AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಿಂದ ಧಾರಾವಾಡಕ್ಕೆ ಸಿಹಿರುಚಿಯ ಪೇಡಾ ಬಂದಿದ್ದು ಹೇಗೆ?

177 ವರ್ಷಗಳಷ್ಟು ಹಳೆಯದಾದ ಧಾರವಾಡ ಪೇಢಾವನ್ನು ಅತ್ಯುತ್ತಮವಾದ ,ಶುದ್ಧ ತುಪ್ಪ ಮತ್ತು ಸಕ್ಕರೆಯನ್ನು ಬಳಸಿ ತಯಾರಿಸಲಾಗುತ್ತದೆ. ಧಾರವಾಡದ ಸ್ಥಳೀಯ ಪ್ರದೇಶಗಳಿಂದ ಸಂಗ್ರಹಿಸಿದ ಹಾಲನ್ನು ಬಳಸಿ ಖೋಯಾವನ್ನು ತಯಾರಿಸಲಾಗುತ್ತದೆ. ಇದನ್ನು ಸಿದ್ಧಪಡಿಸಲು ಬರೋಬ್ಬರಿ ನಾಲ್ಕು ಗಂಟೆ ಬೇಕಾಗುತ್ತದೆ

ಉತ್ತರ ಪ್ರದೇಶದಿಂದ ಧಾರಾವಾಡಕ್ಕೆ ಸಿಹಿರುಚಿಯ ಪೇಡಾ ಬಂದಿದ್ದು ಹೇಗೆ?
ಧಾರವಾಡ ಪೇಡಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 25, 2024 | 12:11 PM

Share

ಪೇಡಾ ಅಂದ ಕೂಡಲೇ ನೆನಪಾಗುವುದೇ  ಧಾರವಾಡ ಪೇಡಾ. ಕಂದು ಬಣ್ಣದ, ನಿರ್ದಿಷ್ಟ ಆಕೃತಿಯನ್ನೂ ಹೊಂದಿರದ ಪುಟ್ಟ ಮಕ್ಕಳು ಕೈಯಲ್ಲಿ ಉಂಡೆ ಮಾಡಿದಂತೆ ಕಾಣುವ ಸಿಹಿತಿಂಡಿಯೇ ಪೇಡಾ. ನೋಡಿದ ಕೂಡಲೇ ಬಾಯಲ್ಲಿ ನೀರೂರುವಂತೆ ಮಾಡುವ ಆಕೃತಿ ಅದಕ್ಕಿಲ್ಲ. ಆದರೆ ಬಾಯಲ್ಲಿಟ್ಟರೆ ಆ ರುಚಿಗೆ ಸರಿಸಾಟಿ ಎಂದೆನಿಸುವಂತದ್ದು ಬೇರೆ ಯಾವುದೂ ಇಲ್ಲ. ಅಂದಹಾಗೆ ಈ ಅದ್ಭುತ ರುಚಿಯ ಸಿಹಿತಿಂಡಿ ಧಾರವಾಡಕ್ಕೆ ಪೇಡಾ ಬಂದಿದ್ದು ಹೇಗೆ? ಈ  ಬಗ್ಗೆ ಹುಡುಕಿದಾಗ ಸಿಕ್ಕಿದ ಮಾಹಿತಿ ಏನೆಂದರೆ 19 ನೇ ಶತಮಾನದ ಆರಂಭದಲ್ಲಿ ಉತ್ತರ ಪ್ರದೇಶದ ಉನ್ನಾವೊದಲ್ಲಿ ಪ್ಲೇಗ್ ಉಲ್ಬಣಗೊಂಡ ನಂತರ ಧಾರವಾಡಕ್ಕೆ ವಲಸೆ ಬಂದ ಠಾಕೂರ್ ಕುಟುಂಬ ಈ ಸಿಹಿತಿಂಡಿಯನ್ನು ತಯಾರಿಸಿ ವ್ಯಾಪಾರ ಪ್ರಾರಂಭಿಸಿತು. ಮೊದಲ ತಲೆಮಾರಿನ ಮಿಠಾಯಿ ವ್ಯಾಪಾರಿ ರಾಮ್ ರತನ್ ಸಿಂಗ್ ಠಾಕೂರ್ ಅವರು ಸ್ಥಳೀಯವಾಗಿ ಪೇಡಾಗಳನ್ನು ಉತ್ಪಾದಿಸಿ ಅವುಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದರು. ನಂತರ ಇದೇ ಕುಟುಂಬ ಈ ವ್ಯಾಪಾರವನ್ನು ವಿಸ್ತರಿಸಿತು. ಅವರ ಮೊಮ್ಮಗ ಬಾಬು ಸಿಂಗ್ ಠಾಕೂರ್ ಅವರು ತಮ್ಮ ಲೈನ್ ಬಜಾರ್ ಅಂಗಡಿಯಲ್ಲಿ ಕುಟುಂಬದ ವ್ಯವಹಾರವನ್ನು ಮತ್ತಷ್ಟು ಬೆಳೆಸಿದರು. ಈಗ ಇದೇ ಕುಟುಂಬದ 5ನೇ ತಲೆಮಾರು ಈ ಉದ್ಯಮ ನಡೆಸುತ್ತಿದೆ. ಧಾರವಾಡದ ಈ ಫೇಮಸ್ ಪೇಡಾ ಬಗ್ಗೆ ಮತ್ತಷ್ಟು ತಿಳಿಯೋಣ… ಪೇಡಾ ಹೇಗೆ ತಯಾರಿಸಲಾಗುತ್ತದೆ? ಧಾರವಾಡ ಮತ್ತು ಸುತ್ತಮುತ್ತಲಿನ ಗೌಳಿ ಸಮುದಾಯದವರು ಸಾಕುವ ಧಾರವಾಡದ ಎಮ್ಮೆಗಳ ಹಾಲಿನಿಂದ ಧಾರವಾಡ ಪೇಡಾ ತಯಾರಿಸಲಾಗುತ್ತದೆ. ರಾಮ್ ರತನ್ ಸಿಂಗ್ ಠಾಕೂರ್ ಮೊಮ್ಮಗ ಬಾಬು ಸಿಂಗ್ ಠಾಕೂರ್ ಅವರು ತಮ್ಮ ಲೈನ್ ಬಜಾರ್ ಅಂಗಡಿಯಲ್ಲಿ ಕುಟುಂಬದ ವ್ಯವಹಾರವನ್ನು ಮತ್ತಷ್ಟು...

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ