AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಾವಣಕ್ಕೆ ಗ್ರಾಹಕರಿಗೆ ಕೆಎಂಎಫ್​ನಿಂದ ಸಿಹಿಸುದ್ದಿ; ಸದ್ಯ ಹಾಲಿನ ಬೆಲೆ ಏರಿಕೆಯಿಲ್ಲ; ಹೊಸ ಉತ್ಪನ್ನ ಬಿಡುಗಡೆ, ಇನ್ನಷ್ಟು ರಿಯಾಯಿತಿ

KMF Discounts: ಮುಂದಿನ ಕೆಲ ದಿನಗಳಲ್ಲಿ ಸಾಲು ಸಾಲು ಹಬ್ಬಗಳ ಆಚರಣೆಯಿರುವುದನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಲಿದೆ. ಇಂದಿನಿಂದ 15 ದಿನಗಳ ಕಾಲ ನಡೆಯುವ ಸಿಹಿ ಉತ್ಸವದಲ್ಲಿ ಕೆಎಂಎಫ್ ಉತ್ಪಾದಿಸುವ ಎಲ್ಲಾ ಸಿಹಿ ಉತ್ಪನ್ನಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ ದೊರೆಯಲಿದೆ.

ಶ್ರಾವಣಕ್ಕೆ ಗ್ರಾಹಕರಿಗೆ ಕೆಎಂಎಫ್​ನಿಂದ ಸಿಹಿಸುದ್ದಿ; ಸದ್ಯ ಹಾಲಿನ ಬೆಲೆ ಏರಿಕೆಯಿಲ್ಲ; ಹೊಸ ಉತ್ಪನ್ನ ಬಿಡುಗಡೆ, ಇನ್ನಷ್ಟು ರಿಯಾಯಿತಿ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on: Aug 19, 2021 | 4:44 PM

Share

ಬೆಂಗಳೂರು: ಹಾಲಿನ ದರ ಹೆಚ್ಚಳ ಮಾಡಲು ಬೆಂಗಳೂರು, ಕೋಲಾರ ಹಾಲು ಒಕ್ಕೂಟಗಳು ಮನವಿ ಮಾಡುತ್ತಿವೆ. ಆದರೆ, ಸದ್ಯಕ್ಕೆ ಕೆಎಂಎಫ್ ಹಾಲಿನ ದರ ಹೆಚ್ಚಳ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬೆಂಗಳೂರಿನಲ್ಲಿ ಕೆಎಂಎಫ್ ಎಂಡಿ ಸತೀಶ್ ಸ್ಪಷ್ಟಪಡಿಸಿದರು. ಬೇರೆ ರಾಜ್ಯಗಳಲ್ಲಿ ನಂದಿನಿ ಹಾಲಿಗೆ ಹೆಚ್ಚಿನ ಬೇಡಿಕೆಯಿದೆ. ಶಾಲೆಗಳಲ್ಲಿ ಮಕ್ಕಳಿಗೆ ಹಾಲು ನೀಡುವ ಕ್ಷೀರಭಾಗ್ಯ ಯೋಜನೆ ಮುಂದುವರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ಶ್ರಾವಣಕ್ಕೆ ಕೆಎಂಎಫ್ ನೀಡಲಿದೆ ಗ್ರಾಹಕರಿಗೆ ಸಿಹಿಸುದ್ದಿ ಮುಂದಿನ ಕೆಲ ದಿನಗಳಲ್ಲಿ ಸಾಲು ಸಾಲು ಹಬ್ಬಗಳ ಆಚರಣೆಯಿರುವುದನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಲಿದೆ. ಇಂದಿನಿಂದ 15 ದಿನಗಳ ಕಾಲ ನಡೆಯುವ ಸಿಹಿ ಉತ್ಸವದಲ್ಲಿ ಕೆಎಂಎಫ್ ಉತ್ಪಾದಿಸುವ ಎಲ್ಲಾ ಸಿಹಿ ಉತ್ಪನ್ನಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ ದೊರೆಯಲಿದೆ. ಜತೆಗೆ ನಂದಿನಿ ತುಪ್ಪ ಮತ್ತು ಬೆಣ್ಣೆ ಮೇಲಿನ ರಿಯಾಯಿತಿ ದರ ಇನ್ನೂ ಒಂದು ತಿಂಗಳು ಮುಂದುವರೆಯಲಿದೆ. ಅಷ್ಟೇ ಅಲ್ಲದೇ, ನಂದಿನಿ ಶ್ರೀಖಂಡ, ನಂದಿನಿ ಐಸ್ ಕ್ರೀಂ ಉತ್ಪನ್ನಗಳಿಗೆ ಒಂದು ಕೊಂಡರೆ ಮತ್ತೊಂದು ಉಚಿತ ಯೋಜನೆಗೂ ಚಾಲನೆ ನೀಡಲಾಗಿದೆ.

ಇದೇ ಸಂದರ್ಭದಲ್ಲಿ ಕೆಎಂಎಫ್ ಐದು ಶುಗರ್ ಫ್ರೀ ಉತ್ಪನ್ನಗಳನ್ನು ಬಿಡುಗಡೆಗೊಳಿಸಲಿದೆ. ನಂದಿನಿ ಸಕ್ಕರೆ ರಹಿತ ಪೇಡಾ, ನಂದಿನಿ ಸಕ್ಕರೆ ರಹಿತ ಕೇಸರ್ ಪೇಡಾ, ನಂದಿನಿ ಸಕ್ಕರೆ ರಹಿತ ಬೇಸನ್ ಲಡ್ಡು, ನಂದಿನಿ ಸಕ್ಕರೆ ರಹಿತ ಚಾಕೋಲೇಟ್ ಬರ್ಫಿ, ನಂದಿನಿ ಸಕ್ಕರೆ ರಹಿತ ಕೊಕೊನಟ್ ಬರ್ಫಿ ಬಿಡುಗಡೆಯಾಗಲಿದೆ. ಈ ಹೊಸ ಉತ್ಪನ್ನಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ ನೀಡಲು ಕೆಎಂಎಫ್ ತೀರ್ಮಾನಿಸಿದೆ.

ಇದನ್ನೂ ಓದಿ: 

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನಂದಿನಿ ಆಯುರ್ವೇದಿಕ್​ ಹಾಲು; ಕೆಎಂಎಫ್​ನಿಂದ ಹೊಸ ಉತ್ಪನ್ನಗಳ ಬಿಡುಗಡೆ

ರೈತರ ನೆರವಿಗೆ ನಿಂತ ಸರ್ಕಾರ, ಕೆಎಂಎಫ್ ಮಳಿಗೆಗಳಲ್ಲಿ ತರಕಾರಿ ಮಾರಾಟ

(KMF discounts in Shravana 2021 no price rise for milk New product launch and more discount)

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್