AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಂಎಫ್​​ ಇದೀಗ ಆರ್​ಸಿಬಿ ತಂಡದ ಅಫಿಶಿಯಲ್​ ಪಾರ್ಟ್​ನರ್: ಕೊಹ್ಲಿ, ಪಡಿಕಲ್​ರಿಂದ ಉತ್ಪನ್ನಗಳ ಪ್ರಚಾರ

ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಸಂದರ್ಭದಲ್ಲಿ ಕನ್ನಡಿಗರ ಹೆಮ್ಮೆಯ ಬ್ರಾಂಡ್​ ಕೆಎಂಎಫ್​​ ಆರ್​​ಸಿಬಿಗೆ ಸಾಥ್​ ನೀಡಿದೆ. 2026ರ ಆವೃತ್ತಿಯಲ್ಲಿ ಆರ್​ಸಿಬಿಗೆ ಕೆಎಂಎಫ್​​ ಪ್ರಾಯೋಜಕತ್ವ ನೀಡಿದೆ. ಒಟ್ಟು 4 ಕೋಟಿ ರೂ ವೆಚ್ಚದಲ್ಲಿ ಒಂದು ವರ್ಷದ ಟೆಂಡರ್ ಪಡೆದಿದೆ. ಆ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ.

ಕೆಎಂಎಫ್​​ ಇದೀಗ ಆರ್​ಸಿಬಿ ತಂಡದ ಅಫಿಶಿಯಲ್​ ಪಾರ್ಟ್​ನರ್: ಕೊಹ್ಲಿ, ಪಡಿಕಲ್​ರಿಂದ ಉತ್ಪನ್ನಗಳ ಪ್ರಚಾರ
ನಂದಿನಿ ಉತ್ಪನ್ನಗಳುImage Credit source: tv9 kannada
Vinay Kashappanavar
| Edited By: |

Updated on:Mar 24, 2026 | 6:04 PM

Share

ಬೆಂಗಳೂರು, ಮಾರ್ಚ್​ 24: ಐಪಿಎಲ್ (IPL)​​ ಅಂದರೆ ಕ್ರಿಕೆಟ್ ಪ್ರೇಮಿಗಳಿಗೆ ಎಲ್ಲಿಲ್ಲದ ಸಂಭ್ರಮ. ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಹಾಲಿ ಚಾಂಪಿಯನ್ಸ್ ​​ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ನಡುವೆ ಮೊದಲ ಪಂದ್ಯ ನಡೆಯಲಿದೆ. ಆರ್​ಸಿಬಿ ಪಂದ್ಯ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡಿಗರ ಹೆಮ್ಮೆಯ ಬ್ರಾಂಡ್​ ಕೆಎಂಎಫ್ (KMF)​​ 2026ರ ಆವೃತ್ತಿಯಲ್ಲಿ ಆರ್​ಸಿಬಿಗೆ ಪ್ರಾಯೋಜಕತ್ವ ನೀಡಿದೆ. ಈ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ.

2026ರ ಆವೃತ್ತಿಯಲ್ಲಿ ಕನ್ನಡಿಗರ ಹೆಮ್ಮೆಯ ಬ್ರಾಂಡ್​ ಕೆಎಂಎಫ್ ಪ್ರಾಯೋಜಕತ್ವ ನೀಡುವ ಮೂಲಕ ಆರ್​ಸಿಬಿಗೆ ಸಾಥ್​ ನೀಡಿದೆ. ಆರ್​ಸಿಬಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ. ಹಾಗಾಗಿ ಪ್ರಾಯೋಜಕತ್ವ ನೀಡುವ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಉತ್ಪನ್ನ ಪರಿಚಯಕ್ಕೆ ಮುಂದಾಗಿದೆ.

KMF​ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹೇಳಿದ್ದಿಷ್ಟು 

ಈ ಬಗ್ಗೆ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ KMF​ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ, 2026ರ ಆವೃತ್ತಿಯಲ್ಲಿ ಆರ್​ಸಿಬಿಗೆ KMF ಪ್ರಾಯೋಜಕತ್ವ ನೀಡಿದೆ. ಈ ಮೂಲಕ ನಂದಿನಿ ಉತ್ಪನ್ನಗಳು ದೇಶಕ್ಕೆ ಪರಿಚಯವಾಗಲಿದೆ. ಆರ್​ಸಿಬಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ, ಹಾಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಉತ್ಪನ್ನ ಪರಿಚಯವಾಗಲಿದೆ. ವಿಚಾಟ್​ ​ಕೊಹ್ಲಿ, ರಜತ್​ ಪಾಟಿದಾರ್, ದೇವದತ್ತ ಪಡಿಕಲ್​ರಿಂದ KMF ಉತ್ಪನ್ನ ಪ್ರಚಾರಕ್ಕೆ ಮುಂದಾಗಿದ್ದೇವೆ.​ 4 ಕೋಟಿ ರೂ ವೆಚ್ಚದಲ್ಲಿ KMF ಒಂದು ವರ್ಷದ ಟೆಂಡರ್ ಪಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಯುದ್ಧದಿಂದಾಗಿ ನಂದಿನಿ ಉತ್ಪನ್ನಗಳಿಗೆ ದೊಡ್ಡ ಎಫೆಕ್ಟ್ ಆಗಿಲ್ಲ

ಇನ್ನು ಇರಾನ್​ ಹಾಗೂ ಅಮೆರಿಕ, ಇಸ್ರೇಲ್​ ನಡುವಿನ ಯುದ್ಧದಿಂದ ನಂದಿನಿ ಉತ್ಪನ್ನಗಳಿಗೆ ಎಫೆಕ್ಟ್ ವಿಚಾರವಾಗಿ ಮಾತನಾಡಿದ ಅವರು, ಯುದ್ಧದಿಂದ ಹಾಲಿನ ಮಾರಾಟದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. 4-5 ಸಾವಿರ ಲೀಟರ್​ ಹಾಲು ಮಾರಾಟ ಮಾತ್ರ ಕಡಿಮೆಯಾಗಿದೆ. ಯುದ್ಧದಿಂದಾಗಿ ನಂದಿನಿ ಉತ್ಪನ್ನಗಳಿಗೆ ದೊಡ್ಡ ಎಫೆಕ್ಟ್ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಇನ್ನೆರಡು ದಿನ ಕಳೆದ್ರೆ ನಂದಿನಿ ಉತ್ಪನ್ನಗಳೂ ಸಿಗೋದು ಡೌಟ್! ಕೆಎಂಎಫ್​ಗೂ ಎದುರಾಯ್ತು ಸಂಕಷ್ಟ

ಟಿಟಿಡಿ ತುಪ್ಪದ ಟೆಂಡರ್​ನಲ್ಲಿ ಮಾತುಕಥೆ ನಡೆದಿದೆ. ಟೆಂಡರ್ ಹಾಕಿದ್ದೇವೆ ಇನ್ನು ಅಂತಿಮ ಆಗಿಲ್ಲ. ನಮ್ಮಲ್ಲಿ ಉತ್ಪಾದನೆ ಸಾಕಷ್ಟಿದೆ. ಟಿಟಿಡಿಗೆ ಬೇಕಾದಷ್ಟು ತುಪ್ಪ ಪೂರೈಕೆ ಮಾಡಲು ಶಕ್ತವಾಗಿದ್ದೇವೆ ಎಂದು KMF​ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದು, ಕರ್ನಾಟಕದ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಕಳೆದ ಐಪಿಎಲ್ ಸೀಸನ್‌ನ ಚಾಂಪಿಯನ್ ತಂಡ ಆರ್‌ಸಿಬಿಯ ಅಧಿಕೃತ ಡೈರಿ ಪಾಲುದಾರನಾಗಿದೆ. ನಂದಿನಿಯ ವಿಶ್ವಾಸಾರ್ಹತೆ ಮತ್ತು ಆರ್‌ಸಿಬಿಯ ಕ್ರೀಡಾ ಬದ್ಧತೆ ಈ ಬಾರಿಯ ಐಪಿಎಲ್‌ನ ಆಕರ್ಷಣೆಯ ಕೇಂದ್ರಬಿಂದುವಾಗಲಿದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:17 pm, Tue, 24 March 26

Follow Us
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ