AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ; ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು

ನಂದಿನಿ ಹಾಲಿನ ದರ ಏರಿಕೆ ಬಗ್ಗೆಯೂ ಚರ್ಚೆ ಆಗುತ್ತಿದೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಕೂಡ ಹೇಳಿದ್ದಾರೆ.

ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ; ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jun 21, 2023 | 2:55 PM

Share

ಬೆಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಳದ (KMF) ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭೀಮಾ ನಾಯ್ಕ್ ಅವರು ನಂದಿನಿ ಹಾಲಿನ (Nandini Milk) ದರ ಹೆಚ್ಚಳದ ಸುಳಿವು ನೀಡಿದ್ದಾರೆ. ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ ಎಂದು ಅವರು ಬೆಂಗಳೂರಿನಲ್ಲಿ ಬುಧವಾರ ತಿಳಿಸಿದ್ದಾರೆ. ಹಾಲಿನ ದರ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸುತ್ತೇವೆ. ನಂತರ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ದರ ಹೆಚ್ಚಿಸುವುದಲ್ಲದೆ, ಗುಣಮಟ್ಟದ ಹಾಲು, ಮೊಸರು, ತುಪ್ಪ ಗ್ರಾಹಕರಿಗೆ ಒದಗಿಸಲು ಆದ್ಯತೆ ನೀಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಹಾಲು ಉತ್ಪಾದಕರಿಗೆ ನೀಡುವ ಮೊತ್ತ ಏರಿಕೆಗೆ ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಬೆಂಗಳೂರಿನಲ್ಲಿ ಹೇಳಿದ್ದಾರೆ. ರೈತರಿಂದ ಖರೀದಿಸುವ ಹಾಲಿನ ದರ ಏರಿಕೆ ಬಗ್ಗೆ ಚಿಂತನೆ ನಡೆಸಲಾಗಿದೆ. ನಮ್ಮ ರಾಜ್ಯದಲ್ಲಿಯೂ ಉತ್ತಮವಾದ ಹೈನುಗಾರಿಕೆ ಇದೆ. ರೈತರಿಗೆ ಹೆಚ್ಚಿನ ಲಾಭ ನೀಡುವ ಕಡೆ ಗಮನ ಹರಿಸುತ್ತೇವೆ. ಮುಖ್ಯಮಂತ್ರಿಗಳ ಜತೆ ಚರ್ಚಿಸಿ ರೈತರಿಗೆ ಅನುಕೂಲವಾಗುವಂತೆ ಮಾಡುತ್ತೇವೆ. ನಂದಿನಿ ಹಾಲಿನ ದರ ಏರಿಕೆ ಬಗ್ಗೆಯೂ ಚರ್ಚೆ ಆಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಅವರ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊನೆಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿತ್ತು. ಈ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಯಾರೂ ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: KMF Chairman: ಕೊನೆಗೂ ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್​ಗೆ ಒಲಿದ ಕೆಎಂಎಫ್ ಅಧ್ಯಕ್ಷ ಹುದ್ದೆ

ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಲು ಇತ್ತೀಚೆಗೆ ಒಕ್ಕೂಟ ಮುಂದಾಗಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಹಾಲಿನ ಪ್ರೋತ್ಸಾಹ ಧನ ಮುಂದುವರೆಸಲು ನಿರ್ಧರಿಸಿತ್ತು. ಆದರೆ, ಗ್ರಾಹಕರಿಗೆ ದರ ಹೆಚ್ಚಳದ ಶಾಕ್ ನೀಡುವ ಸುಳಿವು ನೀಡಿತ್ತು.

ನಂದಿನಿ ಹಾಲಿನ ದರ ಪರಿಷ್ಕರಿಸುವಂತೆ ಹಾಲು ಒಕ್ಕೂಟಗಳು ಪಟ್ಟು ಹಿಡಿದಿವೆ. ಲೀಟರ್ ಹಾಲಿನ ದರ 5 ರೂಪಾಯಿ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಮೂಲ್ ಅಧ್ಯಕ್ಷ ನರಸಿಂಹ ಮೂರ್ತಿ ಇತ್ತೀಚೆಗಷ್ಟೇ ‘ಟಿವಿ9’ಗೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Wed, 21 June 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ