೆ ಬಗ್ಗೆ ತಿಳಿದಿದ್ದರೂ ಆಸ್ಪತ್ರೆ ಸಿಬ್ಬಂದಿಯೇ ಕೊರೊನಾವನ್ನು ನಿರ್ಲಕ್ಷಿಸುತ್ತಿದ್ದಾರೆ. ಕೊರೊನಾ ಸೋಂಕಿತರು ಆಸ್ಪತ್ರೆಯ ಎಲ್ಲ ಕಡೆ ಓಡಾಡುತ್ತಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಯಾವುದೇ ಮಾರ್ಗಸೂಚಿ ಪಾಲಿಸ್ತಿಲ್ಲ. ಸೋಂಕಿತರು ಎಲ್ಲಿ ಹೋಗಬೇಕೆಂದು ಸೂಚನೆಯೇ ಇಲ್ಲ. ಯಾವ ವಾರ್ಡ್‌ಗೆ ಹೋಗಬೇಕು ಎಂಬ ಸ್ಪಷ್ಟ ಮಾಹಿತಿ ಇಲ್ಲ. ಆಸ್ಪತ್ರೆಯ ಸಿಬ್ಬಂದಿಯೂ ಯಾವುದೇ ಸೂಚನೆ ನೀಡುತ್ತಿಲ್ಲ. ಹೀಗಾಗಿ ಕಿಮ್ಸ್‌ನಲ್ಲಿ ಸೋಂಕಿತರು ಎಲ್ಲೆಂದರಲ್ಲಿ ಓಡಾಡ್ತಿದ್ದಾರೆ.

ಇಂತಹ ಸ್ಥಿತಿಯೊಂದು ಕಿಮ್ಸ್ನಲ್ಲಿ ಕಂಡು ಬಂದಿದೆ. ಆದಷ್ಟು ಬೇಗ ಆಸ್ಪತ್ರೆ ಆಡಳಿತ ಮಂಡಳಿ ಈ ಬಗ್ಗೆ ಗಮನಹರಿಸಬೇಕು. ಇಲ್ಲದಿದ್ದರೆ ಕೊರೊನಾ ಮತ್ತಷ್ಟು ಜನರಿಗೆ ಹರಡಬಹುದು.

ಇದನ್ನೂ ಓದಿ: ಬುರ್ಜ್​ ಖಲೀಫಾದಷ್ಟೇ ಎತ್ತರದ ಸಂದೇಶ ನೀಡಿದ ದುಬೈ; ತ್ರಿವರ್ಣ ಧ್ವಜ ಹಾರಿಸಿ ಭಾರತೀಯರೇ ದೃಢವಾಗಿರಿ ಎಂದು ಹಾರೈಸಿದ ಮಿತ್ರ ರಾಷ್ಟ್ರ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?