AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ; ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು

ನಂದಿನಿ ಹಾಲಿನ ದರ ಏರಿಕೆ ಬಗ್ಗೆಯೂ ಚರ್ಚೆ ಆಗುತ್ತಿದೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಕೂಡ ಹೇಳಿದ್ದಾರೆ.

ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ; ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jun 21, 2023 | 2:55 PM

Share

ಬೆಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಳದ (KMF) ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭೀಮಾ ನಾಯ್ಕ್ ಅವರು ನಂದಿನಿ ಹಾಲಿನ (Nandini Milk) ದರ ಹೆಚ್ಚಳದ ಸುಳಿವು ನೀಡಿದ್ದಾರೆ. ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ ಎಂದು ಅವರು ಬೆಂಗಳೂರಿನಲ್ಲಿ ಬುಧವಾರ ತಿಳಿಸಿದ್ದಾರೆ. ಹಾಲಿನ ದರ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸುತ್ತೇವೆ. ನಂತರ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ದರ ಹೆಚ್ಚಿಸುವುದಲ್ಲದೆ, ಗುಣಮಟ್ಟದ ಹಾಲು, ಮೊಸರು, ತುಪ್ಪ ಗ್ರಾಹಕರಿಗೆ ಒದಗಿಸಲು ಆದ್ಯತೆ ನೀಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಹಾಲು ಉತ್ಪಾದಕರಿಗೆ ನೀಡುವ ಮೊತ್ತ ಏರಿಕೆಗೆ ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಬೆಂಗಳೂರಿನಲ್ಲಿ ಹೇಳಿದ್ದಾರೆ. ರೈತರಿಂದ ಖರೀದಿಸುವ ಹಾಲಿನ ದರ ಏರಿಕೆ ಬಗ್ಗೆ ಚಿಂತನೆ ನಡೆಸಲಾಗಿದೆ. ನಮ್ಮ ರಾಜ್ಯದಲ್ಲಿಯೂ ಉತ್ತಮವಾದ ಹೈನುಗಾರಿಕೆ ಇದೆ. ರೈತರಿಗೆ ಹೆಚ್ಚಿನ ಲಾಭ ನೀಡುವ ಕಡೆ ಗಮನ ಹರಿಸುತ್ತೇವೆ. ಮುಖ್ಯಮಂತ್ರಿಗಳ ಜತೆ ಚರ್ಚಿಸಿ ರೈತರಿಗೆ ಅನುಕೂಲವಾಗುವಂತೆ ಮಾಡುತ್ತೇವೆ. ನಂದಿನಿ ಹಾಲಿನ ದರ ಏರಿಕೆ ಬಗ್ಗೆಯೂ ಚರ್ಚೆ ಆಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಅವರ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊನೆಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿತ್ತು. ಈ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಯಾರೂ ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: KMF Chairman: ಕೊನೆಗೂ ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್​ಗೆ ಒಲಿದ ಕೆಎಂಎಫ್ ಅಧ್ಯಕ್ಷ ಹುದ್ದೆ

ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಲು ಇತ್ತೀಚೆಗೆ ಒಕ್ಕೂಟ ಮುಂದಾಗಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಹಾಲಿನ ಪ್ರೋತ್ಸಾಹ ಧನ ಮುಂದುವರೆಸಲು ನಿರ್ಧರಿಸಿತ್ತು. ಆದರೆ, ಗ್ರಾಹಕರಿಗೆ ದರ ಹೆಚ್ಚಳದ ಶಾಕ್ ನೀಡುವ ಸುಳಿವು ನೀಡಿತ್ತು.

ನಂದಿನಿ ಹಾಲಿನ ದರ ಪರಿಷ್ಕರಿಸುವಂತೆ ಹಾಲು ಒಕ್ಕೂಟಗಳು ಪಟ್ಟು ಹಿಡಿದಿವೆ. ಲೀಟರ್ ಹಾಲಿನ ದರ 5 ರೂಪಾಯಿ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಮೂಲ್ ಅಧ್ಯಕ್ಷ ನರಸಿಂಹ ಮೂರ್ತಿ ಇತ್ತೀಚೆಗಷ್ಟೇ ‘ಟಿವಿ9’ಗೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Wed, 21 June 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ