AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandini Ghee: ಸಭೆ ನಡೆಸಿ ನಂದಿನಿ ತುಪ್ಪದ ದರ ಕುರಿತು ಚರ್ಚಿಸೋಣ: ಟಿಟಿಡಿಗೆ ಪತ್ರ ಬರೆದ ಕೆಎಂಎಫ್​

ಬೆಲೆ ವಿಚಾರವಾಗಿ ತಿರುಪತಿ ದೇವಾಲಯದ ಲಡ್ಡು ತಯಾರಿಕೆಗೆ ಬಳಸುತ್ತಿದ್ದ ನಂದಿನಿ ತುಪ್ಪದ ಪೂರೈಕೆಯನ್ನು ಕರ್ನಾಟಕ ಸರ್ಕಾರವು ಸ್ಥಗಿತಗೊಳಿಸಿದೆ. ಇದರ ಬೆನ್ನಲ್ಲೇ ಟಿಟಿಡಿಗೆ ಕೆಎಂಎಫ್ ಪತ್ರ ಬರೆದಿದೆ.

Nandini Ghee: ಸಭೆ ನಡೆಸಿ ನಂದಿನಿ ತುಪ್ಪದ ದರ ಕುರಿತು ಚರ್ಚಿಸೋಣ: ಟಿಟಿಡಿಗೆ ಪತ್ರ ಬರೆದ ಕೆಎಂಎಫ್​
ನಂದಿನ ತುಪ್ಪ ಪೂರೈಕೆ ವಿಚಾರವಾಗಿ ಟಿಟಿಡಿಗೆ ಪತ್ರ ಬರೆದ ಕೆಎಂಎಫ್
Shivaraj
| Edited By: |

Updated on:Aug 03, 2023 | 3:51 PM

Share

ಬೆಂಗಳೂರು, ಆಗಸ್ಟ್ 3: ತಿರುಪತಿ ತಿರುಮಲ ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪ (Nandini Ghee) ಪೂರೈಕೆ ಮಾಡುವುದಿಲ್ಲ ಎಂಬ ವಿಚಾರದ ಬೆನ್ನಲ್ಲೇ, ಟಿಟಿಡಿಗೆ (TTD) ಪತ್ರ ಬರೆದ ಕೆಎಂಎಫ್ (KMF), ನಾವು ನಿಮಗೆ ತುಪ್ಪ ಪೂರೈಕೆ ಮಾಡಲು ತುಂಬಾ ಉತ್ಸುಕರಾಗಿದ್ದೇವೆ. ಆದರೆ ನಮ್ಮ ಜೊತೆ ಸಭೆ ನಡೆಸಿ ದರದ ಬಗ್ಗೆ ಚರ್ಚಿಸುವಂತೆ ಸಲಹೆ ನೀಡಿಡಿದೆ.

ಟಿಟಿಡಿಯ ಕಾರ್ಯನಿರ್ವಾಹಕ ಅಧಿಕಾರಿಗೆ ಬರೆದ ಪತ್ರದಲ್ಲಿ, “ನಾವು ಪ್ರತಿ ವರ್ಷ 30 ಸಾವಿರ ಮೆಟ್ರಿಕ್ ಟನ್ ತುಪ್ಪ ಉತ್ಪಾದನೆ ಮಾಡುತ್ತೇವೆ. ನಾವು ನಿಮಗೆ ತುಪ್ಪ ಪೂರೈಕೆ ಮಾಡಲು ತುಂಬಾ ಉತ್ಸುಕರಾಗಿದ್ದೇವೆ. ಒಂದು ಸಭೆಯನ್ನು ನಮ್ಮ ಜೊತೆ ಆಯೋಜನೆ ಮಾಡಿ ದರದ ಬಗ್ಗೆ ಚರ್ಚೆ ಮಾಡೋಣ” ಎಂದು ಹೇಳಲಾಗಿದೆ.

ಇದನ್ನೂ ಓದಿ: Nandini Milk: ಟಾಪ್ 10 ಬ್ರ್ಯಾಂಡ್‌ ರ‍್ಯಾಂಕಿಂಗ್‌ನಲ್ಲಿ ಮೇಲಕ್ಕೇರಿದ ನಮ್ಮ ಕರ್ನಾಟಕದ ಹೆಮ್ಮೆಯ ನಂದಿನಿ

ನಮ್ಮದು ಸಹಕಾರ ಸಂಸ್ಥೆ ಯಾಗಿದ್ದು, ಟೆಂಡರ್​ನಲ್ಲಿ ಭಾಗಿಯಾಗಿಲ್ಲ. ತುಂಬಾ ಗುಣಮಟ್ಟದ ತುಪ್ಪವನ್ನು ನಂದಿನಿ ಗ್ರಾಹಕರಿಗೆ ತಲುಪಿಸುತ್ತಾ ಬಂದಿದೆ. ಹೀಗಾಗಿ ಟಿಟಿಡಿಗೂ ಕೂಡ ತುಪ್ಪ ನೀಡಲು ನಾವು ಖುಷಿಯಿಂದ ಕಾತರರಾಗಿದ್ದೇವೆ. ಒಂದು ಸಭೆಯನ್ನು ಆಯೋಜನೆ ಮಾಡಿ ದರದ ಬಗ್ಗೆ ಚರ್ಚಿಸೋಣ ಎಂದು ಹೇಳಿದೆ.

ಇಷ್ಟು ದಿನ ತಿರುಪತಿ ಲಡ್ಡು ತಯಾರಿಕೆಗಾಗಿ ಸರಬರಾಜು ಆಗುತ್ತಿದ್ದ ತುಪ್ಪವನ್ನು ಇನ್ನುಮುಂದೆ ಕಳುಹಿಸಿಕೊಡಲಾಗುವುದಿಲ್ಲ ಎಂದು ಕೆಎಂಎಫ್​ ಅಧ್ಯಕ್ಷ ಭೀಮಾ ನಾಯಕ್ ಹೇಳಿದ್ದರು. ಇಷ್ಟು ದೇವಸ್ಥಾನಕ್ಕೆಂದು ರಿಯಾಯಿತಿ ದರದಲ್ಲಿ ತುಪ್ಪ ಪೂರೈಕೆ ಮಾಡಲಾಗುತ್ತಿತ್ತು. ತಿರುಪತಿಗೆ 6 ತಿಂಗಳಿಗೆ 14 ಲಕ್ಷ ಕೆಜಿಯಷ್ಟು ತುಪ್ಪ ನೀಡಬೇಕು. ಆದರೆ ಈ ಬಾರಿ ರಿಯಾಯಿತಿ ದರದಲ್ಲಿ ನಂದಿನಿ ತುಪ್ಪ ನೀಡುವ ಟೆಂಡರ್​ ಕೈಬಿಟ್ಟಿದ್ದು, ಕಡಿಮೆ ಬೆಲೆಗೆ ತುಪ್ಪ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಕೆಎಂಎಫ್​ ಹೇಳಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:48 pm, Thu, 3 August 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ